ಆನ್ಲೈನ್ ಬೆಟ್ಟಿಂಗ್ ದಂಧೆ ಪ್ರಕರಣಕ್ಕೆ ಸಂಬಂಧಿಸಿದಂತೆ ಚಿತ್ರದುರ್ಗದ ಕಾಂಗ್ರೆಸ್ ಶಾಸಕ ಕೆ.ಸಿ.ವಿರೇಂದ್ರ ಪಪ್ಪಿ ವಿರುದ್ಧ ಜಾರಿ ನಿರ್ದೇಶನಾಲಯ ಮತ್ತೆ ದಾಳಿ ನಡೆಸಿ ಮುಂದುವರಿಸಿದೆ.
ಗುರುವಾರ ಚಳ್ಳಕೆರೆಯಲ್ಲಿ ವೀರೇಂದ್ರ ಪಪ್ಪಿಗೆ ಸೇರಿ ಎರಡು ಲಾಕರ್ಗಳನ್ನು ಜಪ್ತಿ ಮಾಡಿ 50.33 ಕೋಟಿ ರೂ. ಮೌಲ್ಯದ 40 ಕೆ.ಜಿ. ಚಿನ್ನದ ಗಟ್ಟಿಯನ್ನು ಜಪ್ತಿ ಮಾಡಲಾಗಿದೆ.
ಆರೋಪಿಯನ್ನು ಕಸ್ಟಡಿಗೆ ಪಡೆದಿರುವ ಅಧಿಕಾರಿಗಳು ಗುರುವಾರ ವಿವಿಧ ಕಡೆ ನಡೆಸಿದ ಶೋಧಕಾರ್ಯಾಚರಣೆ ವೇಳೆ ಚಳ್ಳಕೆರೆಯಲ್ಲಿರುವ ಬ್ಯಾಂಕಿನ ಎರಡು ಲಾಕರ್ನಲ್ಲಿ 40 ಕೆ.ಜಿ. ತೂಕದ 24 ಕ್ಯಾರೆಟ್ ಚಿನ್ನದ ಗಟ್ಟಿಗಳನ್ನು ಅಧಿಕಾರಿಗಳು ಜಪ್ತಿ ಮಾಡಿದ್ದಾರೆ.
ಸೆಪ್ಟೆಂಬರ್ 4 ರಂದು ಇಡಿ ಅಧಿಕಾರಿಗಳು ಬೆಂಗಳೂರು, ಚಿತ್ರದುರ್ಗ ಸೇರಿದಂತೆ ವಿವಿಧ ಕಡೆ ಶೋಧ ನಡೆಸಿದ ವೇಳೆ ವೀರೇಂದ್ರ ಅವರ ಹೆಸರಿನಲ್ಲಿರುವ 9 ಬ್ಯಾಂಕ್ ಖಾತೆಗಳಿಂದ 55 ಕೋಟಿ ರೂ. ಮೊತ್ತದ ಠೇವಣಿ ಪತ್ತೆಯಾಗಿತ್ತು. ಇದರ ಬೆನ್ನಲ್ಲೇ ಈಗ 40 ಕೆ.ಜಿ ಚಿನ್ನದ ಗಟ್ಟಿ ಪತ್ತೆಯಾಗಿದೆ.
ಇದಕ್ಕೂ ಮೊದಲು, ಇಡಿ ಅಂದಾಜು 21 ಕೆಜಿ ಚಿನ್ನದ ಗಟ್ಟಿ, ನಗದು, ಚಿನ್ನ ಮತ್ತು ಬೆಳ್ಳಿ ಆಭರಣಗಳು, ಹಲವು ಬ್ಯಾಂಕ್ ಖಾತೆಗಳು ಮತ್ತು ದುಬಾರಿ ವಾಹನ ಸೇರಿ 103 ಕೋಟಿ ರೂ. ಮೌಲ್ಯದ ಆಸ್ತಿಯನ್ನು ವಶಪಡಿಸಿಕೊಂಡಿದೆ.
ಈ ಪ್ರಕರಣದಲ್ಲಿ ಇಲ್ಲಿಯವರೆಗೆ ಒಟ್ಟು ವಶಪಡಿಸಿಕೊಳ್ಳಲಾದ ಮೊತ್ತ 150 ಕೋಟಿ ರೂ.ದಾಟಿದೆ ಎಂದು ಇಡಿ ಅಧಿಕಾರಿಗಳು ತಿಳಿಸಿದ್ದಾರೆ.
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…
ನೆಲಮಂಗಲ: ಗ್ರಾಹಕರ ಸೋಗಿನಲ್ಲಿ ಜ್ಯುವೆಲ್ಲರಿ ಅಂಗಡಿಗೆ ನುಗ್ಗಿದ ದುಷ್ಕರ್ಮಿಗಳ ತಂಡವೊಂದು ಅಂಗಡಿ ಮಾಲೀಕನ ಮೇಲೆ ಗುಂಡು ಹಾರಿಸಿ ಚಿನ್ನಾಭರಣ ದರೋಡೆಗೆ…
ದೊಡ್ಡಬಳ್ಳಾಪುರ: ರಾತ್ರಿ ವೇಳೆ ಗ್ಯಾಸ್ ಸ್ಟೌವ್ ಆನ್ ಸ್ಥಿತಿಯಲ್ಲಿಯೇ ಕೆಲಸಕ್ಕೆ ತೆರಳಿದ್ದ ಪರಿಣಾಮ ಬೆಳಗ್ಗೆ ಬೆಂಕಿ ಅವಘಡ ಸಂಭವಿಸಿ ಇಬ್ಬರು…