ಚಿಕ್ಕಬಳ್ಳಾಪುರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ: ಉದ್ಯಮಿಗಳನ್ನ ಕಿಡ್ಯ್ನಾಪ್ ಮಾಡಿ ಲಕ್ಷಾಂತರ ರೂ. ವಸೂಲಿ: ಕುಖ್ಯಾತ ಕಿಡ್ನಾಪರ್ಸ್‌ ಗ್ಯಾಂಗ್ ನ್ನ ಬಂಧಿಸಿದ ಪೊಲೀಸರು

ಕುಖ್ಯಾತ ಕಿಡ್ನಾಪರ್ಸ್‌ ಟಾರ್ಗೆಟ್ ಏನಿದ್ದರೂ ರಿಯಲ್ ಎಸ್ಟೇಟ್ ಕುಳಗಳು. ಉದ್ಯಮಿಗಳನ್ನೇ ಗುರಿಯಾಗಿಸಿಕೊಂಡು, ಕಿಡ್ನಾಪ್ ಮಾಡಿ ಅವರಿಂದ ಲಕ್ಷಾಂತ ರೂ. ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್. ಹಣ ವಸೂಲಿ ಮಾಡಿ ಬೇರೆ ರಾಜ್ಯಗಳಿಗೆ ಹೋಗಿ ತಲೆ ಮರಿಸಿಕೊಳ್ಳುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿಗಳಾಗಿದ್ದಾರೆ.

ಪೊಲೀಸ್ ಠಾಣೆಯ ಮುಂದೆ ಟೇಬಲ್ ಮೇಲೆ ಕಂತೆ ಕಂತೆ ಹಣದ ಕಟ್ಟುಗಳು, ಚಿನ್ನದ ಸರಗಳನ್ನು ಇಟ್ಟು ಆರೋಪಿಗಳ ತಲೆಗೆ ಟೋಪಿ ಹಾಕಿ ನಿಲ್ಲಿಸಿರುವ ದೃಶ್ಯಗಳು ಕಂಡು ಬಂದಿದ್ದು ಚಿಕ್ಕಬಳ್ಳಾಪುರ ಜಿಲ್ಲೆಯ ಎಸ್ಪಿ ಕಚೇರಿಯ ಮುಂದೆ. ಹೌದು, ಉದ್ಯಮಿಗಳನ್ನ ಗುರಿಯಾಗಿಸಿಕೊಂಡು ಕಿಡ್ನಾಪ್ ಮಾಡಿ ಅವರಿಂದ ಲಕ್ಷಾಂತರ ರುಪಾಯಿ ಹಣ ವಸೂಲಿ ಮಾಡುತ್ತಿದ್ದ ಗ್ಯಾಂಗ್ ನ್ನು ಚಿಕ್ಕಬಳ್ಳಾಪುರ ಪೊಲೀಸರು ಅರೆಸ್ಟ್ ಮಾಡಿದ್ದಾರೆ.

ಜು.20 ರಂದು ಚಿಕ್ಕಬಳ್ಳಾಪುರದ ಲೇಔಟ್ ನಲ್ಲಿ ವಾಕಿಂಗ್ ಮಾಡುತ್ತಿದ್ದ ವೇಳೆ ನವೀನ್ ಕುಮಾರ್ ಮತ್ತು ಜೂ18 ರಂದು ಸಮೀವುಲ್ಲಾ ರನ್ನು ಕಿಡ್ನಾಪ್ ಮಾಡಲಾಗಿತ್ತು. ಇವರಿಂದ 78 ಲಕ್ಷ ಹಣವನ್ನ ವಸೂಲಿ ಮಾಡಲಾಗಿತ್ತು. ಈ ಪ್ರಕರಣ ಕುರಿತು ನಂದಿಗಿರಿಧಾಮ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿತ್ತು. ಆರೋಪಿಗಳ ಪತ್ತೆಗಾಗಿ ವಿಶೇಷ ತಂಡವನ್ನು ರಚನೆ ಮಾಡಿ ಆರೋಪಿಗಳನ್ನು ಬಂಧನ ಮಾಡಲಾಗಿದೆ.

ಆರೋಪಿಗಳು ಬಹಳ ನಟೋರಿಯಸ್ ಇದ್ದ ಕಾರಣ, ಬಹಳ ನಾಜೂಕಾಗಿ ಆರೋಪಿಗಳಿಗಾಗಿ ಬಲೆ ಬೀಸಲಾಗಿತ್ತು. ಈ ಮೊದಲೇ ಬೇರೆ ಪೊಲೀಸ್ ಠಾಣೆಯ ಸಿಬ್ಬಂದಿ ಮೇಲೆ ಈ ಗ್ಯಾಂಗ್ ಅಟ್ಯಾಕ್ ಮಾಡಿತ್ತು. ಹಾಗಾಗಿ ಒಬ್ಬೊಬ್ಬರು ಒಂದು ಕಡೆ ತಲೆ ಮರೆಸಿಕೊಂಡಿದ್ದರು. ಕೆಲವು ಬೇರೆ ಬೇರೆ ರಾಜ್ಯಗಳಲ್ಲಿ ಅಡಗಿ ಕುಳಿತಿದ್ದರು.  ಚಿಕ್ಕಬಳ್ಳಾಪುರ ಪೊಲೀಸರು ಈಗ ಆರೋಪಿಗಳನ್ನ ಎಡೆಮುರಿ ಕಟ್ಟುವಲ್ಲಿ ಯಶಸ್ವಿಯಾಗಿದ್ದಾರೆ.

