ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ ವ್ಯಕ್ತಿಗಳಿಂದ ರಸ್ತೆಯಲ್ಲಿರುವ ಮಾನ್ ಹೋಲ್ ಒಳಗೆ ಇಳಿಸಿ ಸ್ವಚ್ಛಗೊಳಿಸಿರುವುದು ಬೆಳಕಿಗೆ ಬಂದಿದೆ.

2024ರ ಡಿ. 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು 2025ರ ಜ.6 ರಂದು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯನ್ನು ಅಪರಿಚಿತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕರು ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ನಂತರ ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ. ದೂರಿನಲ್ಲಿ ಏನಿದೆ….?

ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಯಾರೊಬ್ಬ ಮನುಷ್ಯನನ್ನು ಮ್ಯಾನ್ ಹೋಲ್ ನಲ್ಲಿ ಇಳಿಸಿ ಸ್ವಚ್ಛಗೊಳಿಸುವುದು ಕಾನೂನಿನಂತೆ ಅಪರಾಧವಾಗಿರುತ್ತದೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಧುನಿಕ ಯಂತ್ರಗಳು ನಗರಸಭೆಯಲ್ಲಿ ಲಭ್ಯವಿದ್ದು, ಮ್ಯಾನ್ ಹೋಲ್ ಹಾಗೂ ಒಳಚರಂಡಿ ಕಟ್ಟಿಕೊಂಡಿರುವ ಬಗ್ಗೆ ಕಚೇರಿಗೆ ಬರುವ ದೂರುಗಳನ್ನು ಸದರಿ ಯಂತ್ರಗಳಿಂದ ಸ್ವಚ್ಛಗೊಳಿಸಲಾಗುತ್ತಿದೆ. ಮ್ಯಾನ್ ಹೋಲ್ ನಲ್ಲಿ ಮನುಷ್ಯನನ್ನು ಇಳಿಸಿ ಸ್ವಚ್ಛಗೊಳಿಸಿರುವುದು ಕಾನೂನಿನಂತೆ ಅಪರಾಧ. ಈ ಕುರಿತು ಕರಪತ್ರ ವಿತರಣೆ ಹಾಗೂ ಧ್ವನಿವರ್ಧಕದ ಮೂಲಕ ಪ್ರಚಾರವನ್ನು ಕೈಗೊಳ್ಳಲಾಗಿರುತ್ತದೆ. ಹಾಗಿದ್ದರೂ ಸಹ ಕಚೇರಿಗೆ ದೂರು ನೀಡದೇ ವ್ಯಕ್ತಿಯೊಬ್ಬರು ತಮ್ಮ ಮನೆ ಮುಂಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಅನಧಿಕೃತವಾಗಿ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಕಂಡು ಬಂದಿರುತ್ತದೆ.

ಸ್ಚಚ್ಛಗೊಳಿಸುವಂತೆ ಕಚೇರಿಗೆ ದೂರು ನೀಡಿದ್ದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಿ ತುರ್ತಾಗಿ ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಕಚೇರಿ ಗಮನಕ್ಕೆ ತರದೇ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಅಪರಾಧವಾಗಿರುತ್ತದೆ.

ಇದು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಅಪರಾಧವಾಗಿರುತ್ತದೆ, ಆದ್ದರಿಂದ ಮನೆ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಬಾಶೆಟ್ಟಿಹಳ್ಳಿ ಪಪಂಗೆ ಮೂವರು ನಾಮನಿರ್ದೇಶಿತ ಸದಸ್ಯರ ನೇಮಕ

ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯಿತಿಗೆ ಸರ್ಕಾರವು ಮೂವರು ನಾಮನಿರ್ದೇಶಿತ ಸದಸ್ಯರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. ಕರ್ನಾಟಕ ಪೌರಸಭೆಗಳ…

1 hour ago

ಗೌರಿ ಗಣೇಶ ಹಬ್ಬ: ಜಿಲ್ಲೆಯಾದ್ಯಾಂತ ಪಟಾಕಿ, ಡಿಜೆ ಸಂಪೂರ್ಣ ನಿಷೇಧ-ಪಿಒಪಿ ಗಣೇಶ ವಿಗ್ರಹಗಳ ತಯಾರಿಕೆ, ಸಂಗ್ರಹಣೆ, ಸಾಗಾಣಿಕೆ, ಮಾರಾಟ ನಿಷೇಧ: ಪರಿಸರ ಸ್ನೇಹಿ ಗಣೇಶ ಹಬ್ಬ ಆಚರಣೆಗೆ ಜಿಲ್ಲಾಧಿಕಾರಿ ಕರೆ

