Categories: ಲೇಖನ

ಚಿನ್ನದ ಗಿರವಿ ಜಾಹೀರಾತು ಮತ್ತು ನಮ್ಮ ಸಮಾಜ…….

” ನೀವು ನಿಮ್ಮ ಒಡವೆಗಳನ್ನು ಅಡವಿಟ್ಟಿರುವಿರಾ. ( ಗಿರವಿ ) ಹಾಗಾದರೆ ಚಿಂತೆ ಬಿಡಿ. ನಾವು ಅದನ್ನು ಬಿಡಿಸಿ ಇಂದಿನ ಮಾರುಕಟ್ಟೆ ಬೆಲೆಗಿಂತ ಹೆಚ್ಚು ದರದಲ್ಲಿ ಕೊಂಡು ಉಳಿದ ಹಣವನ್ನು ನಿಮಗೆ ಕೂಡಲೇ ಕೊಡುತ್ತೇವೆ ”

ಹೀಗೆ ದಿನದ 24 ಗಂಟೆಯೂ ಟಿವಿಗಳಲ್ಲಿ ಪ್ರಖ್ಯಾತ ನಟನಟಿಯರು ವಿವಿಧ ಕಂಪನಿಗಳ ಹೆಸರಿನಲ್ಲಿ ಜಾಹೀರಾತು ನೀಡುತ್ತಾರೆ. ಅದು ಎಲ್ಲರಿಗೂ ತಿಳಿದಿದೆ.

ಗೆಳೆಯರೊಬ್ಬರು ಒಂದು ರಾತ್ರಿ ಕರೆ ಮಾಡಿ ದುಃಖದಿಂದ ಇದನ್ನು ವಿವರಿಸಿ ತುಂಬಾ ಭಾವುಕರಾದರು. ಬದುಕೇ ಜಿಗುಪ್ಸೆ ಮೂಡಿದೆ ಎಂದರು. ಆ ಜಾಹೀರಾತಿಗೂ ಅವರ ಜಿಗುಪ್ಸೆಗೂ ಇರುವ ಕಾರಣ ಸೂಕ್ಷ್ಮ ಮನಸ್ಸಿನವರಿಗೆ ಮತ್ತು ಈ ಸಮಾಜದ ಬಗ್ಗೆ ಆಳವಾಗಿ ತಿಳಿದಿರುವವರಿಗೆ ಖಂಡಿತ ಅರ್ಥವಾಗುತ್ತದೆ.

