ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು ಜಖಂಗೊಂಡಿದ್ದು, ಒಂದು ಟಾಟಾ ಏಸ್ ವಾಹನಕ್ಕೂ ಹಾನಿಯಾಗಿದೆ.
ನೆಲಮಂಗಲದಿಂದ ದೊಡ್ಡಬಳ್ಳಾಪುರದ ಕಡೆಗೆ ಚಾಕೊಲೇಟ್ ಸಾಗಿಸುತ್ತಿದ್ದ ಕ್ಯಾಂಟರ್, ಚಾಲಕನ ಅಜಾಗರೂಕತೆ ಹಾಗೂ ಅತಿವೇಗದಿಂದ ನಿಯಂತ್ರಣ ತಪ್ಪಿ ರಸ್ತೆಬದಿಯ ಅಂಗಡಿಗಳಿಗೆ ನುಗ್ಗಿದೆ. ಬಳಿಕ ಕ್ಯಾಂಟರ್ ಸ್ಥಳದಲ್ಲೇ ಪಲ್ಟಿಯಾಗಿದೆ.
ಅಪಘಾತದ ಪರಿಣಾಮವಾಗಿ ಮೂರು-ನಾಲ್ಕು ಅಂಗಡಿಗಳು, ವಿದ್ಯುತ್ ಲೈಟ್ ಕಂಬ ಹಾಗೂ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟಾಟಾ ಏಸ್ ವಾಹನ ಜಖಂಗೊಂಡಿವೆ. ಘಟನೆಯ ವೇಳೆ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ ಎಂಬುದು ಸಮಾಧಾನದ ಸಂಗತಿಯಾಗಿದೆ.
ಮಾಹಿತಿ ತಿಳಿಯುತ್ತಿದ್ದಂತೆಯೇ ದೊಡ್ಡಬೆಳವಂಗಲ ಪೊಲೀಸ್ ಠಾಣೆಯ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…
ದೊಡ್ಡಬಳ್ಳಾಪುರ: ಉತ್ತಮ ಸಮಾಜ ನಿರ್ಮಾಣಕ್ಕೆ ಶಿಕ್ಷಣವೇ ಭದ್ರ ಬುನಾದಿಯಾಗಿದ್ದು, ಮಕ್ಕಳಿಗೆ ಗುಣಮಟ್ಟದ ಶಿಕ್ಷಣದ ಜೊತೆಗೆ ಉತ್ತಮ ಕಲಿಕಾ ವಾತಾವರಣ ಕಲ್ಪಿಸುವಲ್ಲಿ…