ಚಿಕ್ಕಬಳ್ಳಾಪುರದಲ್ಲಿ ಅನಿಷ್ಟ ಪದ್ದತಿ ಇನ್ನೂ ಜೀವಂತ: ಶೌಚಗೃಹದಿಂದ ಒಳಚರಂಡಿಗೆ ಸಂಪರ್ಕ ಕಲ್ಪಿಸುವ ಪೈಪ್ ಲೈನ್ ಗೆ ಕಾರ್ಮಿಕನನ್ನು ಇಳಿಸಿ ಸ್ವಚ್ಛ

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರದ ವೆಂಕಟಗಿರಿಕೋಟೆ ನಿವಾಸಿಯೊಬ್ಬರು ತಮ್ಮ ಮನೆಯ ಶೌಚಾಲಯದ ಒಳಚರಂಡಿ ಸಂಪರ್ಕದ ಪೈಪ್ ಲೈನ್ ಬ್ಲಾಕ್ ಆಗಿರುವುದನ್ನು ಖಾಸಗಿ ವ್ಯಕ್ತಿಗಳಿಂದ ರಸ್ತೆಯಲ್ಲಿರುವ ಮಾನ್ ಹೋಲ್ ಒಳಗೆ ಇಳಿಸಿ ಸ್ವಚ್ಛಗೊಳಿಸಿರುವುದು ಬೆಳಕಿಗೆ ಬಂದಿದೆ.

2024ರ ಡಿ. 22ರಂದು ನಡೆದಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ. ಈ ಕುರಿತು 2025ರ ಜ.6 ರಂದು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿರುತ್ತದೆ.

ಘಟನೆಯನ್ನು ಅಪರಿಚಿತರೊಬ್ಬರು ಮೊಬೈಲ್ ನಲ್ಲಿ ಸೆರೆ ಹಿಡಿದಿದ್ದಾರೆ. ಘಟನಾ ಸ್ಥಳಕ್ಕೆ ಚಿಂತಾಮಣಿ ನಗರಸಭೆ ಕಿರಿಯ ಆರೋಗ್ಯ ನಿರೀಕ್ಷಕರು ವಿಜಯ್ ಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಪರಿಶೀಲನೆ ನಡೆಸಿದ ನಂತರ ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ದಾಖಲು ಮಾಡುತ್ತಾರೆ. ದೂರಿನಲ್ಲಿ ಏನಿದೆ….?

ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಯಾರೊಬ್ಬ ಮನುಷ್ಯನನ್ನು ಮ್ಯಾನ್ ಹೋಲ್ ನಲ್ಲಿ ಇಳಿಸಿ ಸ್ವಚ್ಛಗೊಳಿಸುವುದು ಕಾನೂನಿನಂತೆ ಅಪರಾಧವಾಗಿರುತ್ತದೆ.

ಮ್ಯಾನ್ ಹೋಲ್ ಸ್ವಚ್ಛಗೊಳಿಸಲು ಆಧುನಿಕ ಯಂತ್ರಗಳು ನಗರಸಭೆಯಲ್ಲಿ ಲಭ್ಯವಿದ್ದು, ಮ್ಯಾನ್ ಹೋಲ್ ಹಾಗೂ ಒಳಚರಂಡಿ ಕಟ್ಟಿಕೊಂಡಿರುವ ಬಗ್ಗೆ ಕಚೇರಿಗೆ ಬರುವ ದೂರುಗಳನ್ನು ಸದರಿ ಯಂತ್ರಗಳಿಂದ ಸ್ವಚ್ಛಗೊಳಿಸಲಾಗುತ್ತಿದೆ. ಮ್ಯಾನ್ ಹೋಲ್ ನಲ್ಲಿ ಮನುಷ್ಯನನ್ನು ಇಳಿಸಿ ಸ್ವಚ್ಛಗೊಳಿಸಿರುವುದು ಕಾನೂನಿನಂತೆ ಅಪರಾಧ. ಈ ಕುರಿತು ಕರಪತ್ರ ವಿತರಣೆ ಹಾಗೂ ಧ್ವನಿವರ್ಧಕದ ಮೂಲಕ ಪ್ರಚಾರವನ್ನು ಕೈಗೊಳ್ಳಲಾಗಿರುತ್ತದೆ. ಹಾಗಿದ್ದರೂ ಸಹ ಕಚೇರಿಗೆ ದೂರು ನೀಡದೇ ವ್ಯಕ್ತಿಯೊಬ್ಬರು ತಮ್ಮ ಮನೆ ಮುಂಭಾಗದಲ್ಲಿ ಸ್ವಚ್ಛತೆ ಕೈಗೊಳ್ಳಲು ಅನಧಿಕೃತವಾಗಿ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಕಂಡು ಬಂದಿರುತ್ತದೆ.

