ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.
ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.
ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…
ದೇವನಹಳ್ಳಿ: ಭಾರತಮಾಲಾ ಪರಿಯೋಜನೆಯಡಿ ಅತ್ಯಾಧುನಿಕ ತಂತ್ರಜ್ಞಾನದೊಂದಿಗೆ ನಿರ್ಮಾಣಗೊಳ್ಳುತ್ತಿರುವ ಬೆಂಗಳೂರು–ಚೆನ್ನೈ ಎಕ್ಸ್ಪ್ರೆಸ್ವೇ ದೇಶದ ಎರಡು ಪ್ರಮುಖ ಆರ್ಥಿಕ ಶಕ್ತಿ ಕೇಂದ್ರಗಳಾದ ಬೆಂಗಳೂರು…
ದೊಡ್ಡಬಳ್ಳಾಪುರ: ಜೂ.13ರಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ತೊಗರಿಘಟ್ಟ ಗ್ರಾಮದಲ್ಲಿ ಕೃಷಿ ಹೊಂಡದಲ್ಲಿ ಆಟವಾಡಲು ಹೋಗಿದ್ದ ಇಬ್ಬರು ಮಕ್ಕಳು…
ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರು ಜಿಲ್ಲಾಧಿಕಾರಿಗಳು, ಎಸ್ಪಿ, ಸಿಇಒ, ಡಿಎಫ್ಒ ಹಾಗೂ ಹಿರಿಯ ಸರ್ಕಾರಿ ಅಧಿಕಾರಿಗಳೊಂದಿಗೆ ನಡೆಸಿದ ಪ್ರಗತಿ…