ಅವರು ಹೇಳಿದ್ದು ” ಸಾಮಾನ್ಯವಾಗಿ ನಮ್ಮ ಮನೆಯಲ್ಲಿ ಟಿವಿ ಸದಾ ಚಾಲನೆಯಲ್ಲಿರುತ್ತದೆ. ಮನೆಯಲ್ಲಿ ಒಬ್ಬರಲ್ಲ ಒಬ್ಬರು ನೋಡುತ್ತಲೇ ಇರುತ್ತಾರೆ. ನಾವು ತಿಂಡಿ ಊಟ ಎಲ್ಲವನ್ನೂ ಟಿವಿ ನೋಡುತ್ತಲೇ ತಿನ್ನುತ್ತೇವೆ. ಆಗ ಈ ಜಾಹಿರಾತು ಪ್ರತಿ ಹತ್ತು ನಿಮಿಷಕ್ಕೆ ಬರುತ್ತಲೇ ಇರುತ್ತದೆ. ನಾನು ಕಳೆದ ವರ್ಷ ತೀರಾ ಅನಿವಾರ್ಯ ಕಾರಣದಿಂದ ನಮ್ಮ ಮನೆಯಲ್ಲಿದ್ದ ಒಡವೆ ಗಿರವಿ ಇಟ್ಟಿದ್ದೇನೆ. ಈ ಏಪ್ರಿಲ್ ನಲ್ಲಿ ಅದನ್ನು ಬಿಡಿಸಿಕೊಳ್ಳಲು ಒಂದು ಹಣಕಾಸಿನ ವ್ಯವಸ್ಥೆ ಮಾಡಿದ್ದೆ. ಆದರೆ ಯಾವುದೋ ಕಾರಣದಿಂದ ಆ ಹಣಕಾಸಿನ ಒಪ್ಪಂದ ಸಾಧ್ಯವಾಗಲಿಲ್ಲ. ಈಗ ಈ ಜಾಹೀರಾತು ನನ್ನ ಮನಸ್ಸಿನ ಮೇಲೆ ಅಗಾಧ ಒತ್ತಡ ಹೇರುತ್ತಿದೆ. ಅದನ್ನು ನೋಡಿದಾಗಲೆಲ್ಲ ನನ್ನ ಮನಸ್ಸು ಉದ್ವೇಗಕ್ಕೆ ಒಳಗಾಗುತ್ತದೆ. ನೋವು ಅವಮಾನ ಅಸಹಾಯಕತೆಯಿಂದ ಮುದುಡುತ್ತದೆ. ಅದನ್ನು ಬಿಡಿಸಿ ಕೊಳ್ಳಲು‌ ಸಾಧ್ಯವಾಗದಿದ್ದಕ್ಕೆ ನನ್ನಲ್ಲಿ ಕೀಳರಿಮೆ ಉಂಟಾಗಿ ಮನಸ್ಸು ಖಿನ್ನತೆ ಒಳಗಾಗುತ್ತದೆ. ಊಟ ಸೇರುವುದಿಲ್ಲ. ಬಡ್ಡಿಯ ಕಂತುಗಳನ್ನು ಕೆಲವು ತಿಂಗಳುಗಳಿಂದ ಕಟ್ಟಿಲ್ಲ. ಬಹುಶಃ ಬಡ್ಡಿ ಜಾಸ್ತಿಯಾಗಿ ಆ ಒಡವೆಗಳು ನಮ್ಮಿಂದ ದೂರವಾಗಬಹುದು. ಈಗಾಗಲೇ ಕುಸಿದಿರುವ ನನ್ನ ಮಾನ ಮರ್ಯಾದೆ ಕುಟುಂಬದವರ ದೃಷ್ಟಿಯಲ್ಲಿ ಮತ್ತಷ್ಟು ಪಾತಾಳಕ್ಕೆ ಇಳಿಯುತ್ತದೆ. ಏನಾದರೂ ಮಾಡಿ ಆ ಜಾಹೀರಾತು ನಿಲ್ಲಿಸಲು ಸಾಧ್ಯವೇ ? ”

ಇದಕ್ಕೆ ಹೇಗೆ ಪ್ರತಿಕ್ರಿಯಿಸುವುದು ? ಸಮಸ್ಯೆಯ ಮೂಲ ಇರುವುದಾದರೂ ಎಲ್ಲಿ ? ಬಡತನವೇ ಒಂದು ಶಾಪವಾಗಿ ಕಾಡುತ್ತಿರುವುದೇಕೆ ? ಸಾಲ ಇಲ್ಲದ ಮಧ್ಯಮ ಮತ್ತು ಕೆಳ ಮಧ್ಯಮ ವರ್ಗದ ಕುಟುಂಬಗಳೇ ಇಲ್ಲ ಎನ್ನುವ ಪರಿಸ್ಥಿತಿ ನಿರ್ಮಾಣವಾಗಿರುವುದು ಏಕೆ ? ಲಕ್ಷಾಂತರ ಹಣ ನೀಡಿ ಈ ರೀತಿಯ ಹತ್ತಾರು ಕಂಪನಿಗಳು ಜಾಹೀರಾತು ನೀಡುವಷ್ಟು ಬೆಳೆದಿರುವುದು ಈ ವ್ಯವಹಾರ ಎಷ್ಟು ಆಳವಾಗಿ ಬೆಳೆದಿದೆ ಎಂಬುದಕ್ಕೆ ಒಂದು ಉದಾಹರಣೆ ಎಂದು ಪರಿಗಣಿಸಿದರೆ ನಮ್ಮ ಜನರ ಪರಿಸ್ಥಿತಿ ಎಷ್ಟು ಅಧೋಗತಿಗೆ ಇಳಿದಿರಬಹುದು ?

ನಮ್ಮ ಸಾಮಾಜಿಕ ವ್ಯವಸ್ಥೆಯನ್ನು ದುರ್ಬಲವಾಗಿ ನಿರ್ಮಿಸಲಾಗಿದೆ, ಅದರ ಪರಿಣಾಮ ವೈಯಕ್ತಿಕ ಮಾನಸಿಕ ಸ್ಥಿಮಿತತೆ ಕೂಡ ದುರ್ಬಲವಾಗಿದೆ. ಅದು ಕೌಟುಂಬಿಕ ವ್ಯವಸ್ಥೆಯ ಮೇಲೂ ಪರಿಣಾಮ ಬೀರಿದೆ.
ಅದರ ಫಲಿತಾಂಶ ಒಂದು ಜಾಹೀರಾತು ಸಹ ನಮ್ಮನ್ನು ಅಲುಗಾಡಿಸುತ್ತಿದೆ.

