ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿಗೆ ಸೇರಿದ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿ ಜಪ್ತಿ

ಆನ್‌ಲೈನ್ ಬೆಟ್ಟಿಂಗ್‌ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿ ಮುಂದುವರಿಸಿದೆ.

ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್‌ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ.

ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಅಧಿಕಾರಿಗಳು ಗುರುವಾರ ವಿವಿಧ ಕಡೆ ನಡೆಸಿದ ಶೋಧಕಾರ್ಯಾಚರಣೆ ವೇಳೆ ಚಳ್ಳಕೆರೆಯಲ್ಲಿರುವ ಬ್ಯಾಂಕಿನ ಎರಡು ಲಾಕರ್‌ನಲ್ಲಿ 40 ಕೆ.ಜಿ. ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.

ಸೆಪ್ಟೆಂಬರ್​ 4 ರಂದು ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆ ಶೋಧ ನಡೆಸಿದ ವೇಳೆ ವೀರೇಂದ್ರ ಅವರ ಹೆಸರಿನಲ್ಲಿರುವ 9 ಬ್ಯಾಂಕ್ ಖಾತೆಗಳಿಂದ 55 ಕೋಟಿ ರೂ. ಮೊತ್ತದ ಠೇವಣಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ 40 ಕೆ.ಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ.

ಇದಕ್ಕೂ ಮೊದಲು, ಇಡಿ ಅಂದಾಜು 21 ಕೆಜಿ ಚಿನ್ನದ ಗಟ್ಟಿ, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಲವು ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನ ಸೇರಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.

ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.

Ramesh Babu

Journalist

Recent Posts

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

2 hours ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

2 hours ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

7 hours ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

3 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

3 days ago