ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ ವ್ಯಕ್ತಿಗಳಿಂದ ರಸ್ತೆಯಲ್ಲಿರುವ ಮಾನ್ ಹೋಲ್ ಒಳಗೆ ಇಳಿಸಿ ಸ್ವಚ್ಛಗೊಳಿಸಿರುವುದು ಬೆಳಕಿಗೆ ಬಂದಿದೆ.

2024ರ ಡಿ. 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು 2025ರ ಜ.6 ರಂದು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯನ್ನು ಅಪರಿಚಿತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕರು ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ನಂತರ ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ. ದೂರಿನಲ್ಲಿ ಏನಿದೆ….?

ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಯಾರೊಬ್ಬ ಮನುಷ್ಯನನ್ನು ಮ್ಯಾನ್ ಹೋಲ್ ನಲ್ಲಿ ಇಳಿಸಿ ಸ್ವಚ್ಛಗೊಳಿಸುವುದು ಕಾನೂನಿನಂತೆ ಅಪರಾಧವಾಗಿರುತ್ತದೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಧುನಿಕ ಯಂತ್ರಗಳು ನಗರಸಭೆಯಲ್ಲಿ ಲಭ್ಯವಿದ್ದು, ಮ್ಯಾನ್ ಹೋಲ್ ಹಾಗೂ ಒಳಚರಂಡಿ ಕಟ್ಟಿಕೊಂಡಿರುವ ಬಗ್ಗೆ ಕಚೇರಿಗೆ ಬರುವ ದೂರುಗಳನ್ನು ಸದರಿ ಯಂತ್ರಗಳಿಂದ ಸ್ವಚ್ಛಗೊಳಿಸಲಾಗುತ್ತಿದೆ. ಮ್ಯಾನ್ ಹೋಲ್ ನಲ್ಲಿ ಮನುಷ್ಯನನ್ನು ಇಳಿಸಿ ಸ್ವಚ್ಛಗೊಳಿಸಿರುವುದು ಕಾನೂನಿನಂತೆ ಅಪರಾಧ. ಈ ಕುರಿತು ಕರಪತ್ರ ವಿತರಣೆ ಹಾಗೂ ಧ್ವನಿವರ್ಧಕದ ಮೂಲಕ ಪ್ರಚಾರವನ್ನು ಕೈಗೊಳ್ಳಲಾಗಿರುತ್ತದೆ. ಹಾಗಿದ್ದರೂ ಸಹ ಕಚೇರಿಗೆ ದೂರು ನೀಡದೇ ವ್ಯಕ್ತಿಯೊಬ್ಬರು ತಮ್ಮ ಮನೆ ಮುಂಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಅನಧಿಕೃತವಾಗಿ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಕಂಡು ಬಂದಿರುತ್ತದೆ.

ಸ್ಚಚ್ಛಗೊಳಿಸುವಂತೆ ಕಚೇರಿಗೆ ದೂರು ನೀಡಿದ್ದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಿ ತುರ್ತಾಗಿ ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಕಚೇರಿ ಗಮನಕ್ಕೆ ತರದೇ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಅಪರಾಧವಾಗಿರುತ್ತದೆ.

ಇದು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಅಪರಾಧವಾಗಿರುತ್ತದೆ, ಆದ್ದರಿಂದ ಮನೆ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಈ ಬಾರಿಯ ದಸರಾ ಉದ್ಘಾಟನೆ ಯಾರು ಮಾಡಿದರೆ ಉತ್ತಮ…..

ಇತ್ತೀಚೆಗೆ ಹೊಸದಾಗಿ ವಿಧಾನಪರಿಷತ್ ಸದಸ್ಯರಾಗಿ ಆಯ್ಕೆಯಾದ, ಡಾಕ್ಟರ್ ರಾಮ್ ಮನೋಹರ್ ಲೋಹಿಯಾ ವೇದಿಕೆಯ ಸಂಸ್ಥಾಪಕ ಅಧ್ಯಕ್ಷರಾದ ಶ್ರೀ ಮಳವಳ್ಳಿ ಶಿವಣ್ಣ…

3 hours ago

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

16 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

16 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

19 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

20 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

1 day ago