ಚಿಕ್ಕಬಳ್ಳಾಪುರ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ- ಮಾಜಿ ಸಚಿವ ಡಾ.ಕೆ.ಸುಧಾಕರ್ ಆರೋಪ

ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.

ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.

ಇಂದಿನ ಪ್ರತಿಭಟನೆಯಲ್ಲಿ ನಿರೀಕ್ಷೆಗೂ ಮೀರಿ ಸಾವಿರಾರು ಸಂಖ್ಯೆಯಲ್ಲಿ ಸೇರಿದ್ದ ರೈತರು, ಕೃಷಿ ಕಾರ್ಮಿಕರು, ಮಹಿಳೆಯರು, ರೈತ ಮುಖಂಡರುಗಳು, ರೈತ ಪರ ಸಂಘಟನೆಗಳ ಪ್ರತಿನಿಧಿಗಳು, ಯುವಕರು ಹಾಗೂ ಅವರು ಸರ್ಕಾರದ ವಿರುದ್ಧ ವ್ಯಕ್ತಪಡಿಸಿದ ಆಕ್ರೋಶ, ಅಸಮಾಧಾನ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಗೆ ಕನ್ನಡಿ ಹಿಡಿದಂತಿತ್ತು ಎಂದರು.

ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.

ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.

ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.

Ramesh Babu

Journalist

Recent Posts

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ

ಹಾಡಹಗಲೇ ಮನೆ ಬೀಗ ಮುರಿದು ಲಕ್ಷ ಲಕ್ಷ ಬೆಲೆ ಬಾಳುವ ಚಿನ್ನ, ನಗದು ಕಳ್ಳತನ ಮಾಡಿರುವ ಘಟನೆ ಏ.20ರಂದು ದೊಡ್ಡಬಳ್ಳಾಪುರ…

2 hours ago

ಬೆಳ್ಳಂಬೆಳಗ್ಗೆ ಮಾಂಗಲ್ಯ ಸರ ಕದ್ದ ಕಳ್ಳ: ಮಹಿಳೆ ವಾಕಿಂಗ್ ಮಾಡುವ ವೇಳೆ ಘಟನೆ

ಇಂದು ಬೆಳ್ಳಬೆಳಗ್ಗೆ ಸರಗಳನ್ನ ಕೈಚಳಕ ಕಂಡುಬಂದಿದೆ. ಬೆಳಗ್ಗೆ ಸುಮಾರು 5:30ರ‌ ಸಮಯದಲ್ಲಿ ಮಹಿಳೆ ವಾಕಿಂಗ್ ಮಾಡುವ ವೇಳೆ ಕಳ್ಳನೋರ್ವ ಏಕಾಏಕಿ…

3 hours ago

ಭಾರತದ ಜಾತಿ ವ್ಯವಸ್ಥೆಗೆ ಚಲನೆಯಿಲ್ಲ- ಸಿಎಂ ಸಿದ್ದರಾಮಯ್ಯ

ಬಸವಣ್ಣನವರ ಆದರ್ಶಗಳನ್ನು ಪಾಲಿಸಿದ ಡಾ.ಸಿದ್ಧರಾಮ ಶರಣರು 2025-26ನೇ ಸಾಲಿನ ಬಸವ ಪುರಸ್ಕಾರ ರಾಷ್ಟ್ರೀಯ ಪ್ರಶಸ್ತಿಗೆ ಭಾಜನರಾಗಿದ್ದು, ಅವರಿಗೆ ಅಭಿನಂದನೆಗಳು ಎಂದು…

17 hours ago

ಹೀಟ್ ಸ್ಟ್ರೋಕ್​: ಯುವಕ ಸಾವು: ಬಿಸಿಲಿಗೆ ಬರುವ ಮುನ್ನ ಇರಲಿ ಎಚ್ಚರ

ಹೀಟ್ ಸ್ಟ್ರೋಕ್​ನಿಂದಾಗಿ ಯುವಕನೊಬ್ಬ ಮೃತಪಟ್ಟಿರುವ ಘಟನೆ ಬೀದರ್​ನ ಕಮಲನಗರ ಪಟ್ಟಣದ ಹೊರವಲಯದಲ್ಲಿ ನಡೆದಿದೆ... ಮೃತರನ್ನು ಉತ್ತರ ಪ್ರದೇಶ ಮೂಲದ ಮೊಹಮ್ಮದ್…

1 day ago

‘ಅಯ್ಯಾ ಬಸವಣ್ಣ ಸಮಾಜದ ನೆಮ್ಮದಿಗಾಗಿ ಮತ್ತೊಮ್ಮೆ ಹುಟ್ಟಿ ಬಾ’

ಬಸವ ಜಯಂತಿಯೋ, ಅಕ್ಷಯ ತೃತೀಯವೋ...... ಅದೃಷ್ಟವಂತರಲ್ಲವೇ ನಾವು,..... ನಮ್ಮ ಹಿಂದಿನ ತಲೆಮಾರಿನವರಿಗೆ ಹೋಲಿಸಿಕೊಂಡರೆ ಎಷ್ಟೊಂದು ಅದೃಷ್ಟವಂತರು ನಾವು. ಎಲ್ಲ ವಿಷಯದಲ್ಲೂ…

1 day ago

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿ ಕೊಲೆ: ಪತ್ನಿ, ಪ್ರಿಯಕರ ಅರೆಸ್ಟ್

ಅನೈತಿಕ ಸಂಬಂಧಕ್ಕೆ ಅಡ್ಡಿಯಾಗಿದ್ದ ಪತಿಯನ್ನು ಕೊಲೆ ಮಾಡಿದ್ದ ಪತ್ನಿ, ಪ್ರಿಯಕರನನ್ನು‌ ಇದೀಗ ಬಂಧನ ಮಾಡಲಾಗಿದೆ. ಮೈಸೂರು ತಾಲೂಕಿನ ಮಾವಿನಹಳ್ಳಿ ಗ್ರಾಮದ…

2 days ago