ಪರಿಸರ ಜಾಗೃತಿ ಬಗ್ಗೆ ಎಲ್ಲೆಡೆ ಒಂದು ದೊಡ್ಡ ದನಿ ಕೇಳಿ ಬರುತ್ತಿದೆ. ಮಕ್ಕಳಾದ ನಿಮ್ಮಿಂದಲೆ ಸಣ್ಣ ಬದಲಾವಣೆಯೊಂದಿಗೆ ಪರಿಸರ ಪ್ರಜ್ಞೆ ಜಾಗೃತವಾಗಲಿ ಎಂದು ಶಾಸಕ ಧೀರಜ್ ಮುನಿರಾಜು ಕರೆ ನೀಡಿದರು.
ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ನಗರದ ನ್ಯಾಷನಲ್ ಪ್ರೈಡ್ ಸ್ಕೂಲ್ ನಲ್ಲಿ ಚಿತ್ರ ಬಿಡಿಸುವ ಸ್ಪರ್ಧೆ ಏರ್ಪಡಿಸಲಾಗಿತ್ತು. ಕಾರ್ಯಕ್ರಮ ಉದ್ಘಾಟನೆ ಮಾಡಿ ಮಾತನಾಡಿದ ಅವರು, ಇಂದಿನ ಯಾಂತ್ರಿಕ ಯುಗದಲ್ಲಿ ಸ್ವಾರ್ಥದಲ್ಲಿ ಮುಳುಗಿದ್ದೇವೆ. ಪರಿಸರ ರಕ್ಷಣೆ ಕೇವಲ ಭಾಷಣಗಳಿಗೆ ಸಿಮೀತ ಎಂಬಾಂತಾಗಿದೆ. ಇದು ಆಗಬಾರದು, ಇದು ಮಕ್ಕಳಿಂದ ಆರಂಭವಾಗಬೇಕು ಎಂದರು.
ದೊಡ್ಡ ಮಟ್ಟದಲ್ಲಿ ಆಗದಿದ್ದರೂ ಸಣ್ಣ ಮಟ್ಟದಲ್ಲಿ ಆರಂಭವಾದರೆ ಮುಂದೊಂದು ದಿನ ಬೃಹತ್ ಆಕಾರ ಪಡೆಯುತ್ತದೆ. ಪ್ರತಿಯೊಬ್ಬರೂ ತಮ್ಮ ಮನೆಗಳ ಮುಂದೆ ಒಂದು ಗಿಡ ನೆಟ್ಟು ಸುಮ್ಮನಾಗದೆ ಅದನ್ನು ಪೋಷಿಸುವ ಕಾರ್ಯ ಮಾಡಿದರೆ ಪರಿಸರ ಉಳಿವಿಗೆ ಸಣ್ಣ ಕೊಡುಗೆಯಾಗಲಿದೆ ಎಂದರು.
ಮನೆಗಳ ಬಳಿ ಪ್ರತಿದಿನ ಬರುವ ಕಸದ ವಾಹನಗಳಿಗೆ ಸೂಕ್ತವಾಗಿ ವಿಂಗಡಿಸಿದ ಕಸವನ್ನು ಹಾಕಿ ಇಲ್ಲಿಂದಲೇ ಕಸದ ವೈಜ್ಞಾನಿಕ ವಿಂಗಡಣೆ ಆರಂಭವಾಗುತ್ತದೆ. ಮುಂದೆ ಬೃಹತ್ ಪ್ರಮಾಣದಲ್ಲಿ ಕಸದ ಸಮಸ್ಯೆ ನೀಗುತ್ತದೆ. ನಿತ್ಯ ಜೀವನದಲ್ಲಿ ಪ್ಲಾಸ್ಟಿಕ್ ಬಳಕೆಗೆ ಸಂಪೂರ್ಣ ಕಡಿವಾಣ ಹಾಕಿ ಎಂದು ಮಕ್ಕಳಿಗೆ ತಿಳಿಸಿದರು.
ಬೆಳೆಯುವ ಮಕ್ಕಳಲ್ಲಿ ಶಿಸ್ತು, ಸಮಯ ಪಾಲನೆ, ತಾಳ್ಮೆ, ಹಿರಿಯರಿಗೆ ಗೌರವ ಹೀಗೆ ಮಕ್ಕಳಿಗೆ ಕಲಿಸಬೇಕಾದಂತ ಅತ್ಯವಶ್ಯಕ ಅಂಶಗಳ ಕಲಿಕೆಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ಬದಲಾದ ಅವಶ್ಯಕತೆಗಳಿಗೆ ತಕ್ಕಂತೆ ಮಕ್ಕಳನ್ನು ತಯಾರಿಗೊಳಿಸುವುದು ಉತ್ತಮ ಸಮಾಜದ ನಿರ್ಮಾಣಕ್ಕಾಗಿ ನಾಯಕತ್ವದ ಗುಣಗಳನ್ನು ಮಕ್ಕಳಲ್ಲಿ ಬೆಳೆಸುವುದು ನಮ್ಮ ಪ್ರಮುಖ ಗುರಿಯಾಗಿದೆ ಎಂದರು. ಪ್ರತಿಯೊಬ್ಬರಿಗೂ ಸ್ಪೂರ್ತಿದಾಯಕ. ಪ್ರಾಮಾಣಿಕ, ಧೈರ್ಯಶಾಲಿ, ಸಹೃದಯದ ಪಾಠ ಮಕ್ಕಳಿಗೆ ಕಲಿಸಲಾಗುತ್ತದೆ ಎಂದರು.
