ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌: ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌: ಸದ್ಯ ಪೊಲೀಸರ ಅತಿಥಿಗಳಾದ ಬುರ್ಖಾ ಗ್ಯಾಂಗ್‌

ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ನಗರ ಪೊಲೀಸರಿಂದ ಭರ್ಜರಿ ಕಾರ್ಯಾಚರಣೆ. ಚಿನ್ನದ ಅಂಗಡಿಯಲ್ಲಿ ಚಿನ್ನ ದೋಚಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ. ಬಟ್ಟೆ ಖರೀದಿಸುವ ನೆಪದಲ್ಲಿ ಚಿನ್ನದ ಅಂಗಡಿಗೆ ಎಂಟ್ರಿ ಕೊಟ್ಟಿದ್ದ ಬುರ್ಕಾ ಗ್ಯಾಂಗ್‌.  ಚಿನ್ನದ ಓಲೆ ಇದ್ದ ಬಾಕ್ಸ್‌ ಕದ್ದು ಎಸ್ಕೇಪ್‌ ಆಗಿದ್ದ ಐದು ಜನ ಮಹಿಳೆಯರ ಗ್ಯಾಂಗ್‌. ಚಿಂತಾಮಣಿ ನಗರದ ಸೌಂದರ್ಯ್ಯ ಫ್ಯಾಷನ್‌ ಅಂಡ್‌ ಜುವೆಲರ್ಸ್‌ ಅಂಗಡಿಯಲ್ಲಿ ಕಳ್ಳತನ ಮಾಡಲಾಗಿತ್ತು. ಕಳ್ಳತನ ಮಾಡಿ ಒಂದು ವರ್ಷದ ಬಳಿಕ ಮಾಲ್‌ ಸಮೇತ ಖಾಕಿ ಬಲೆಗೆ ಬಿದ್ದ ಬುರ್ಖಾ ಗ್ಯಾಂಗ್‌. ಬುರ್ಖಾ ಗ್ಯಾಂಗ್‌ ಚಿನ್ನದ ಬಾಕ್ಸ್‌ ಕದ್ದಿದ್ದ ವೀಡಿಯೋ ಅಂಗಡಿಯ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ. ಎಪ್ಪತ್ತೆಂಟು ಗ್ರಾಂ ತೂಕದ ಏಳು ಲಕ್ಷ ಬೆಲೆ ಬಾಳುವ ಹದಿನಾರು ಜೊತೆ ಓಲೆ ಬಾಕ್ಸ್‌ ಕದ್ದಿದ್ದ ಗ್ಯಾಂಗ್‌ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಸಿಸಿ ಕ್ಯಾಮೇರಾ ವೀಡಿಯೋ ಆಧರಿಸಿ ಬುರ್ಕಾ ಗ್ಯಾಂಗ್‌ ಗೆ ಬಲೆ ಬೀಸಿದ್ದ ಖಾಕಿ ಪಡೆ. ಕೊನೆಗೂ ಐದು ಜನ ಮಹಿಳೆರಿದ್ದ ಖತರ್ನಾಕ್‌ ಬುರ್ಖಾ ಗ್ಯಾಂಗ್‌ ನ್ನು ಬಂಧನ ಮಾಡಲಾಗಿದೆ.

ಕೋಲಾರ ಮೂಲದ ನಗ್ಮಾ, ಜರೀನಾ, ನಗೀನಾ, ನವೀನಾ, ಮುಬೀನಾ ಬಂಧಿತ ಬುರ್ಖಾ ಗ್ಯಾಂಗ್‌.

ಕಳುವಾಗಿದ್ದ ಚಿನ್ನಾಭರಣಗಳನ್ನು ಅಂಗಡಿ ಮಾಲೀಕನಿಗೆ ಹಿಂದುರುಗಿಸಿದ ಪೊಲೀಸರು. ಆರೋಪಿಗಳಿಂದ ಎಪ್ಪತ್ತು ಗ್ರಾಂ ತೂಕದ ಸುಮಾರು ಏಳು ಲಕ್ಷ ಬೆಲೆ ಬಾಳುವ ಓಲೆ ಬಾಕ್ಸ್‌ ವಶಕ್ಕೆ ಪಡೆಯಲಾಗಿದೆ.

