ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..
ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.
ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.
ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ಪ್ರವಾಸ ಕಥನಗಳ ಬಗ್ಗೆ ಬಹಳ ಹಿಂದಿನಿಂದಲೂ ಸಾಕಷ್ಟು ಲೇಖನಗಳನ್ನು ಓದುತ್ತಲೇ ಇರುತ್ತೇನೆ. ಅದು ಪ್ರವಾಸೋದ್ಯಮಕ್ಕಾಗಿಯಲ್ಲ. ಏಕೆಂದರೆ ಪ್ರವಾಸ ವ್ಯಾಪಾರಿಗಳಿಗೆ ಒಂದು…
ಜಿಲ್ಲೆಯಲ್ಲಿ ಕಳೆದ ಎರಡು ತಿಂಗಳಲ್ಲಿ ವಾಡಿಕೆ ಮಳೆಗಿಂತ ಶೇಕಡ 33 ರಷ್ಟು ಮಳೆ ಕೊರತೆಯಾಗಿದ್ದು ಮುಂದಿನ ದಿನಗಳಲ್ಲಿ ಜನ-ಜಾನುವಾರುಗಳಿಗೆ ಕುಡಿಯುವ…
ದೊಡ್ಡಬಳ್ಳಾಪುರ: ಸಮರ್ಪಕ ಮಳೆಯ ಕೊರತೆಯಿಂದ ಬರ ಪರಿಸ್ಥಿತಿ ಎದುರಿಸುತ್ತಿರುವ ದೊಡ್ಡಬಳ್ಳಾಪುರ ಕ್ಷೇತ್ರದ ರೈತರಿಗೆ ನೆರವಾಗುವ ಉದ್ದೇಶದಿಂದ, ಕ್ಷೇತ್ರದ ಪ್ರಮುಖ ಬೆಳೆಯಾದ…
ಗೌರಿಬಿದನೂರು: ಕೋಳಿ ವಿಚಾರವಾಗಿ ಆರಂಭವಾದ ನೆರೆಹೊರೆಯವರ ನಡುವಿನ ಜಗಳ ಗಂಭೀರ ಸ್ವರೂಪ ಪಡೆದು, ಸಾರ್ವಜನಿಕ ಆಸ್ಪತ್ರೆಯೊಳಗೂ ಗಲಾಟೆ ನಡೆದ ಘಟನೆ…
ಕನ್ನಡದ ಖ್ಯಾತ, ಪ್ರತಿಭಾವಂತ ಚಲನಚಿತ್ರ ನಟ, ಪದ್ಮಶ್ರೀ ಪ್ರಶಸ್ತಿ ಪುರಸ್ಕೃತ ಶ್ರೀ ಅನಂತನಾಗ್ ಅವರು ಇತ್ತೀಚೆಗೆ ಕಾರ್ಯಕ್ರಮವೊಂದರಲ್ಲಿ ಮಾತನಾಡುತ್ತಾ ದೆಹಲಿಯ…
ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರ ಗ್ರಾಮದ ವೃದ್ಧ ದಂಪತಿ ಆತ್ಮಹತ್ಯೆಗೆ ಯತ್ನಿಸಿ ಪತಿ ಶಿವಪ್ಪ(76) ಸಾವನ್ನಪ್ಪಿರುವ ಘಟನೆ ದೊಡ್ಡಬಳ್ಳಾಪುರ ತಾಲ್ಲೂಕಿನ…