ಚಿಕ್ಕಬಳ್ಳಾಪುರ ನಗರದ ಬರ್ಕತ್ ವುಲ್ಲಾ, ಬೆಂಗಳೂರು ನಗರದ ಬಿಟಿಎಂ ಲೇಔಟ್ ನ ಲೋಹಿತ್ ಕುಮಾರ್, ಪ್ರವೀಣ ಅಲಿಯಾಸ್ ನೇಪಾಳಿ, ಕೋಲಾರದ ರಾಮಸಂದ್ರ ಸಂತೋಷ್, ಕೋಲಾರದ ಚಿನ್ನಾಪುರದ ವೆಂಕಟೇಶ್, ಬೆಂಗಳೂರಿನ ಎ.ಜೆ.ಕಾಲೋನಿಯ ಮಾರುತಿ ಪ್ರಸನ್ನ, ಬೆಂಗಳೂರಿನ ಹುಳಿಮಾವು ಭರತ್ ಕುಮಾರ್ ರನ್ನು ಪೊಲೀಸರು ಬಂಧಿಸಿದ್ದಾರೆ.

ಸದ್ಯ ಆರೋಪಿಗಳಿಂದ 41 ಲಕ್ಷ ರೂ, ನಗದು, ನಾಲ್ಕು ಕಾರು, ಒಂದು ಚಿನ್ನದ ಸರ, ವಿವಿಧ ಕಂಪನಿಯ ಮೊಬೈಲ್ ಗಳನ್ನು ವಶಕ್ಕೆ ಪಡೆದಿದ್ದಾರೆ. ಇವರ ಮೇಲೆ ಹೊರ ರಾಜ್ಯಗಳಲ್ಲಿಯೂ ಪ್ರಕರಣ ದಾಖಲಾಗಿದೆ. ಈ ಗ್ಯಾಂಗ್ ನ ಕೆಲವು ಸದಸ್ಯರು ಮಾಜಿ ಸಚಿವ ವರ್ತೂರ್ ಪ್ರಕಾಶ್ ಕಿಟ್ನಾಪ್ ಪ್ರಕರಣದಲ್ಲಿಯೂ ಭಾಗಿಯಾಗಿದ್ದು ಕಂಡು ಬಂದಿದೆ ಎನ್ನಲಾಗಿದೆ.

ಒಟ್ಟಾರೆ, ಉದ್ಯಮಗಳನ್ನೇ ಟಾರ್ಗೆಟ್ ಮಾಡಿ ಕಿಡ್ನಾಪ್ ಮಾಡುತ್ತಿದ್ದ ಗ್ಯಾಂಗ್ ಈಗ ಪೊಲೀಸರ ಅತಿಥಿಗಳಾಗಿದ್ದಾರೆ. ಇವರು ಇನ್ನಷ್ಟು ಜನರನ್ನು ಕಿಡ್ನಾಪ್ ಮಾಡುವ ಪ್ಲಾನ್ ಹೊಂದಿದ್ದರು. ಎಲ್ಲವನ್ನೂ ಈಗ ಪೊಲೀಸರು ತನಿಖೆ ನಡೆಸುತ್ತಿದ್ದಾರೆ.

Ramesh Babu

Journalist

Recent Posts

ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ ಗೂಡ್ಸ್ ವಾಹನ: ತಪ್ಪಿದ ಭಾರೀ ಅನಾಹುತ

ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…

8 hours ago

ಮದ್ಯಪಾನ, ಡ್ರಗ್ಸ್ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ- ಸಚಿವ ಕೆ.ಎಚ್ ಮುನಿಯಪ್ಪ

ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…

9 hours ago

ಅನ್ನದಾಸೋಹ ಮಾಡುವ ಮೂಲಕ ಸಂದೀಪ್ ಹುಟ್ಟುಹಬ್ಬ ಆಚರಿಸಿದ ಅಭಿಮಾನಿಗಳು

ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್‌ಬುಕ್, ಸಿಹಿ,…

11 hours ago

ರೈಲ್ವೆ ನಿಲ್ದಾಣದ ಬಳಿ ನವಜಾತ ಶಿಶುವಿನ ಮೃತದೇಹ ಪತ್ತೆ; ಸ್ಥಳಕ್ಕೆ ಪೊಲೀಸರು ಭೇಟಿ, ಪರಿಶೀಲನೆ

ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…

12 hours ago

ರಾಹುಲ್ ಗಾಂಧಿ ಕುರಿತು ಅವಹೇಳನಕಾರಿ ಹೇಳಿಕೆ ಖಂಡನೆ: ಶಾಸಕ ಯಶ್ ಪಾಲ್ ಆನಂದ್ ಸುವರ್ಣ ವಿರುದ್ಧ ಕ್ರಮಕ್ಕೆ ಆಗ್ರಹಿಸಿ ಕಾಂಗ್ರೆಸ್ ಪ್ರತಿಭಟನೆ

ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…

17 hours ago

ಮಳೆ ಕೈಕೊಟ್ಟು ಮುಂಗಾರು ಬಿತ್ತನೆ ಕುಂಠಿತ: ಶೇ.66ರಷ್ಟು ಮಳೆ ಕೊರತೆ; ಗುರಿಯ ಶೇ.3ರಷ್ಟು ಮಾತ್ರ ಬಿತ್ತನೆ ಪೂರ್ಣ

ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…

20 hours ago