ಸ್ಚಚ್ಛಗೊಳಿಸುವಂತೆ ಕಚೇರಿಗೆ ದೂರು ನೀಡಿದ್ದಲ್ಲಿ ಕಚೇರಿಯಲ್ಲಿ ಲಭ್ಯವಿರುವ ಸಕ್ಕಿಂಗ್ ಮತ್ತು ಜೆಟ್ಟಿಂಗ್ ಯಂತ್ರವನ್ನು ಬಳಸಿ ತುರ್ತಾಗಿ ಸ್ವಚ್ಛಗೊಳಿಸಲಾಗುತ್ತಿತ್ತು. ಆದರೆ ಕಚೇರಿ ಗಮನಕ್ಕೆ ತರದೇ ಮನುಷ್ಯನನ್ನು ಮ್ಯಾನ್ ಹೋಲ್ ಗೆ ಇಳಿಸಿರುವುದು ಅಪರಾಧವಾಗಿರುತ್ತದೆ.

ಇದು ಮ್ಯಾನುಯಲ್ ಸ್ಕ್ಯಾವೆಂಜರ್ಗಳ ನೇಮಕಾತಿ ನಿಷೇಧ ಮತ್ತು ಅವರ ಪುನರ್ವಸತಿ ಅಧಿನಿಯಮ 2013 ರನ್ವಯ ಅಪರಾಧವಾಗಿರುತ್ತದೆ, ಆದ್ದರಿಂದ ಮನೆ ಮಾಲೀಕರ ಮೇಲೆ ಕಾನೂನು ರೀತ್ಯಾ ಕ್ರಮ ಜರುಗಿಸಲು ಚಿಂತಾಮಣಿ ನಗರ ಪೋಲೀಸ್ ಠಾಣೆಯಲ್ಲಿ ದೂರು ನೀಡಲಾಗಿದೆ.

Ramesh Babu

Journalist

Recent Posts

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ……..

ಅತ್ಯಾಚಾರ ಗಂಡಿನ ಅಂತಿಮ ಯಾತ್ರೆಯಾಗಲಿ........ { ಕಾಠಿಣ್ಯ ಎನಿಸಿದರೆ ಕ್ಷಮೆ ಇರಲಿ ) ಅತ್ಯಾಚಾರವಂತೆ ಅತ್ಯಾಚಾರ ಎಲ್ಲೆಲ್ಲೂ, ಅದೂ ಸಾಮೂಹಿಕ…

1 hour ago

ಬಿಎಲ್‌ಒ ಕೆಲಸ ಬೇಡ: ಅಂಗನವಾಡಿಗಳಲ್ಲೇ ಎಲ್‌ಕೆಜಿ–ಯುಕೆಜಿ ಆರಂಭಕ್ಕೆ ಅಂಗನವಾಡಿ ನೌಕರರ ಸಂಘ ಒತ್ತಾಯ

ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್‌ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…

1 day ago

ಟ್ರಂಪ್ ಕಾರ್ಡ್…….

ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…

1 day ago

ಚಿಕ್ಕಮಧುರೆ ಶನಿಮಹಾತ್ಮ ದೇವಾಲಯ ಬಳಿ ಕ್ಯಾಂಟರ್ ಪಲ್ಟಿ: ರಸ್ತೆಬದಿಯ ಅಂಗಡಿಗಳು ಜಖಂ

ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…

1 day ago

ಹಾಲಿನ ಖರೀದಿ ದರ ಹೆಚ್ಚಳಕ್ಕೆ ರೈತರ ಬೃಹತ್ ಪ್ರತಿಭಟನೆ

ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್‌ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…

2 days ago

ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರ ಉನ್ನತೀಕರಣಕ್ಕೆ ಗುದ್ದಲಿ ಪೂಜೆ

ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್‌ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…

2 days ago