ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌: ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌: ಸದ್ಯ ಪೊಲೀಸರ ಅತಿಥಿಗಳಾದ ಬುರ್ಖಾ ಗ್ಯಾಂಗ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಚಿನ್ನದ ಅಂಗಡಿಗೆ ಎಂಟ್ರಿ ಕೊಟ್ಟಿದ್ದ ಬುರ್ಕಾ ಗ್ಯಾಂಗ್‌.  ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌ ಆಗಿದ್ದ ಐದು ಜನ ಮಹಿಳೆಯರ ಗ್ಯಾಂಗ್‌. ಚಿಂತಾಮಣಿ ನಗರದ ಸೌಂದರ್ಯ್ಯ ಫ್ಯಾಷನ್‌ ಅಂಡ್‌ ಜುವೆಲರ್ಸ್‌ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿತ್ತು. ಕಳ್ಳತನ ಮಾಡಿ ಒಂದು ವರ್ಷದ ಬಳಿಕ ಮಾಲ್‌ ಸಮೇತ ಖಾಕಿ ಬಲೆಗೆ ಬಿದ್ದ ಬುರ್ಖಾ ಗ್ಯಾಂಗ್‌. ಬುರ್ಖಾ ಗ್ಯಾಂಗ್‌ ಚಿನ್ನದ ಬಾಕ್ಸ್‌ ಕದ್ದಿದ್ದ ವೀಡಿಯೋ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಪ್ಪತ್ತೆಂಟು ಗ್ರಾಂ ತೂಕದ ಏಳು ಲಕ್ಷ ಬೆಲೆ ಬಾಳುವ ಹದಿನಾರು ಜೊತೆ ಓಲೆ ಬಾಕ್ಸ್‌ ಕದ್ದಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸಿಸಿ ಕ್ಯಾಮೇರಾ ವೀಡಿಯೋ ಆಧರಿಸಿ ಬುರ್ಕಾ ಗ್ಯಾಂಗ್‌ ಗೆ ಬಲೆ ಬೀಸಿದ್ದ ಖಾಕಿ ಪಡೆ. ಕೊನೆಗೂ ಐದು ಜನ ಮಹಿಳೆರಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ.

ಕೋಲಾರ ಮೂಲದ ನಗ್ಮಾ, ಜರೀನಾ, ನಗೀನಾ, ನವೀನಾ, ಮುಬೀನಾ ಬಂಧಿತ ಬುರ್ಖಾ ಗ್ಯಾಂಗ್‌.

ಕಳುವಾಗಿದ್ದ ಚಿನ್ನಾಭರಣಗಳನ್ನು ಅಂಗಡಿ ಮಾಲೀಕನಿಗೆ ಹಿಂದುರುಗಿಸಿದ ಪೊಲೀಸರು. ಆರೋಪಿಗಳಿಂದ ಎಪ್ಪತ್ತು ಗ್ರಾಂ ತೂಕದ ಸುಮಾರು ಏಳು ಲಕ್ಷ ಬೆಲೆ ಬಾಳುವ ಓಲೆ ಬಾಕ್ಸ್‌ ವಶಕ್ಕೆ ಪಡೆಯಲಾಗಿದೆ.

Ramesh Babu

Journalist

Recent Posts

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ……

ಕನ್ನಡಿಗರಿಗೆ ಉದ್ಯೋಗ ಮೀಸಲಾತಿ...... ಸರಳವಾಗಿ ಬಹು ಆಯಾಮಗಳ ಒಂದು ಚಿಂತನ ಮಂಥನ........ ಕರ್ನಾಟಕದ ಖಾಸಗಿ ಉದ್ದಿಮೆಗಳಲ್ಲಿ ಸ್ಥಳೀಯ ಕನ್ನಡಿಗರಿಗೆ ಮೀಸಲಾತಿಯ…

7 hours ago

ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ ನಿಧನ

  ಬೆಂಗಳೂರು: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡರ ಪತ್ನಿ ಚೆನ್ನಮ್ಮ (85) ಅವರು ಶನಿವಾರ ನಿಧನರಾದರು. ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ…

20 hours ago

ನಗರಸಭೆ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆ: ಗಣ್ಯರಿಂದ ಅಭಿನಂದನೆ

ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ನಗರಸಭೆಯ ನೂತನ ಅಧ್ಯಕ್ಷರಾಗಿ ಪ್ರಭ ನಾಗರಾಜ್ ಆಯ್ಕೆಯಾಗಿದ್ದಾರೆ. ಅಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ಪ್ರಭ ನಾಗರಾಜ್ ಅವರಿಗೆ ಗಣ್ಯರು…

24 hours ago

ಸಂಬಂಧಗಳ ಬಲೆಯೊಳಗೆ….

ಸಂಬಂಧಗಳ ಬಲೆಯೊಳಗೆ.... ಪೂರ್ವ ನಿರ್ಧಾರಿತ ಬಂಧನದಲ್ಲಿ.... ಒಂದು ನಿಗದಿತ ವ್ಯವಸ್ಥೆಯ ಜೈಲಿನಲ್ಲಿ.... ಹಿಂದಿನವರ ಅನುಭವದ ಗೋಡೆಗಳೊಳಗೆ..... ಹುಟ್ಟುತ್ತಾ ವಿಶ್ವಮಾನವರು, ಬೆಳೆಯುತ್ತಾ......…

1 day ago

ವಿಮಾನಕ್ಕೆ ಬಾಂಬ್ ಬೆದರಿಕೆ; ತುರ್ತು ತಪಾಸಣೆ ಬಳಿಕ ಹುಸಿ ಕರೆ ಎಂದು ಸ್ಪಷ್ಟ

ದೇವನಹಳ್ಳಿ: ದೇವನಹಳ್ಳಿ ಸಮೀಪದ ಕೆಂಪೇಗೌಡ ಅಂತರರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬೆಂಗಳೂರಿನಿಂದ ಅಹಮದಾಬಾದ್‌ಗೆ ತೆರಳಲು ಸಿದ್ಧವಾಗಿದ್ದ ಇಂಡಿಗೋ ಸಂಸ್ಥೆಯ 6E-6423 ವಿಮಾನಕ್ಕೆ…

2 days ago

ಸೋನಂ ವಾಂಗ್ ಚುಕ್……

ಸೋನಂ ವಾಂಗ್ ಚುಕ್...... ಕೇಂದ್ರ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗಿಂತ ಸೋನಂ ವಾಂಗ್ ಚುಕ್ ಅವರ ಜೀವ ಭಾರತೀಯರಿಗೆ…

3 days ago