ಹಣದ ದುರ್ಬಲ ನಿರ್ವಹಣೆ ನಮ್ಮ ಸಾಮಾನ್ಯ ಜನರ ಬಹುದೊಡ್ಡ ಸಮಸ್ಯೆ. ಕುಟುಂಬದ ಬೇಡಿಕೆ ಮತ್ತು ಪೂರೈಕೆಗಳ ಮಧ್ಯೆ ಹೊಂದಾಣಿಕೆ ಮಾಡಿಕೊಳ್ಳಲು ಸಾಧ್ಯವಾಗುತ್ತಿಲ್ಲ. ನಮ್ಮ ಸುತ್ತಮುತ್ತಲಿನ ಜನರ ಜೀವನ ಕ್ರಮದ ಒತ್ತಡ ನಮ್ಮ ಮೇಲೆ ಬೀಳುತ್ತದೆ. ಅವರಂತೆ ನಾವು ಅಥವಾ ಅವರಿಗಿಂತ ಹೆಚ್ಚು ಇರಬೇಕು ಎಂಬ ಮನೋಭಾವ, ಅವರ ದೌರ್ಬಲ್ಯ ಗುರುತಿಸದೆ ಬಾಹ್ಯ ಚಟುವಟಿಕೆಗಳು ಮಾತ್ರ ನಮ್ಮ ಕಣ್ಣಿಗೆ ಕಾಣುವುದು, ಹೆಂಡತಿ ಮಕ್ಕಳ ಆಸೆ ಪೂರೈಸುವ ತವಕ, ಸ್ವಂತ ಮನೆ, ಟಿವಿ, ಫ್ರಿಡ್ಜ್, ವಾಷಿಂಗ್ ಮಿಷನ್, ಮೊಬೈಲ್, ಕಾರು, ಪ್ರತಿಷ್ಠಿತ ಶಾಲೆ, ಬಟ್ಟೆಗಳು ಎಲ್ಲವನ್ನೂ ಈಗ ಅವಶ್ಯಕ ವಸ್ತುಗಳು ಎಂದು ಪರಿಗಣಿಸಿರುವುದು, ಅದಕ್ಕೆ ತಕ್ಕಂತೆ ನಿರ್ದಿಷ್ಟ ಆದಾಯ ಇಲ್ಲದಿರುವುದು, ಅದು ನಮಗೆ ಅರಿವಾಗದಿರುವುದು ಎಲ್ಲವೂ ಒಟ್ಟಾಗಿ ಸೇರಿ ನಮ್ಮ ಮೂಲ ಮಾನಸಿಕ ಸ್ಥಿತಿ ಸಂಪೂರ್ಣ ಬದಲಾಗಿದೆ. ಆದ್ಯತೆಗಳನ್ನು ಸರಿಯಾಗಿ ಗುರುತಿಸಲು ಸಾಧ್ಯವಾಗುತ್ತಿಲ್ಲ. ಗುರುತಿಸಿದರೂ ಕುಟುಂಬ ವ್ಯವಸ್ಥೆ ಅದನ್ನು ಪಾಲಿಸಲು ಬಿಡುತ್ತಿಲ್ಲ.

ಅದರ ಪರಿಣಾಮವೇ ಈ ಜಾಹೀರಾತುಗಳ ಉಗಮ. ಅದನ್ನು ತಡೆಯುವುದು ಸಾಧ್ಯವಿಲ್ಲ. ನಮ್ಮನ್ನು ನಿಯಂತ್ರಿಸಿಕೊಳ್ಳಬೇಕು ನಿಜ, ಆದರೆ ಅದೂ ಕಷ್ಟ. ಮೊದಲೇ ಕುಂಟುತ್ತಾ ಸಾಗುತ್ತಿದ್ದ ಬಹಳಷ್ಟು ಜನರ ಜೀವನ ಅತಿಯಾದ ಬೆಲೆ ಏರಿಕೆ ಮತ್ತು ತೆರಿಗೆಯ ಕಾರಣದಿಂದ ಮಲಗಿಬಿಟ್ಟಿದೆ. ಬಹಿರಂಗವಾಗಿ ಹೇಳಿಕೊಳ್ಳಲಾಗದ ಒತ್ತಡ ಕುಟುಂಬದ ಜವಾಬ್ದಾರಿ ನಿರ್ವಹಿಸುವವರ ಮೇಲಿದೆ. ಮುಂದಿನ ಕೆಲವು ವರ್ಷಗಳು ಇನ್ನೂ ಒತ್ತಡ ಹೆಚ್ಚಿಸುತ್ತವೆ.

