ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು ಜಖಂಗೊಂಡಿದ್ದು, ಒಂದು ಟಾಟಾ ಏಸ್ ವಾಹನಕ್ಕೂ ಹಾನಿಯಾಗಿದೆ.
ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಚಾಕೊಲೇಟ್ ಸಾಗಿಸುತ್ತಿದ್ದ ಕ್ಯಾಂಟರ್, ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ನಿಯಂತ್ರಣ ತಪ್ಪಿ ರಸ್ತೆಬದಿಯ ಅಂಗಡಿಗಳಿಗೆ ನುಗ್ಗಿದೆ. ಬಳಿಕ ಕ್ಯಾಂಟರ್ ಸ್ಥಳದಲ್ಲೇ ಪಲ್ಟಿಯಾಗಿದೆ.
ಅಪಘಾತದ ಪರಿಣಾಮವಾಗಿ ಮೂರು-ನಾಲ್ಕು ಅಂಗಡಿಗಳು, ವಿದ್ಯುತ್ ಲೈಟ್ ಕಂಬ ಹಾಗೂ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ವಾಹನ ಜಖಂಗೊಂಡಿವೆ. ಘಟನೆಯ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲ್ಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಕಾರಿನಲ್ಲಿ ಮಾತನಾಡುತ್ತಿದ್ದ ಸ್ನೇಹಿತರ ಮೇಲೆ ನೈತಿಕ ಪೊಲೀಸ್ಗಿರಿ ನಡೆಸಿ…
ಮಳೆ ಎನ್ನುವುದು ರೈತನ ಬದುಕಿನ ಜೀವನಾಡಿ. ಮುಂಗಾರು ವಿಳಂಬವಾದಾಗ ಅಥವಾ ನಿರೀಕ್ಷಿತ ಪ್ರಮಾಣದಲ್ಲಿ ಮಳೆಯಾಗದಿದ್ದರೆ ರೈತರು ಮಾತ್ರವಲ್ಲ, ಗ್ರಾಮೀಣ ಜೀವನವೇ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…