ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..

ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.

ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.

ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಜೆಡಿಎಸ್ ಕಾರ್ಯಕರ್ತರನ್ನ ಮುಟ್ಟಬೇಡಿ- ಶಾಸಕ ಧೀರಜ್ ಮುನಿರಾಜುಗೆ ಜೆಡಿಎಸ್ ನೂತನ ಜಿಲ್ಲಾಧ್ಯಕ್ಷ ಖಡಕ್ ಮಾತು: ಮುಂದಿನ 20 ದಿನದೊಳಗಾಗಿ ತಾಲೂಕು ಪದಾಧಿಕಾರಿಗಳ ನೇಮಕ

ನಮ್ಮ ಕಾರ್ಯಕರ್ತರನ್ನು ಮುಟ್ಟಬೇಡಿ, ಆಸೆ ಆಮಿಷವೊಡ್ಡಿ ನಿಮ್ಮ ಪಕ್ಷಕ್ಕೆ ಸೇರಿಸಿಕೊಳ್ಳಬೇಡಿ. ನಮ್ಮ ಕಾರ್ಯಕರ್ತರನ್ನು ನಿಮ್ಮ ಪಕ್ಷಕ್ಕೆ ಸೇರಿಸುತ್ತೇವೆ ಎಂದು ಹೇಳಿಲ್ಲ.…

4 hours ago

ಮೊಬೈಲ್ ಚಾರ್ಜಿಂಗ್ ಶಾರ್ಟ್ ಸರ್ಕಿಟ್: ಮನೆಯಲ್ಲಿ ದಟ್ಟ ಹೊಗೆ: ಭಯಭೀತರಾದ ಜನ: ತಪ್ಪಿದ ಭಾರೀ ಅನಾಹುತ

ಮೊಬೈಲ್ ಚಾರ್ಜ್ ಆಗುತ್ತಿರುವಾಗ ಶಾರ್ಟ್ ಸರ್ಕಿಟ್ ಆಗಿ ಮನೆಯಲ್ಲಿ ದಟ್ಟಹೊಗೆ ಆವರಿಸಿಕೊಂಡು ಕೆಲಕಾಲ ಎಲ್ಲರಲ್ಲಿ ಆತಂಕ ಮೂಡಿಸಿದ್ದ ಘಟನೆ ದೊಡ್ಡಬಳ್ಳಾಪುರ…

8 hours ago

ವೈಚಾರಿಕ ( ವೈಜ್ಞಾನಿಕ ) ಅಧ್ಯಾತ್ಮ………

ಅಧ್ಯಾತ್ಮ ಮತ್ತು ಸದ್ಗುರು ಜಗ್ಗಿ ವಾಸುದೇವ್........ ಇತ್ತೀಚಿನ ವರ್ಷಗಳಲ್ಲಿ ಹೆಚ್ಚು ಜನಪ್ರಿಯರಾದ ಅಧ್ಯಾತ್ಮ ಗುರು. ಅಧ್ಯಾತ್ಮಿಕ ಚಿಂತಕರಲ್ಲಿ ವಿವಿಧ ರೀತಿಯ…

9 hours ago

ಐಸಿಸಿ ಟಿ-20 ವಿಶ್ವಕಪ್ ಟೂರ್ನಿ: ಪಾಕಿಸ್ತಾನ ತಂಡವನ್ನು 61 ರನ್ ಗಳಿಂದ ಬಗ್ಗುಬಡಿದ ಭಾರತ: ದೇಶದ ಜನತೆಗೆ ಮಹಾಶಿವರಾತ್ರಿ ಗಿಫ್ಟ್

ಕೊಲಂಬೊದ ಪ್ರೇಮದಾಸ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಐಸಿಸಿ ಟಿ-20 ವಿಶ್ವಕಪ್ ಟೂರ್ನಿಯ ಗ್ರೂಪ್ ಹಂತದ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಭಾರತ…

10 hours ago

ಫೆ.26ರಂದು ಪ್ರಸಿದ್ದ ಮಧುರೆ ಶನಿಮಹಾತ್ಮಸ್ವಾಮಿ 71ನೇ ಬ್ರಹ್ಮರಥೋತ್ಸವ

ಫೆ.26ರಂದು ದೊಡ್ಡಬಳ್ಳಾಪುರ ತಾಲ್ಲೂಕಿನ ಪ್ರಸಿದ್ದ ಚಿಕ್ಕಮಧುರೆ ಶ್ರೀ ಶನಿಮಹಾತ್ಮಸ್ವಾಮಿಯ 71ನೇ ಬ್ರಹ್ಮರಥೋತ್ಸವವು ವಿಜೃಂಭಣೆಯಿಂದ ನೆರವೇರಲಿದೆ ಎಂದು ದೇವಾಲಯದ ಪ್ರಧಾನ ಅರ್ಚಕ…

20 hours ago