ಒಂದು ಕಡೆ ಬರ, ಮತ್ತೊಂದೆಡೆ ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆ, ಇವೆರಡರಿಂದ ರೈತರಿಗೆ ಗಾಯದ ಮೇಲೆ ಬರೆ ಎಳೆದಂತಾಗಿದೆ ಎಂದು ಮಾಜಿ ಸಚಿವ ಡಾ.ಕೆ.ಸುಧಾಕರ್ ಆಕ್ರೋಶ ವ್ಯಕ್ತಪಡಿಸಿದರು.
ಕಾಂಗ್ರೆಸ್ ಸರ್ಕಾರದ ರೈತ ವಿರೋಧಿ ಧೋರಣೆಯನ್ನು ಖಂಡಿಸಿ ಇಂದು ಚಿಕ್ಕಬಳ್ಳಾಪುರ ಜಿಲ್ಲಾ ಬಿಜೆಪಿ ಘಟಕ ಹಾಗೂ ರೈತ ಪರ ಸಂಘಟನೆಗಳ ವತಿಯಿಂದ ಆಯೋಜಿಸಲಾಗಿದ್ದ ಬೃಹತ್ ರೈತರ ಪ್ರತಿಭಟನೆ ಅಂಗವಾಗಿ ನಗರದ ಒಕ್ಕಲಿಗರ ಕಲ್ಯಾಣ ಮಂಟಪದಿಂದ ಶಿಡ್ಲಘಟ್ಟ ವೃತ್ತದವರೆಗೆ ನಡೆದ ಮೆರವಣಿಗೆಯಲ್ಲಿ ಅವರು ಮಾತನಾಡಿದರು. ಅದರಲ್ಲೂ ನಮ್ಮ ಚಿಕ್ಕಬಳ್ಳಾಪುರ ಜಿಲ್ಲೆಯ ರೈತರ ಬಗ್ಗೆ ಕಾಂಗ್ರೆಸ್ ಸರ್ಕಾರ ಮಲತಾಯಿ ಧೋರಣೆ ತೋರುತ್ತಿದ್ದು, ಹಿಂದಿನ ಬಿಜೆಪಿ ಸರ್ಕಾರ ನೀಡಿದ್ದ ಯೋಜನೆಗಳನ್ನ ಕೂಡ ಕಸಿದುಕೊಳ್ಳುವ ಪಾಪದ ಕೆಲಸ ಮಾಡುತ್ತಿದೆ ಎಂದು ಗುಡುಗಿದರು.
ಅಧಿಕಾರಕ್ಕೆ ಬಂದ ಕೇವಲ ಐದು ತಿಂಗಳಿನಲ್ಲೇ ಕಾಂಗ್ರೆಸ್ ಸರ್ಕಾರ ನಮ್ಮ ನಾಡಿನ ರೈತರ ಪಾಲಿಗೆ ದೊಡ್ಡ ಶಾಪವಾಗಿದೆ. ಅನ್ನದಾತರ ಆಕ್ರೋಶ, ಆಕ್ರಂದನ, ಕಣ್ಣೀರು ಕಾಂಗ್ರೆಸ್ ಸರ್ಕಾರಕ್ಕೆ ಶಪವಾಗಿ ತಟ್ಟುವ ದಿನ ಬಹಳ ದೂರವಿಲ್ಲ ಎಂದು ತಿಳಿಸಿದರು.
ಈಗಲಾದರೂ ಕಾಂಗ್ರೆಸ್ ಸರ್ಕಾರ ಎಚ್ಚೆತ್ತುಕೊಂಡು ರೈತರ ಬಗ್ಗೆ ಗಮನ ಹರಿಸಲಿ, ಅನ್ನದಾತರ ಸಮಸ್ಯೆಗಳಿಗೆ ಸ್ಪಂದಿಸಲಿ ಎಂದು ಆಗ್ರಹಿಸಿದರು.
ಈ ವೇಳೆ ಮಾಜಿ ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ, ಮಾಜಿ ಸಚಿವ ಆರ್.ಅಶೋಕ್, ಸಂಸದ ಎಸ್.ಮುನಿಸ್ವಾಮಿ ಸೇರಿದಂತೆ ಇತರರು ಭಾಗಿಯಾಗಿದ್ದರು.
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…
ದೇವನಹಳ್ಳಿ/ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಹಾಗೂ ದೊಡ್ಡಬಳ್ಳಾಪುರ ತಾಲೂಕಿನ ವ್ಯಾಪ್ತಿಯಲ್ಲಿ ಮುಂಜಾನೆ ಸಂಭವಿಸಿದ ಎರಡು ಪ್ರತ್ಯೇಕ ರಸ್ತೆ ಅಪಘಾತಗಳಲ್ಲಿ…
ದೇವನಹಳ್ಳಿ: ಸ್ವಾತಂತ್ರ್ಯ ದಿನಾಚರಣೆ ಹಾಗೂ ವಾರಾಂತ್ಯದ ರಜೆ ಹಿನ್ನೆಲೆಯಲ್ಲಿ ದೇವನಹಳ್ಳಿ ಹೊರವಲಯದ ಬೈಪಾಸ್ ನಲ್ಲಿ ಪುಂಡರು ಗುಂಪು ಗುಂಪಾಗಿ ಆಟೋ,…
80ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ ತಾಲೂಕು ಆಡಳಿತ ವತಿಯಿಂದ ಸ್ವಾತಂತ್ರ್ಯ ದಿನಾಚರಣೆಯನ್ನು ಅದ್ದೂರಿಯಾಗಿ ಆಚರಿಸಲಾಯಿತು.…
ಗ್ರಾಮೀಣರಿಗೆ ಸ್ಥಳೀಯವಾಗಿ ಉದ್ಯೋಗ ಒದಗಿಸುವ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ) ಯೋಜನೆಯಡಿ (ವಿಬಿ…
ದೊಡ್ಡಬಳ್ಳಾಪುರ: ತಾಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ನೂತನ ಅಧ್ಯಕ್ಷರಾಗಿ ಎನ್ಡಿಎ ಬೆಂಬಲಿತ ನಿರ್ದೇಶಕ ಟಿ.ಜಿ.…