Ramesh Babu

Journalist

Recent Posts

ಸೆ.6ರಂದು ದೊಡ್ಡಬಳ್ಳಾಪುರದ ಹಲವೆಡೆ ವಿದ್ಯುತ್ ವ್ಯತ್ಯಯ

ದೊಡ್ಡಬಳ್ಳಾಪುರ: ನಗರದ 220/66/11 ಕೆ.ವಿ. ಕೆಐಎಡಿಬಿ ಉಪ ವಿದ್ಯುತ್ ಕೇಂದ್ರದಲ್ಲಿ ವಿದ್ಯುತ್ ಕಾಮಗಾರಿ ಕೈಗೊಳ್ಳಲಾಗುತ್ತಿರುವ ಹಿನ್ನೆಲೆಯಲ್ಲಿ ಸೆಪ್ಟೆಂಬರ್ 6ರಂದು ದೊಡ್ಡಬಳ್ಳಾಪುರ…

16 hours ago

ದೌರ್ಬಲ್ಯ – ಶೋಷಣೆ – ಸ್ವಾಭಿಮಾನ……

ಈ ಸಮಾಜ ಯಾವಾಗಲೂ ಬಹುತೇಕ ದುರ್ಬಲರ ಮೇಲೆ ಸವಾರಿ ಮಾಡುತ್ತದೆ. ಅದರಲ್ಲೂ ಈ ಹಣ ಕೇಂದ್ರೀಕೃತ ಆಧುನಿಕ ಸಮಾಜದಲ್ಲಿ ದುರ್ಬಲರೇ…

22 hours ago

ಕನ್ನಡದಲ್ಲಿ ಸಾಧನೆಗೈದ ವಿದ್ಯಾರ್ಥಿಗಳಿಗೆ ಗೌರವ

ದೊಡ್ಡಬಳ್ಳಾಪುರ: ಎಸ್‌ಎಸ್‌ಎಲ್‌ಸಿ ಹಾಗೂ ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಉತ್ತಮ ಸಾಧನೆ ಮಾಡಿದ ಮತ್ತು ಕನ್ನಡ ಭಾಷಾ ವಿಷಯದಲ್ಲಿ ಅತಿ ಹೆಚ್ಚು…

3 days ago

ಕ್ಷಯ ಮುಕ್ತ ಭಾರತ ಅಭಿಯಾನ: ಜಾಗೃತಿ ಜಾಥಾ, ಬೀದಿ ನಾಟಕದ ಮೂಲಕ ಅರಿವು

ದೊಡ್ಡಬಳ್ಳಾಪುರ: ಕ್ಷಯರೋಗ ಮುಕ್ತ ಭಾರತ ನಿರ್ಮಾಣದ ಸಂಕಲ್ಪದೊಂದಿಗೆ ತಾಲ್ಲೂಕಿನ ಬಾಶೆಟ್ಟಹಳ್ಳಿ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ‘ಟಿಬಿ ಮುಕ್ತ ಭಾರತ್ ಅಭಿಯಾನ’ದ…

3 days ago

ಎಕ್ಸ್‌ಪ್ರೆಸ್ ರೈಲು ಹರಿದು ಇಬ್ಬರು ಮಹಿಳೆಯರು, ಮಗು ಬಲಿ

ರೈಲ್ವೆ ಹಳಿ ಮೇಲೆ ನಡೆದುಕೊಂಡು ಹೋಗುತ್ತಿದ್ದವರ ಮೇಲೆ ಎಕ್ಸ್‌ಪ್ರೆಸ್ ರೈಲು ಹರಿದ ಪರಿಣಾಮ ಇಬ್ಬರು ಮಹಿಳೆಯರು ಹಾಗೂ ಒಂದು ಮಗು…

3 days ago

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

5 days ago