ಚಿಕ್ಕಬಳ್ಳಾಪುರ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ- ಮಾಜಿ ಸಚಿವ ಡಾ.ಕೆ.ಸುಧಾಕರ್ ಆರೋಪ

ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.

ಇಂದಿನ ಪ್ರತಿಭಟನೆಯಲ್ಲಿ ನಿರೀಕ್ಷೆಗೂ ಮೀರಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ರೈತ ಮುಖಂಡರುಗಳು, ರೈತ ಪರ ಸಂಘಟನೆಗಳ ಪ್ರತಿನಿಧಿಗಳು, ಯುವಕರು ಹಾಗೂ ಅವರು ಸರ್ಕಾರದ ವಿರುದ್ಧ ವ್ಯಕ್ತಪಡಿಸಿದ ಆಕ್ರೋಶ, ಅಸಮಾಧಾನ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಕನ್ನಡಿ ಹಿಡಿದಂತಿತ್ತು ಎಂದರು.

ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.

ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.

Ramesh Babu

Journalist

Recent Posts

KPCC ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ನೇಮಕ

ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ(KPCC)ಯ ನೂತನ ಅಧ್ಯಕ್ಷರಾಗಿ ‌ಬಿ.ಕೆ ಹರಿಪ್ರಸಾದ್ ಅವರನ್ನು ನೇಮಕ ಮಾಡಲಾಗಿದೆ. ಡಿಕೆ ಶಿವಕುಮಾರ್ ಅವರು ಬುಧವಾರ…

12 hours ago

ಶಾಲಾ-ಕಾಲೇಜು ಹುಡುಗರಿಗೂ ಉಚಿತ ಬಸ್ ಪಾಸ್ ಘೋಷಿಸಿದ ಸಿಎಂ ಡಿಕೆಶಿ

ಡಿ.ಕೆ ಶಿವಕುಮಾರ್ ಅವರು ಬುಧವಾರ ರಾಜ್ಯದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಬೆನ್ನಲ್ಲೇ ರಾಜ್ಯದ ವಿದ್ಯಾರ್ಥಿಗಳಿಗೆ ಸಿಹಿ ಸುದ್ದಿ ನೀಡಿದ್ದಾರೆ.…

12 hours ago

ಎಸ್.ಐ.ಆರ್ ಬಗ್ಗೆ ಗೊಂದಲ, ಭಯ ಬೇಡ: ಮತದಾರರ ಪಟ್ಟಿ ಪರಿಷ್ಕರಣೆಗೆ ಸಾರ್ವಜನಿಕರ ಸಹಕಾರ ಅಗತ್ಯ- ಎಸಿ ಟಿ.ಆರ್ ಮಂಜುನಾಥ

ದೊಡ್ಡಬಳ್ಳಾಪುರ ತಾಲ್ಲೂಕಿನಲ್ಲಿ ಜೂನ್ 20 ರಿಂದ ಎಸ್‌ಐಆರ್‌ ಪ್ರಕ್ರಿಯೆ ಅಧಿಕೃತವಾಗಿ ಆರಂಭವಾಗಲಿದೆ. ತಾಲ್ಲೂಕಿನಲ್ಲಿ 2,23,457 ಮಂದಿ ಮತದಾರರಿದ್ದಾರೆ. ಈ ಪೈಕಿ…

13 hours ago

ಸಿಎಂ ಆದ ಬಳಿಕ ಜನತೆಗೆ ಕೃತಜ್ಞತೆ ಸಲ್ಲಿಸಿದ ಡಿ.ಕೆ. ಶಿವಕುಮಾರ್

ಬೆಂಗಳೂರು: ಕರ್ನಾಟಕದ ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸಿದ ಬಳಿಕ ಡಿ.ಕೆ. ಶಿವಕುಮಾರ್ ಅವರು ತಮ್ಮ ಸಾಮಾಜಿಕ ಜಾಲತಾಣಗಳಲ್ಲಿ ಭಾವನಾತ್ಮಕ ಸಂದೇಶ ಹಂಚಿಕೊಂಡಿದ್ದಾರೆ.…

14 hours ago

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ಸಂವಿಧಾನದ ಪುಸ್ತಕ ಹಿಡಿದು, ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ…

16 hours ago

ರಾಜ್ಯದ 25ನೇ ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ: ವೀರ ಗಂಗಾಧರ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ ಸ್ವೀಕಾರ

ರಾಜ್ಯದ 25 ಸಿಎಂ ಆಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರಿಸಿದ್ದಾರೆ. ವೀರ ಗಂಗಾಧರನ ಅಜ್ಜನ ಹೆಸರಿನಲ್ಲಿ ಪ್ರಮಾಣ ವಚನ…

17 hours ago