ಪರಿಹಾರ ?….

ಈ ವಿಚಿತ್ರ ಸನ್ನಿವೇಶಕ್ಕೆ ಎಲ್ಲರಿಗೂ ಸಮನಾಗಿ ಅನ್ವಯವಾಗುವ ಯಾವುದೇ ಫಾರ್ಮುಲ ಇಲ್ಲ. ಹಣದ ಹರಿವು ಹೆಚ್ಚಿಸಿಕೊಳ್ಳುವುದು ಕಷ್ಟ. ಒಬ್ಬೊಬ್ಬರ ಮಾನಸಿಕ ಮತ್ತು ಆರ್ಥಿಕ ಪರಿಸ್ಥಿತಿ ಭಿನ್ನವಾಗಿದೆ. ಆದ್ದರಿಂದ ನಮ್ಮ ಇಡೀ ಪರಿಸ್ಥಿತಿಯನ್ನು ತಾವೇ ಪರಾಮರ್ಶಿಸಿಕೊಂಡು ಬಂದದ್ದೆಲ್ಲಾ ಬರಲಿ ಧೈರ್ಯವಾಗಿ ಎದುರಿಸೋಣ ಎಂದು ದೃಢ ನಿರ್ಧಾರ ಮಾಡಬೇಕು. ನಮಗಿಂತ ಕಷ್ಟದಲ್ಲಿರುವ ಎಷ್ಟೋ ಜನರನ್ನು ನೋಡಿ ಅವರಿಗಿಂತ ನಾವು ಉತ್ತಮ ಸ್ಥಿತಿಯಲ್ಲಿ ಇದ್ದೇವೆ ಎಂದು ಸಮಾಧಾನ ಮಾಡಿಕೊಳ್ಳಬೇಕು. ಮಾನ ಮರ್ಯಾದೆ ಅವಮಾನ ಎಂಬುದನ್ನು ಸ್ವಲ್ಪ ದಿನ ಮೂಟೆ ಕಟ್ಟಿ ಮನೆಯ ಅಟ್ಟದ ಮೇಲೆ ಇಡಬೇಕು. ಎಲ್ಲರ ನಿಂದನೆ ಸಹಿಸಿಕೊಳ್ಳುವ ಸ್ಥಿತ ಪ್ರಜ್ಞೆತೆ ಬೆಳೆಸಿಕೊಳ್ಳಬೇಕು.

ಮುಂದಿನ ದಿನಗಳು ಯಾವುದೇ ಕ್ಷಣದಲ್ಲಿ ಬದಲಾಗಿ ಪರಿಸ್ಥಿತಿ ಉತ್ತಮವಾಗುತ್ತದೆ ಎಂಬ ಆಶಾಭಾವನೆಯಿಂದ ಬದುಕನ್ನು ಎದುರಿಸಬೇಕು. ಕಷ್ಟಗಳನ್ನೇ ಸೋಲಿಸುವ, ಕಷ್ಟಗಳೇ ನಾಚಿಕೆ ಪಡುವಂತ, ಕಷ್ಟಗಳೇ ಅರಿವಾಗದಂತ ಮಾನಸಿಕ ಸ್ಥಿತಿ ತಲುಪಲು ಪ್ರಯತ್ನಿಸಬೇಕು. ಅದು ನಮ್ಮ ಮೊದಲ ಆದ್ಯತೆಯಾಗಬೇಕು. ಮುಂದೆ ನೋಡೋಣ.
ಎಲ್ಲರಿಗೂ ಒಳ್ಳೆಯದಾಗಲಿ…..

