ಚಿಕ್ಕಬಳ್ಳಾಪುರ ನಗರದ ಬಿ ಬಿ ರಸ್ತೆಯಲ್ಲಿರುವ ಎಯು ಜ್ಯುವೆಲ್ಲರಿ ಶಾಪ್ ಗೆ ಕನ್ನ ಹಾಕಿರುವ ಕಳ್ಳರು ಸರಿಸುಮಾರು 3 ಕೋಟಿ ಮೌಲ್ಯದ 140 ಕ್ಕೂ ಅಧಿಕ ಕೆಜಿ ಬೆಳ್ಳಿ ಅಭರಣಗಳನ್ನ ಕಳವು ಮಾಡಿದ್ದಾರೆ…..
ಕಳೆದ ರಾತ್ರಿ ಚಿನ್ನದಂಗಡಿಯ ಬಾಗಿಲಿನ ಬೀಗಗಳನ್ನ ಕಟ್ ