ಕೋಲಾರ: ವಿಧಾನಸಭಾ ಕ್ಷೇತ್ರದ ಶಾಸಕ ಕೊತ್ತೂರು ಮಂಜುನಾಥ್ ಅವರು ಬೆಳಗಾವಿ ಜಿಲ್ಲೆಯ ರಾಯಭಾಗದಲ್ಲಿ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಪ್ರಿಯಾಂಕ ಜಾರಕಿಹೊಳಿ ಪರವಾಗಿ ಚುನಾವಣಾ ಪ್ರಚಾರ ನಡೆಸಿದರು.
ಕ್ಷೇತ್ರದಲ್ಲಿನ ಬುಡ್ಗ ಜಂಗಮ ಸಮುದಾಯದ ಸಭೆ ಕರೆದು ಸನ್ಮಾನ ಸ್ವೀಕರಿಸಿ ಮಾತನಾಡಿದ ಅವರು ಲೋಕಸಭಾ ಚುನಾವಣೆಯಲ್ಲಿ ನಮ್ಮ ಜನಾಂಗದವರೆಲ್ಲಾ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ನೀಡಬೇಕು ನಮ್ಮ ಜನಾಂಗದ ಯಾವುದೇ ಸಮಸ್ಯೆಗಳಿದ್ದರೆ ಸರಕಾರ ಮತ್ತು ನಾನು ಶಾಸಕನಾಗಿದ್ದು ನಿಮಗೆ ಸ್ಪಂದಿಸುವುದಾಗಿ ತಿಳಿಸಿದರು.
ಈ ವೇಳೆ ಗ್ರಾಮಗಳಲ್ಲಿ ದೇವಸ್ಥಾನ, ಸಮುದಾಯ ಭವನ ಸೇರಿದಂತೆ ಮನೆ ನಿರ್ಮಾಣ ಮಾಡಿಕೊಡಬೇಕೆಂದು ಶಾಸಕರಲ್ಲಿ ಮನವಿ ಮಾಡಿದರು ಕ್ಷೇತ್ರದಲ್ಲಿ ಇರುವ ನಾಯಕರೊಂದಿಗೆ ಚರ್ಚಿಸಿ ನಿಮ್ಮ ಸಮಸ್ಯೆಗೆ ಸ್ಪಂದಿಸುವುದಾಗಿ ಭರವಸೆ ನೀಡಿದರು.
ಈ ವೇಳೆ ಚಿಕ್ಕೋಡಿ ಲೋಕಸಭಾ ಕ್ಷೇತ್ರದ ಕರ್ನಾಟಕ ರಾಜ್ಯ ಅಲೆಮಾರಿ ಬುಡ್ಗ ಜಂಗಮ ಕ್ಷೇಮಾಭಿವೃದ್ದಿ ಸಂಘದ ಮುಖಂಡರಾದ ಪರುಶಾರಾಮ್, ರಾಜೀವ್, ಸಂಕಣ್ಣನವರ್, ಮಾರುತಿ, ರಮೇಶ್, ಪ್ರಕಾಶ್, ಎಣ್ಣೆ ಆನಂದ್, ರಾಮಪ್ಪ, ಬಹುರೂಪಿ, ಯಲ್ಲಪ್ಪ, ನಾಗಪ್ಪ, ವಿಭೂತಿ, ಬಸವರಾಜ್ ಸೇರಿದಂತೆ ಮತ್ತಿತರರು ಇದ್ದರು
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಹಂತದಲ್ಲಿ 20 ಮಂದಿ ಶಾಸಕರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು. ಇದೇ…
ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆಯ ಎರಡನೇ ಪಟ್ಟಿಯಲ್ಲಿ ಸಚಿವ ಸ್ಥಾನ ಪಡೆಯುವ ನಿರೀಕ್ಷೆಯಲ್ಲಿದ್ದ ಹೊಸಕೋಟೆ ಶಾಸಕ ಶರತ್ ಬಚ್ಚೇಗೌಡ…
ಬೆಂಗಳೂರು ಗ್ರಾಮಾಂತರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಸರ್ಕಾರಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ಸಾವಿರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಆಧಾರ್ ಕಾರ್ಡ್ ದೊಡ್ಡ…
ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ವಿವಿಧೋದ್ದೇಶ ಪ್ರಾಥಮಿಕ ಗ್ರಾಮೀಣ ಕೃಷಿ ಪತ್ತಿನ ಸಹಕಾರ ಸಂಘ (ಎಂ.ಪಿ.ಆರ್.ಎ.ಸಿ.ಎಸ್.)ದ 2026–2031ನೇ ಅವಧಿಯ ಆಡಳಿತ ಮಂಡಳಿ…
ದೊಡ್ಡಬಳ್ಳಾಪುರ: ಆಷಾಢ ಮಾಸದಲ್ಲಿ ಗಾಳಿಪಟ ಹಾರಿಸುವುದು ನಮ್ಮ ಭಾಗದ ಸಾಂಪ್ರದಾಯಿಕ ಆಚರಣೆಯಾಗಿದ್ದು, ಗಾಳಿಪಟವು ಒಂದು ಕಲೆಯಷ್ಟೇ ಅಲ್ಲ ಸಾಹಸದ ಪ್ರವೃತ್ತಿಯೂ…
ದೊಡ್ಡಬಳ್ಳಾಪುರ: ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕರ್ನಾಟಕ ಸಿವಿಲ್ ಪೊಲೀಸ್ ಕಾನ್ಸ್ಟೇಬಲ್ ನೇಮಕಾತಿ ಲಿಖಿತ ಪರೀಕ್ಷೆ ಭಾನುವಾರ ಯಾವುದೇ ಅಡಚಣೆ ಅಥವಾ…