ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲೇ ನೇಣಿಗೆ ಶರಣಾಗಿರೋ ಕಾರು ಚಾಲಕ: “ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್  ಕಾರಣ” ಎಂದು ಡೆತ್ ನೋಟ್ ನಲ್ಲಿ ಉಲ್ಲೇಖ

ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಮರಕ್ಕೆ ನೇಣು ಹಾಕಿಕೊಂಡು ಜಿಲ್ಲಾ ಪಂಚಾಯಿತಿ ಮುಖ್ಯ ಲೆಕ್ಕಾಧಿಕಾರಿ ಕಾರು ಚಾಲಕ ಆತ್ಮಹತ್ಯೆ ಮಾಡಿಕೊಂಡಿಕೊಂಡಿರುವ ಘಟನೆ ನಡೆದಿದೆ.

ಬಾಬು.ಎಂ (33) ಆತ್ಮಹತ್ಯೆ ಮಾಡಿಕೊಂಡಿರುವ ವ್ಯಕ್ತಿ ಎಂದು ಗುರುತಿಸಲಾಗಿದೆ…

ಆತ್ಮಹತ್ಯೆ ಮಾಡಿಕೊಂಡಿರುವ ಸ್ಥಳದಲ್ಲಿ ಡೆತ್ ನೋಟ್ ಪತ್ತೆಯಾಗಿದ್ದು, “ನನ್ನ ಸಾವಿಗೆ ಸಂಸದ ಡಾ.ಕೆ. ಸುಧಾಕರ್  ಕಾರಣ” ಎಂದು ಬರೆಯಲಾಗಿದೆ ಎನ್ನಲಾಗಿದೆ…

ಮೃತ ಬಾಬು ಹೊರಗುತ್ತಿಗೆ ಆಧಾರದಲ್ಲಿ ಕೆಲಸ ನಿರ್ವಹಿಸುತ್ತಿದ್ದರು. ಆತ್ಮಹತ್ಯೆಗೆ ಸಂಸದ ಡಾ.ಕೆ.ಸುಧಾಕರ್, ಅವರ ಬೆಂಬಲಿಗರಾದ ನಾಗೇಶ್ ಎನ್. ಮತ್ತು ಮಂಜುನಾಥ್ ಕಾರಣ ಎಂದು ಡೆತ್ ನೋಟ್ ಬರೆದಿದ್ದಾರೆ ಎಂದು ತಿಳಿದುಬಂದಿದೆ.

‘ಸುಧಾಕ‌ರ್ ಸಚಿವರಾಗಿದ್ದ ವೇಳೆ ಅವರ ಬೆಂಬಲಿಗರಾದ ನಾಗೇಶ್ ಮತ್ತು ಮಂಜುನಾಥ್ ಖಾಯಂ ಸರ್ಕಾರಿ ಕೆಲಸ ಕೊಡಿಸುತ್ತೇವೆ ಅದಕ್ಕೆ 40 ಲಕ್ಷ ನೀಡಬೇಕು ಎಂದಿದ್ದರು. ನಾನು ನನ್ನ ಬಳಿ ಇದ್ದ ಹಣದ ಜೊತೆಗೆ ಸಾಲ ಮಾಡಿ ರೂ.25 ಲಕ್ಷ ನೀಡಿದ್ದೆ. ಆದರೆ, ಕೆಲಸ ಮಾತ್ರ ಕೊಡಿಸಲಿಲ್ಲ’ ಎಂದು ಡೆತ್‌ ನೋಟ್‌ನಲ್ಲಿ ಬರೆದಿದ್ದಾರೆ ಎಂದು ತಿಳಿದುಬಂದಿದೆ…

Leave a Reply

Your email address will not be published. Required fields are marked *

error: Content is protected !!