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ,
ಜನರ ಜೀವನಮಟ್ಟ ಸುಧಾರಣೆಯ ಗುರಿಯೊಂದಿಗೆ,
ಮನಗಳಲ್ಲಿ, ಮನೆಗಳಲ್ಲಿ, ಮತಗಳಲ್ಲಿ, ಪರಿವರ್ತನೆಗಾಗಿ,
ಮನಸ್ಸುಗಳ ಅಂತರಂಗದ ಚಳವಳಿ

ಲೇಖಕ-ವಿವೇಕಾನಂದ. ಎಚ್.ಕೆ

Ramesh Babu

Journalist

Recent Posts

The Ultimate Overview to Free Online Live Roulette Game

Are you a fan of gambling enterprise video games? Do you appreciate the excitement of…

4 hours ago

ಕೋರ್ಟ್ ರಸ್ತೆಯಲ್ಲಿ ಭೀಕರ ಅಪಘಾತ: ಇಬ್ಬರು ಸಾವು

ಟ್ರ್ಯಾಕ್ಟರ್ ಮತ್ತು ಬೈಕ್ ನಡುವೆ ಮುಖಾಮುಖಿ ಡಿಕ್ಕಿಯಾಗಿ ಸ್ಥಳದಲ್ಲೇ ಓರ್ವ ಬೈಕ್ ಸಾವನ್ನಪ್ಪಿದರೆ, ಮತ್ತೋರ್ವ ಚಿಕಿತ್ಸೆ ಫಲಕಾರಿಯಾಗದೇ ಸಾವನ್ನಪ್ಪಿರುವ ಘಟನೆ…

14 hours ago

ಕೆಯುಡಬ್ಲ್ಯೂಜೆ ಪ್ರತಿಭಾ ಪುರಸ್ಕಾರಕ್ಕೆ ಅರ್ಜಿ ಆಹ್ವಾನ

ಎಸ್ಎಸ್ಎಲ್ ಸಿ ಮತ್ತು ಪಿಯುಸಿ ಪರೀಕ್ಷೆಯಲ್ಲಿ ಶೇ.90ಕ್ಕೂ ಹೆಚ್ಚು ಅಂಕಗಳಿಸಿದ ಪತ್ರಕರ್ತರ ಮಕ್ಕಳ ಪ್ರತಿಭಾ ಪುರಸ್ಕಾರಕ್ಕಾಗಿ ಕರ್ನಾಟಕ ಕಾರ್ಯನಿರತ ಪತ್ರಕರ್ತರ…

17 hours ago

Instant Play Casino

Instant play casinos allow you to play casino games online without installing any software. These…

1 day ago

ಎಸ್ಸೆಸ್ಸೆಲ್ಸಿ ಪರೀಕ್ಷೆ-01 ಫಲಿತಾಂಶ ಪ್ರಕಟ: ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆ ವಿದ್ಯಾರ್ಥಿನಿಗೆ 625ಕ್ಕೆ 622 ಅಂಕ: ನಮ್ಮ ತಪಸ್ಸಿಗೆ ಸಿಕ್ಕ ಯಶಸ್ಸು- ಶಾಲಾ ಸಂಸ್ಥಾಪಕ ಶ್ರೀನಿವಾಸ್ ಮೂರ್ತಿ

2025-26ನೇ ಸಾಲಿನ ಎಸ್.ಎಸ್.ಎಲ್.ಸಿ. ಪರೀಕ್ಷೆ-1 ರ ಫಲಿತಾಂಶ ಪ್ರಕಟಗೊಂಡಿದ್ದು, ದೊಡ್ಡಬಳ್ಳಾಪುರ ತಾಲೂಕಿನ ಕಂಟನಕುಂಟೆ ಗ್ರಾಮದ ಲಿಟ್ಲ್ ಮಾಸ್ಟರ್ ಪಬ್ಲಿಕ್ ಶಾಲೆಯು…

1 day ago

ಬಡಪಾಯಿ ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಆರೋಪ

ಟೀ ಅಂಗಡಿ ಹುಡುಗನ ಮೇಲೆ ಪೊಲೀಸ್ ಇನ್ಸ್ ಪೆಕ್ಟರ್ ದರ್ಪ ಮೆರೆದಿರುವ ಘಟನೆ ದೇವನಹಳ್ಳಿಯ ಕನ್ನಮಂಗಲ ಗ್ರಾಮದಲ್ಲಿ ಹಾದುಹೋಗುವ ರಾಷ್ಟ್ರೀಯ…

2 days ago