ಕಲಿಕೆ ಎನ್ನುವುದು ಮಕ್ಕಳಿಗೆ ಹೊರೆಯಾಗಬಾರದು ಮಕ್ಕಳು ಸಂತೋಷದಿಂದ ಕಲಿತಾಗ ಮಾತ್ರ ನೂರರಷ್ಟು ಕಲಿಕೆ ಸಾಧ್ಯ. ಎನ್ಪಿಎಸ್ ಶಾಲೆಯು ಗ್ಲೋಬಲ್ ಟ್ರಯಂಫ್ ಫೌಂಡೇಶನ್ ಲೀಡರ್ಶಿಪ್ ಶೃಂಗಸಭೆಯಿಂದ ಗುರಿತಿಸಲ್ಪಟ್ಟಿದೆ. ಶಾಲೆಯ ಪ್ರತಿ ಮಗು ಸುಮಾರು 60 ಶ್ಲೋಕಗಳ ಜೊತೆಗೆ ಮುಸ್ಲಿಂ ಧರ್ಮದ ದುವಾ ಮತ್ತು ಕ್ರಿಶ್ಚಿಯನ್ ಧರ್ಮದ ಪ್ರಾರ್ಥನೆಗಳನ್ನು ಸರಸಾಗಟವಾಗಿ ಹೇಳುತ್ತಾರೆ. ಪ್ರತಿಯೊಂದು ಸಾಂಪ್ರದಾಯಿಕ ಆಚರಣೆಯ ಹಿಂದೆ ಒಂದು ವೈಜ್ಞಾನಿಕ ಕಾರಣವಿದೆ. ಹಾಗಾಗಿ ಸಾಂಪ್ರದಾಯಿಕ ಸಂಸ್ಕೃತಿಯನ್ನು ಎತ್ತಿ ಹಿಡಿಯುವಂತಹ ಎಲ್ಲಾ ಧರ್ಮದ ಹಬ್ಬ ಹರಿದಿನಗಳನ್ನು ಆಚರಿಸುತ್ತೇವೆ. ಫಾರ್ಮ್ ಪಾರ್ಟಿ, ಕಿಡ್ಸ್ ಕಾರ್ನಿವಲ್, ಅಕ್ಷರಾಭ್ಯಾಸ ನಮ್ಮ ಶಾಲೆಯ ವಿಶೇಷತೆಯಾಗಿದೆ ಎಂದರು.
ಪರಿಸರ ದಿನ ಅಂಗವಾಗಿ ಶಾಲಾ ವಿದ್ಯಾರ್ಥಿಗಳಿಗೆ ಚಿತ್ರಕಲಾ ಸ್ಪರ್ಧೆಯನ್ನು ಏರ್ಪಡಿಸಿ, ಸ್ಪರ್ಧೆಯಲ್ಲಿ ಗೆದ್ದವರಿಗೆ ಬಹುಮಾನ ವಿತರಿಸಿದ ಗಣ್ಯರು
ಕಾರ್ಯಕ್ರಮದಲ್ಲಿ ಶಾಲೆಯ ಅಧ್ಯಕ್ಷ ನಾಗರಾಜು, ಕಾರ್ಯದರ್ಶಿ ಸತೀಶ್, ಪ್ರಾಂಶುಪಾಲರಾದ ರಶ್ಮಿ, ಶಿಕ್ಷಕರಾದ ಬಿಂದು, ತೇಜಸ್ವಿನಿ, ಕುಲ್ಸುಮ್ ಮತ್ತು ಸಿಬ್ಬಂದಿ, ಸಾರ್ವಜನಿಕರು ಇದ್ದರು.
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಮತದಾರರ ಪಟ್ಟಿ ಸಮಗ್ರ ಪರಿಷ್ಕರಣೆ-2026ರ (ಎಸ್ಐಆರ್) ಪ್ರಕ್ರಿಯೆ ಬಿರುಸಿನಿಂದ ಸಾಗುತ್ತಿದ್ದು, ಜಿಲ್ಲೆಯಾದ್ಯಂತ ಒಟ್ಟು 15,721 ಮೃತರ…