ಶನಿವಾರ ಸಂತೆ ವ್ಯಾಪ್ತಿಯ ಗೌಡಳ್ಳಿ ಗ್ರಾಮದಲ್ಲಿ ನಡೆದ ಚಿನ್ನಾಭರಣಗಳ ಕಳವು ಪ್ರಕರಣ ಸಂಬಂಧಿಸಿದಂತೆ ಶನಿವಾರಸಂತೆ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ.
ಆರೋಪಿ ಶನಿವಾರ ಸಂತೆಯ ಚೆಸ್ಕಾಂ ನ ಲೈನ್ ಮ್ಯಾನ್ ಹೊಳೆನರಸೀಪುರ ಮೂಲದ ಸಂದೀಪ್ ಆರ್(27 ) ಎಂಬುವನಿಂದ 27 ಗ್ರಾಂ ಚಿನ್ನಾಭರಣಗಳನ್ನು ವಶಪಡಿಸಿಕೊಳ್ಳಲಾಗಿದೆ.
ಕಳೆದ ಜುಲೈ 28ರಂದು ಗೌಡಳ್ಳಿ ಗ್ರಾಮದ ನಿವಾಸಿ ಅಣ್ಣಯ್ಯ ಮೇಲಿದ್ದ ಸಂದರ್ಭ ರಾತ್ರಿ 8:30 ಸಮಯದಲ್ಲಿ ಅಪರಿಚಿತ ವ್ಯಕ್ತಿ ಒಬ್ಬ ನುಗ್ಗಿ ಅಣ್ಣಯ್ಯ ಅವರು ಧರಿಸಿದ್ದ ಮಂಕಿ ಕ್ಯಾಪ್ ಅನ್ನು ಕಣ್ಮುಚ್ಚುವಂತೆ ಎಳೆದು ಕುತ್ತಿಗೆಯಲ್ಲಿದ್ದ 27 ಗ್ರಾಂ ಚಿನ್ನದ ಸರವನ್ನು ಕಸಿದುಕೊಂಡು ಪರಾರಿ ಆಗಿರುವ ಕುರಿತು ಶನಿವಾರ ಸಂತೆ ಠಾಣೆಯಲ್ಲಿ ದೂರು ನೀಡಿದ್ದರು.
ಪೊಲೀಸರು ದೂರು ದಾಖಲೆ ಮಾಡಿಕೊಂಡು ಸೋಮವಾರಪೇಟೆ ತಾಲೂಕು ಡಿ ವೈ ಎಸ್ ಪಿ ಗಂಗಾಧರಪ್ಪ ಅವರ ನೇತೃತ್ವದಲ್ಲಿ ವೃತ್ತ ನಿರೀಕ್ಷಕರಾದ ಪ್ರೀತಮ್ ಡಿ ಶ್ರೇಯಕ್ಕರ್ ಹಾಗೂ ಠಾಣಾಧಿಕಾರಿ ಗೋವಿಂದ್ ರಾಜು ಹಾಗೂ ಸಿಬ್ಬಂದಿ ತಂಡ ಕಾರ್ಯಚರಣೆ ನಡೆಸಿ ಆರೋಪಿಯನ್ನು ಬಂಧಿಸಿದ್ದಾರೆ. ಶೀಘ್ರದಲ್ಲಿ ಕಳ್ಳನನ್ನು ಬಂಧಿಸಿದ್ದನ್ನು ಶನಿವಾರ ಸಂತೆಯ ಕರ್ನಾಟಕ ರಕ್ಷಣಾ ವೇದಿಕೆಯ ಅಧ್ಯಕ್ಷರಾದ ಫ್ರಾನ್ಸಿಸ್ ಡಿಸೋಜಾ ಶ್ಲಾಘಿಸಿ ಅಭಿನಂದಿಸಿದ್ದಾರೆ.
ದೇವನಹಳ್ಳಿ: ಕರ್ನಾಟಕ ಸರ್ಕಾರದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು 2026–27ನೇ ಸಾಲಿನ ರಾಜ್ಯಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿಗೆ ಆಯ್ಕೆಯಾದ…
ಮೇಕೆದಾಟು ಯೋಜನೆಯ ಶೀಘ್ರ ಜಾರಿಗಾಗಿ ಜಲಸಂಪನ್ಮೂಲ ಸಚಿವರು ತೀವ್ರ ಒಲವು ತೋರಿದ್ದು, ಕಾಮಗಾರಿಗೆ ಇನ್ನಷ್ಟು ವೇಗ ನೀಡುವ ನಿಟ್ಟಿನಲ್ಲಿ ರಾಜ್ಯದ…
ತೂಬಗೆರೆ: ಹೋಬಳಿಯ ಯದ್ದಲಹಳ್ಳಿ ಸಮೀಪದ ಶ್ರೀರಂಗವನದಲ್ಲಿರುವ ಶ್ರೀ ವೇಣುಗೋಪಾಲಕೃಷ್ಣ ದೇವಸ್ಥಾನದಲ್ಲಿ ಶ್ರೀಕೃಷ್ಣ ಜನ್ಮಾಷ್ಟಮಿ ಅಂಗವಾಗಿ ವಿಶೇಷ ಪೂಜೆ, ಅಭಿಷೇಕ ಹಾಗೂ…
ಮತದಾರರ ಪಟ್ಟಿ ವಿಶೇಷ ಪರಿಷ್ಕರಣೆಗೆ ಸಂಬಂಧಿಸಿದಂತೆ ಕರಡು ಮತದಾರ ಪಟ್ಟಿ ಪ್ರಕಟಗೊಂಡಿದ್ದು ಮತದಾರರ ಪಟ್ಟಿಯಲ್ಲಿ ಹೆಸರಿಲ್ಲದ ಅರ್ಹ ಮತದಾರರು ಮತಗಟ್ಟೆ…
ದೊಡ್ಡಬಳ್ಳಾಪುರ: ರೈಲಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ಅಪರಿಚಿತ ವ್ಯಕ್ತಿಯೊಬ್ಬರು ಚಿಕಿತ್ಸೆ ಫಲಿಸದೆ ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ರೈಲು ನಿಲ್ದಾಣದ ಸಮೀಪ…
ರಾಜ್ಯದಲ್ಲಿ ಎದುರಾಗಿರುವ ಮಳೆ ಕೊರತೆ ಹಾಗೂ ಬರ ಪರಿಸ್ಥಿತಿಯನ್ನು ಸಮರ್ಥವಾಗಿ ಎದುರಿಸುವ ಸಲುವಾಗಿ, ರಾಜ್ಯ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾದ 'ಮೋಡ…