ಚಿಕ್ಕಬಳ್ಳಾಪುರ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ- ಮಾಜಿ ಸಚಿವ ಡಾ.ಕೆ.ಸುಧಾಕರ್ ಆರೋಪ

ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.

ಇಂದಿನ ಪ್ರತಿಭಟನೆಯಲ್ಲಿ ನಿರೀಕ್ಷೆಗೂ ಮೀರಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ರೈತ ಮುಖಂಡರುಗಳು, ರೈತ ಪರ ಸಂಘಟನೆಗಳ ಪ್ರತಿನಿಧಿಗಳು, ಯುವಕರು ಹಾಗೂ ಅವರು ಸರ್ಕಾರದ ವಿರುದ್ಧ ವ್ಯಕ್ತಪಡಿಸಿದ ಆಕ್ರೋಶ, ಅಸಮಾಧಾನ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಕನ್ನಡಿ ಹಿಡಿದಂತಿತ್ತು ಎಂದರು.

ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.

ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.

Ramesh Babu

Journalist

Recent Posts

ರಾಷ್ಟ್ರೀಯ ಸಾಹಿತ್ಯ ಸೌರಭದಲ್ಲಿ ಕವಿ ರವಿಕುಮಾರ್ ಅವರ ‘ಅಂಚಿನ ತೊರೆ’ ಕವನ ಸಂಕಲನ ಲೋಕಾರ್ಪಣೆ

ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…

46 minutes ago

ನಾಡಕಚೇರಿ ಸರ್ವರ್ ಪದೇ ಪದೇ ಡೌನ್: ರಾಜ್ಯಾದ್ಯಂತ ಜನರಿಗೆ ಸಂಕಷ್ಟ – ತುರ್ತು ಪರಿಹಾರಕ್ಕೆ ಸರ್ಕಾರ ಮುಂದಾಗಬೇಕಿದೆ

ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…

8 hours ago

ಮಧುರನಹೊಸಹಳ್ಳಿಯಲ್ಲಿ ವಿಜೃಂಭಣೆಯಿಂದ ಆಷಾಡ ಏಕಾದಶಿ ಆಚರಣೆ

ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…

9 hours ago

ಬಾಶೆಟ್ಟಿಹಳ್ಳಿ ಯೂ-ಟರ್ನ್‌ನಲ್ಲಿ ಕೆಟ್ಟು ನಿಂತ ಟ್ರಕ್: ಯಲಹಂಕ–ಹಿಂದೂಪುರ ಹೆದ್ದಾರಿಯಲ್ಲಿ ಭಾರೀ ಟ್ರಾಫಿಕ್ ಜಾಮ್

ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…

24 hours ago

ಹೆದ್ದಾರಿ ಸ್ಕೈವಾಕ್‌ಗಳ ಕನಸು ಇನ್ನೂ ಅಪೂರ್ಣ…: ದಾಬಸ್‌ಪೇಟೆ–ಹೊಸಕೋಟೆ ಹೆದ್ದಾರಿಯಲ್ಲಿ ಆಮೆಗತಿಯ ಕಾಮಗಾರಿ: ಜೀವ ಕೈಯಲ್ಲಿ ಹಿಡಿದು ರಸ್ತೆ ದಾಟುವ ಜನರು

ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್‌ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…

1 day ago

ಬೆಂಗಳೂರು ಗ್ರಾಮಾಂತರದಲ್ಲಿ ಮತದಾರರ ಪಟ್ಟಿ ಪರಿಷ್ಕರಣೆ ಬಿರುಸು: 15,721 ಮೃತರ ಹೆಸರು ಪತ್ತೆ

ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…

2 days ago