ಚಿನ್ನಾಭರಣ ಮಳಿಗೆಯಲ್ಲಿ ದರೋಡೆ….3 ಕೋಟಿ ಮೌಲ್ಯದ 140 ಕೆಜಿ ಬೆಳ್ಳಿ ಅಭರಣಗಳ ಕಳವು

ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..

ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.

ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.

ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.

ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.

ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.

Ramesh Babu

Journalist

Recent Posts

ಟಾಕ್ಸಿಕ್

ಕ್ರಿಯಾತ್ಮಕತೆ ಮತ್ತು ಪ್ರಯತ್ನಗಳಿಗೂ ಒಂದಷ್ಟು ಮಿತಿ ಇರುತ್ತದೆ. ಏಕೆಂದರೆ ನಾವು ಸಾಮಾನ್ಯ ಮನುಷ್ಯರು. ಹಣ, ಜನಪ್ರಿಯತೆ, ಅಧಿಕಾರ ಬಂದ ತಕ್ಷಣ…

2 days ago

ಚಿ.ನಾ.ಹಳ್ಳಿ ತಾಲ್ಲೂಕಿಗೆ ಸಿಇಒ ದಿಢೀರ್ ಭೇಟಿ: ವಿವಿಧ ಅಭಿವೃದ್ಧಿ ಕಾಮಗಾರಿಗಳ ಪರಿಶೀಲನೆ

ಚಿಕ್ಕನಾಯಕನಹಳ್ಳಿ: ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಅಶ್ವಿಜ ಬಿ.ವಿ. ಅವರು ತಾಲ್ಲೂಕಿಗೆ ದಿಢೀರ್ ಭೇಟಿ ನೀಡಿ ವಿವಿಧ ಅಭಿವೃದ್ಧಿ…

2 days ago

ಮಧ್ಯಪ್ರದೇಶದಲ್ಲಿ ಭೀಕರ ರಸ್ತೆ ಅಪಘಾತ: ಬೆಂಗಳೂರು ಸೈಬರ್ ಕ್ರೈಂ ಇನ್‌ಸ್ಪೆಕ್ಟರ್ ಸೇರಿ ನಾಲ್ವರು ಬಲಿ

ಬೆಂಗಳೂರು: ಆರೋಪಿಯ ಹುಡುಕಾಟಕ್ಕೆ ತೆರಳುತ್ತಿದ್ದ ಬೆಂಗಳೂರು ಸೈಬರ್ ಕ್ರೈಂ ತಂಡ ಪ್ರಯಾಣಿಸುತ್ತಿದ್ದ ಬಸ್ ಮಧ್ಯಪ್ರದೇಶದಲ್ಲಿ ಭೀಕರ ಅಪಘಾತಕ್ಕೀಡಾಗಿ, ಪೊಲೀಸ್ ಇನ್‌ಸ್ಪೆಕ್ಟರ್…

2 days ago

ರಕ್ಷಾ ಬಂಧನ ಮತ್ತು ಮದರ್ ತೆರೇಸಾ

ಮದರ್‌ ತೆರೇಸಾ - ಆಗಸ್ಟ್ 26, 1910..... ರಸ್ತೆ ಬದಿಯ ಹರಕಲು ಬಟ್ಟೆಯ ಭಿಕ್ಷುಕರನ್ನು ನೋಡಲೇ ಅಸಹ್ಯಪಡುವ ಪರಿಸ್ಥಿತಿ ಇರುವಾಗ…

3 days ago

ರೈತಪರ ಯೋಜನೆ : ವಿಬಿ-ಜಿ ರಾಮ್ ಜಿ ಯೋಜನೆ

ಚಿಕ್ಕನಾಯಕನಹಳ್ಳಿ: ರೈತರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಜುಲೈ.1 ರಿಂದ ವಿಕಸಿತ ಭಾರತ್ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ)…

3 days ago

ಮೂರು ತಾಲೂಕು ಬರದ ಪಟ್ಟಿಗೆ; ದೊಡ್ಡಬಳ್ಳಾಪುರಕ್ಕೆ ವಿನಾಯಿತಿ

ಬೆಂಗಳೂರು ಗ್ರಾಮಾಂತರ: ಮುಂಗಾರು ಮಳೆ ಕೊರತೆಯಿಂದ ರಾಜ್ಯದ 101 ತಾಲೂಕುಗಳನ್ನು ಬರಪೀಡಿತ ಎಂದು ಸರ್ಕಾರ ಘೋಷಿಸಿದ್ದು, ಬೆಂಗಳೂರು ಗ್ರಾಮಾಂತರ ಜಿಲ್ಲೆಯ…

3 days ago