ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿ ಮುಂದುವರಿಸಿದೆ.
ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಅಧಿಕಾರಿಗಳು ಗುರುವಾರ ವಿವಿಧ ಕಡೆ ನಡೆಸಿದ ಶೋಧಕಾರ್ಯಾಚರಣೆ ವೇಳೆ ಚಳ್ಳಕೆರೆಯಲ್ಲಿರುವ ಬ್ಯಾಂಕಿನ ಎರಡು ಲಾಕರ್ನಲ್ಲಿ 40 ಕೆ.ಜಿ. ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸೆಪ್ಟೆಂಬರ್ 4 ರಂದು ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆ ಶೋಧ ನಡೆಸಿದ ವೇಳೆ ವೀರೇಂದ್ರ ಅವರ ಹೆಸರಿನಲ್ಲಿರುವ 9 ಬ್ಯಾಂಕ್ ಖಾತೆಗಳಿಂದ 55 ಕೋಟಿ ರೂ. ಮೊತ್ತದ ಠೇವಣಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ 40 ಕೆ.ಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ.
ಇದಕ್ಕೂ ಮೊದಲು, ಇಡಿ ಅಂದಾಜು 21 ಕೆಜಿ ಚಿನ್ನದ ಗಟ್ಟಿ, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಲವು ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನ ಸೇರಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ಪ್ರತೀಕಾರಾತ್ಮಕ ಅಶ್ಲೀಲತೆ , ಸೆಕ್ಸ್ಟಾರ್ಷನ್ ಹಾಗೂ ಬ್ಲ್ಯಾಕ್ಮೇಲ್ ವಿಡಿಯೋಗಳಿಗೆ ಸಂಬಂಧಿಸಿದ ಪ್ರಕರಣಗಳಲ್ಲಿ ಕಡ್ಡಾಯವಾಗಿ ಎಫ್ಐಆರ್ ದಾಖಲಿಸುವಂತೆ ಗೃಹ ಇಲಾಖೆಗೆ ಸೂಚನೆ…
ಕೃಷಿ ಇಲಾಖೆ ವತಿಯಿಂದ 2026-27 ನೇ ಸಾಲಿನ ಮುಂಗಾರು ಹಂಗಾಮಿನ ಕರ್ನಾಟಕ ರೈತ ಸುರಕ್ಷಾ ಪ್ರಧಾನ ಮಂತ್ರಿ ಫಸಲ್ ವಿಮಾ…
ದೇವನಹಳ್ಳಿ: ತೋಟಕ್ಕೆ ನೀರು ಬಿಡುವ ವಿಚಾರವಾಗಿ ಉಂಟಾದ ಕುಟುಂಬ ಕಲಹ ಗುಂಡಿನ ದಾಳಿಗೆ ತಿರುಗಿದ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ…
ದೊಡ್ಡಬಳ್ಳಾಪುರ: ಮಕ್ಕಳು ಹಾಗೂ ಯುವಜನತೆ ದೇಶದ ಅಭಿವೃದ್ಧಿಯಲ್ಲಿ ಪ್ರಮುಖ ಪಾತ್ರವಹಿಸುತ್ತಿದ್ದು, ಯಾವುದೇ ಕೆಟ್ಟ ಚಟಗಳಿಗೆ ಬಲಿಯಾಗದೆ ಉತ್ತಮ ಜೀವನ ರೂಪಿಸಿಕೊಳ್ಳಬೇಕು…
ಬೆಂಗಳೂರು: ಕರ್ನಾಟಕ ಸರ್ಕಾರವು ಉಪಮುಖ್ಯಮಂತ್ರಿಗಳು ಹಾಗೂ ಸಚಿವರಿಗೆ ಜಿಲ್ಲಾವಾರು ಜವಾಬ್ದಾರಿಗಳನ್ನು ಹಂಚಿಕೆ ಮಾಡಿ ಹೊಸ ಅಧಿಸೂಚನೆ ಹೊರಡಿಸಿದೆ. ರಾಜ್ಯಪಾಲರ ಅನುಮೋದನೆಯೊಂದಿಗೆ…
ವಿಜಯಪುರ (ದೇವನಹಳ್ಳಿ): ಮನೆಗಳ ಮುಂಭಾಗ ಹಾಗೂ ಸಾರ್ವಜನಿಕ ಪಾರ್ಕಿಂಗ್ ಪ್ರದೇಶಗಳಲ್ಲಿ ನಿಲ್ಲಿಸಿದ್ದ ದ್ವಿಚಕ್ರ ವಾಹನಗಳನ್ನು ಕಳವು ಮಾಡುತ್ತಿದ್ದ ಆರೋಪಿಯನ್ನು ವಿಜಯಪುರ…