ಗೌರಿ-ಗಣೇಶ ಹಬ್ಬದ ಪ್ರಯುಕ್ತ ಜಿಲ್ಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಶಾಂತಿ ಸುವ್ಯವಸ್ಥೆ ಕಾಪಾಡುವುದರ ಜೊತೆಗೆ, ಸಾರ್ವಜನಿಕರು ಪರಿಸರಸ್ನೇಹಿಯಾಗಿ ಹಬ್ಬವನ್ನು…

2 hours ago

ಜೇನುತುಪ್ಪಕ್ಕೂ ವರುಣನ ಬರೆ! ಮಳೆ ಕೊರತೆ ಹಿನ್ನೆಲೆಯಲ್ಲಿ ಒಣಗಿದ ಸಸ್ಯಗಳು: ಆಹಾರ ಅರಸಿ ಕಿಮೀಗಟ್ಟಲೆ ಜೇನುಹುಳುಗಳ ವಲಸೆ: ಜೇನುತುಪ್ಪ ಉತ್ಪಾದನೆಗೆ ಹೊಡೆತ

ಬೆಂಗಳೂರು ಗ್ರಾಮಾಂತರ: ಬರದ ಪರಿಣಾಮ ಕೃಷಿ ಹಾಗೂ ತೋಟಗಾರಿಕಾ ಬೆಳೆಗಳಿಗೆ ಮಾತ್ರ ಸೀಮಿತವಾಗಿಲ್ಲ. ಜೇನು ಕೃಷಿಯ ಮೇಲೂ ಬರದ ಛಾಯೆ…

6 hours ago

ಡಿಕೆ 100 ದಿನ, ನೆನಪಾದ ಮೋದಿ…

ಕರ್ನಾಟಕದ ಮಾನ್ಯ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರ 100ನೇ ದಿನದ ಸಾಧನಾ ಸಂಭ್ರಮದ ಕಾರ್ಯಕ್ರಮ ವಿಧಾನಸೌಧದ ಬ್ಯಾಂಕ್ವೆಟ್ ಹಾಲಿನಲ್ಲಿ…

11 hours ago

ಮಳೆ ಕೈಕೊಟ್ಟಿತು, ರಾಗಿ ಕೈಬಿಟ್ಟಿತು: ಬೆಳೆಗೇ ಟ್ರ್ಯಾಕ್ಟರ್ ಹರಿಸಿದ ರೈತ: ದೊಡ್ಡಬಳ್ಳಾಪುರವನ್ನೂ ಬರಪೀಡಿತ ತಾಲೂಕು ಎಂದು ಘೋಷಿಸಲು ಆಗ್ರಹ: 3.5 ಎಕರೆ ರಾಗಿ ಬೆಳೆ ನಾಶ

ದೊಡ್ಡಬಳ್ಳಾಪುರ: ಮಳೆ ಕೈಕೊಟ್ಟ ಪರಿಣಾಮ ಬಿತ್ತಿದ್ದ ರಾಗಿ ಬೆಳೆ ಒಣಗಿ, ಕೈಗೆ ಬಾರದ ಸ್ಥಿತಿಗೆ ತಲುಪಿದ ಹಿನ್ನೆಲೆಯಲ್ಲಿ ಬೇಸರಗೊಂಡ ರೈತರೊಬ್ಬರು…

22 hours ago

ಚಿಕ್ಕನಹಳ್ಳಿ ಡೇರಿಗೆ 2.07 ಲಕ್ಷ ನಿವ್ವಳ ಲಾಭ: ಹೈನುಗಾರಿಕೆ ರೈತರ ಆರ್ಥಿಕ ಮೂಲ- ಸಿ.ಅಮರೇಶ್

ಕೋಲಾರ: ತಾಲೂಕಿನ ವಕ್ಕಲೇರಿ ಹೋಬಳಿಯ ಚಿಕ್ಕನಹಳ್ಳಿ ಹಾಲು ಉತ್ಪಾದಕರ ಸಹಕಾರ ಸಂಘವು 2025–26ನೇ ಸಾಲಿನಲ್ಲಿ ₹2.07 ಲಕ್ಷ ನಿವ್ವಳ ಲಾಭ…

1 day ago