ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..
ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.
ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.
ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಜೆಸಿಬಿ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿ ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ್ದು, ಮತ್ತೋರ್ವನಿಗೆ ಗಾಯಗಳಾಗಿರುವ ಘಟನೆ ನಿನ್ನೆ…
ದೊಡ್ಡಬಳ್ಳಾಪುರ ನಗರದ ಸಾರ್ವಜನಿಕ ಆಸ್ಪತ್ರೆಗೆ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷೆ ನಾಗಲಕ್ಷ್ಮೀ ಚೌಧರಿ ಇಂದು ದಿಢೀರ್ ಭೇಟಿ ನೀಡಿ, ಆಸ್ಪತ್ರೆಯಲ್ಲಿನ…
ದೊಡ್ಡಬಳ್ಳಾಪುರ ತಾಲೂಕಿನ ಹಾದ್ರೀಪುರ ಗ್ರಾಮದ ಸರ್ಕಾರಿ ಶಾಲೆಯಲ್ಲಿ ಮಕ್ಕಳ ಹಕ್ಕುಗಳ ಸಂರಕ್ಷಣೆ ಕುರಿತು ಗ್ರಾಮ ಸಭೆಯನ್ನು ಆಯೋಜಿಸಲಾಗಿತ್ತು. ಗ್ರಾಮ ಸಭೆಯಲ್ಲಿ…
ಡಿ.25ರಂದು ದಕ್ಷಿಣ ಭಾರತದ ಇತಿಹಾಸ ಪ್ರಸಿದ್ಧ ಶ್ರೀ ಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವರ ಬ್ರಹ್ಮರಥೋತ್ಸವ ನಡೆಯಲಿದೆ.... ಬ್ರಹ್ಮರಥೋತ್ಸವವನ್ನು ಸುಸೂತ್ರವಾಗಿ ನಡೆಸಲು…
ದ್ವೇಷ ಭಾಷಣ ತಡೆ ಮಸೂದೆಯ ಬಗ್ಗೆ ಬಿಜೆಪಿಗೆ ಮಾತ್ರ ಏಕೆ ಆತಂಕ? ದ್ವೇಷ ಭಾಷಣ ತಡೆ ಮಸೂದೆ ಕೆಲವರನ್ನು ಗುರಿಯಾಗಿಸಿಕೊಂಡು…
ದಲಿತ ಯುವಕನ ಮದುವೆಯಾಗಿದ್ದಕ್ಕೆ ತಂದೆಯೇ 7 ತಿಂಗಳ ಗರ್ಭಿಣಿ ಮಗಳನ್ನು ಭೀಕರವಾಗಿ ಹತ್ಯೆ ಮಾಡಿದ ಘಟನೆ ಸಂಬಂಧ ಎಸ್ಪಿ ಗುಂಜನ್…