ಚಿಕ್ಕಮಧುರೆ ಶ್ರೀ ಶನಿಮಹಾತ್ಮ ಸ್ವಾಮಿಯ ಬ್ರಹ್ಮರಥೋತ್ಸವ

ತಾಲೂಕಿನ ಐತಿಹಾಸಿಕ ಕ್ಷೇತ್ರವಾದ ಚಿಕ್ಕಮಧುರೆ ಶನಿಮಹಾತ್ಮ ಸ್ವಾಮಿಯ 69ನೇ ವರ್ಷದ ಬ್ರಹ್ಮ ರಥೋತ್ಸವ ಮಧ್ಯಾಹ್ನ 1.10 ರಿಂದ 1.58ರಲ್ಲಿ ಸಲ್ಲುವ ಶುಭ ಮಿಥುನ ಲಗ್ನದಲ್ಲಿ ಅದ್ಧೂರಿಯಾಗಿ ನೆರವೇರಿತು.

ಬ್ರಹ್ಮರಥೋತ್ಸವಕ್ಕೆ ನಾನಾ ಮೂಲೆಗಳಿಂದ ಸಹಸ್ರಾರು‌ ಸಂಖ್ಯೆಯಲ್ಲಿ ಭಕ್ತರು ಆಗಮಿಸಿ ರಥಕ್ಕೆ ಭಕ್ತಿಯಿಂದ ಬಾಳೆಹಣ್ಣು, ದವನ ಅರ್ಪಿಸಿ ಇಷ್ಟಾರ್ಥ ಸಿದ್ಧಿಗೆ ಪ್ರಾರ್ಥಿಸಿದರು.

ಬ್ರಹ್ಮರಥೋತ್ಸವಕ್ಕೂ ಮುನ್ನ‌ ಶನಿಮಹಾತ್ಮ ಸ್ವಾಮಿಗೆ ಪೂರ್ಣಕುಂಭ ಕಳಸದೊಂದಿಗೆ ಪೂಜಾ ಕಾರ್ಯವನ್ನ ವಿಜೃಂಭಣೆಯಿಂದ ನೆರವೇರಿಸಲಾಯಿತು.

ಬ್ರಹ್ಮರಥೋತ್ಸವಕ್ಕೆ ಬಂದ ಭಕ್ತರಿಗೆ ಮುದ್ದೆ, ಕಾಳು ಸಾರು, ಪಾಯಸದ ಊಟ ವ್ಯವಸ್ಥೆ ಮಾಡಲಾಗಿತ್ತು.

ಈ ವೇಳೆ ದೇವಾಲಯದ ಆಡಳಿತ ಮಂಡಳಿಯವರು, ಧರ್ಮದರ್ಶಿಗಳು ಈ ಸಂದರ್ಭದಲ್ಲಿ ಹಾಜರಿದ್ದರು.

Ramesh Babu

Journalist

Recent Posts

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ: ನೀರಿನ ಸಮಸ್ಯೆ ನೀಗಿಸುವಂತೆ ನಗರಸಭೆ ಸದಸ್ಯರ ಒತ್ತಾಯ

ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…

41 minutes ago

ಗೃಹ ಅನಿಲ ಸೀಮಿತ ಬಳಕೆಗೆ ಡಿಸಿ ಸಲಹೆ: ಕಾಳಸಂತೆಯಲ್ಲಿ ಗ್ಯಾಸ್ ಸಿಲಿಂಡರ್ ಮಾರಾಟ ಮಾಡಿದರೆ ಕಠಿಣ ಕ್ರಮ: ಜಿಲ್ಲಾಧಿಕಾರಿ ಡಾ.ಕೆ ಎನ್ ಅನುರಾಧಾ

ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…

1 hour ago

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ

ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…

13 hours ago

9 ತಿಂಗಳಲ್ಲಿ ಬಮೂಲ್ ಒಕ್ಕೂಟಕ್ಕೆ 60 ಕೋಟಿ ಲಾಭ: ಸಂಪೂರ್ಣ ರೈತರ ಖಾತೆಗೆ ಲಾಭಾಂಶ ಹಣ

ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…

1 day ago