ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ ವ್ಯಕ್ತಿಗಳಿಂದ ರಸ್ತೆಯಲ್ಲಿರುವ ಮಾನ್ ಹೋಲ್ ಒಳಗೆ ಇಳಿಸಿ ಸ್ವಚ್ಛಗೊಳಿಸಿರುವುದು ಬೆಳಕಿಗೆ ಬಂದಿದೆ.

2024ರ ಡಿ. 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು 2025ರ ಜ.6 ರಂದು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯನ್ನು ಅಪರಿಚಿತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕರು ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ನಂತರ ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ. ದೂರಿನಲ್ಲಿ ಏನಿದೆ….?

ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಯಾರೊಬ್ಬ ಮನುಷ್ಯನನ್ನು ಮ್ಯಾನ್ ಹೋಲ್ ನಲ್ಲಿ ಇಳಿಸಿ ಸ್ವಚ್ಛಗೊಳಿಸುವುದು ಕಾನೂನಿನಂತೆ ಅಪರಾಧವಾಗಿರುತ್ತದೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಧುನಿಕ ಯಂತ್ರಗಳು ನಗರಸಭೆಯಲ್ಲಿ ಲಭ್ಯವಿದ್ದು, ಮ್ಯಾನ್ ಹೋಲ್ ಹಾಗೂ ಒಳಚರಂಡಿ ಕಟ್ಟಿಕೊಂಡಿರುವ ಬಗ್ಗೆ ಕಚೇರಿಗೆ ಬರುವ ದೂರುಗಳನ್ನು ಸದರಿ ಯಂತ್ರಗಳಿಂದ ಸ್ವಚ್ಛಗೊಳಿಸಲಾಗುತ್ತಿದೆ. ಮ್ಯಾನ್ ಹೋಲ್ ನಲ್ಲಿ ಮನುಷ್ಯನನ್ನು ಇಳಿಸಿ ಸ್ವಚ್ಛಗೊಳಿಸಿರುವುದು ಕಾನೂನಿನಂತೆ ಅಪರಾಧ. ಈ ಕುರಿತು ಕರಪತ್ರ ವಿತರಣೆ ಹಾಗೂ ಧ್ವನಿವರ್ಧಕದ ಮೂಲಕ ಪ್ರಚಾರವನ್ನು ಕೈಗೊಳ್ಳಲಾಗಿರುತ್ತದೆ. ಹಾಗಿದ್ದರೂ ಸಹ ಕಚೇರಿಗೆ ದೂರು ನೀಡದೇ ವ್ಯಕ್ತಿಯೊಬ್ಬರು ತಮ್ಮ ಮನೆ ಮುಂಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಅನಧಿಕೃತವಾಗಿ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಕಂಡು ಬಂದಿರುತ್ತದೆ.

ಸ್ಚಚ್ಛಗೊಳಿಸುವಂತೆ ಕಚೇರಿಗೆ ದೂರು ನೀಡಿದ್ದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಿ ತುರ್ತಾಗಿ ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಕಚೇರಿ ಗಮನಕ್ಕೆ ತರದೇ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಅಪರಾಧವಾಗಿರುತ್ತದೆ.

ಇದು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಅಪರಾಧವಾಗಿರುತ್ತದೆ, ಆದ್ದರಿಂದ ಮನೆ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆ ಬಳಿಕ ರಕ್ಷಕ್ ಬುಲೆಟ್ ಫಸ್ಟ್ ರಿಯಾಕ್ಟ್

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆಗೆ ಹಾಜರಾಗುವಂತೆ ಪೊಲೀಸ್ ನೋಟಿಸ್ ನ್ನು ರಕ್ಷಕ್ ಬುಲೆಟ್ ಗೆ ನೀಡಲಾಗುತ್ತು.…

8 hours ago

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣ: ವಿಚಾರಣೆಗೆ ಹಾಜರಾದ ರಕ್ಷಕ್ ಬುಲೆಟ್: ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ ವಿಚಾರಣೆ

ನಟ ಪ್ರಥಮ್ ಜೀವ ಬೆದರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ನಟ ರಕ್ಷಕ್ ಬುಲೆಟ್ ಇಂದು ವಿಚಾರಣೆಗೆ ಹಾಜರಾಗಿದ್ದರು. ಇನ್ಸ್ ಪೆಕ್ಟರ್ ಸಾಧಿಕ್…

10 hours ago

ಒಳಮೀಸಲಾತಿಗಾಗಿ ಆಗ್ರಹಿಸಿ ಜಿಲ್ಲಾಧಿಕಾರಿ ಕಚೇರಿ ಎದುರು ಅರೆಬೆತ್ತಲೆ ಧರಣಿ

ಜನಸಂಖ್ಯೆ ಆಧಾರದ ಮೇಲೆ ಒಳ ಮೀಸಲಾತಿ ನೀಡುವಂತೆ ರಾಜ್ಯ ಸರ್ಕಾರಗಳಿಗೆ ಆದೇಶ ನೀಡಿ ಇಂದಿಗೆ ಒಂದು ವರ್ಷ ಕಳೆದಿದೆ ಆದರೆ…

11 hours ago

ಜಿಲ್ಲೆಯಲ್ಲಿ ರಸಗೊಬ್ಬರ ಕೊರತೆ ಇಲ್ಲ- 10,165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ- ಜಿಲ್ಲಾಧಿಕಾರಿ ಎ.ಬಿ ಬಸವರಾಜು

ಜಿಲ್ಲೆಯಲ್ಲಿ 10.165 ಮೆಟ್ರಿಕ್ ಟನ್ ರಸಗೊಬ್ಬರ ಲಭ್ಯ ಇದ್ದು, ಬೇಡಿಕೆಗಿಂತ ಹೆಚ್ಚಿನ ರಸಗೊಬ್ಬರ ದಾಸ್ತಾನು ಇದೆ ಹಾಗಾಗಿ ರಸಗೊಬ್ಬರ ಕೊರತೆ…

12 hours ago

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅತ್ಯಾಚಾರ ಆರೋಪ ಕೇಸ್: ಅತ್ಯಾಚಾರ ಆರೋಪ ಸಾಬೀತು: ಪ್ರಜ್ವಲ್ ರೇವಣ್ಣ ದೋಷಿ ಎಂದು ಜನಪ್ರತಿನಿಧಿಗಳ ಕೋರ್ಟ್ ತೀರ್ಪು: ಶಿಕ್ಷೆಯ ಪ್ರಮಾಣ ನಾಳೆ ಪ್ರಕಟ

ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರ ಮೇಲಿದ್ದ ಮನೆಗೆಲಸದ ಮಹಿಳೆ ಮೇಲೆ ಅತ್ಯಾಚಾರ ಆರೋಪ ಸಾಬೀತಾಗಿದೆ. ಪ್ರಜ್ವಲ್ ರೇವಣ್ಣ ಅಪರಾಧಿ…

15 hours ago

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು: ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಚಿನ್ನಾಭರಣಗಳ ಕಳವು

ಬಸ್ ನಿಲ್ದಾಣದಲ್ಲಿ ಪ್ರಯಾಣಿಕರ ಸೋಗಿನಲ್ಲಿ ಬರುತ್ತಿದ್ದ ಸುಂದರ ಯುವತಿಯರು, ಪ್ರಯಾಣಿಕರ ಗಮನ ಬೇರೆಡೆ ಸೆಳೆದು ಬ್ಯಾಗ್ ನಲ್ಲಿದ್ದ ಚಿನ್ನಾಭರಣಗಳನ್ನ ಕ್ಷಣ…

20 hours ago