ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು
ಬೇಸಿಗೆ ಆರಂಭದಲ್ಲಿಯೇ ನಗರ ವ್ಯಾಪ್ತಿಯಲ್ಲಿ ನೀರಿಗೆ ಪರದಾಟ ಆರಂಭವಾಗಿದ್ದು, ನಗರಸಭೆಯಿಂದ ವಾರಕ್ಕೊಮ್ಮೆ ಕೇವಲ ಅರ್ಧ ಗಂಟೆ ನೀರು ಬಿಡುತ್ತಿರುವುದು ಸರಿಯಲ್ಲ.…
ಕೊಲ್ಲಿ ರಾಷ್ಟ್ರಗಳ ಯುದ್ಧದ ಹಿನ್ನೆಲೆಯಲ್ಲಿ ಗ್ಯಾಸ್ ಸಿಲಿಂಡರ್ ಅಭಾವ ಮುಂದಿಟ್ಟುಕೊಂಡು ಕಾಳ ಸಂತೆಯಲ್ಲಿ ಸಿಲಿಂಡರ್ ಮಾರಾಟ ಮಾಡಿದರೆ ಅಂತಹ ಗ್ಯಾಸ್…
ಕಾಲೇಜು ವಿದ್ಯಾರ್ಥಿಗಳಿಗೆ ಗಾಂಜಾ ಸಪ್ಲೆ, ಕಾಲೇಜುಗಳ ಬಳಿ ಸುಖಾ ಸುಮ್ಮನೆ ಓಡಾಟ, ಏರಿಯಾಗಳಲ್ಲಿ ಹವಾ ಮೇಂಟೈನ್ ಮಾಡೋದು, ಹಫ್ತಾ ವಸೂಲಿ…
ಅಂದು ಫ್ರೆಂಡ್ ಬರ್ತಡೇ ಇತ್ತು. ಒಂದೇ ಊರಿನ ಐದು ಮಂದಿ, ಒಬ್ಬ ಕೋಲಾರದ ಮಾಲೂರು ಮೂಲದವನು ಸೇರಿ ಬರ್ತಡೇ ಬಾಯ್…
ಬೆಳ್ಳಂಬೆಳಗ್ಗೆ ಕಂಟೇನರ್-ಸಿಮೆಂಟ್ ಲಾರಿ ನಡುವೆ ಅಪಘಾತ ಸಂಭವಿಸಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಚೆನ್ನಾದೇವಿ ಅಗ್ರಹಾರದ ಪೆಟ್ರೋಲ್ ಬಂಕ್ ಸಮೀಪ ನಡೆದಿದೆ....…
ಪಶು ಆಹಾರಗಳ ಬೆಲೆ ಏರಿಕೆ.. ಬೇಸಿಗೆಯಿಂದಾಗಿ ಹಾಲು ಉತ್ಪಾದನೆ ಕುಂಠಿತ.. ಹಸುಗಳಲ್ಲಿ ಹೆಚ್ಚಿದ ಕೆಚ್ಚಲುಬಾವು ರೋಗ.. ರಾಸುಗಳಿಗೆ ಮೇವು ಇಲ್ಲದೆ…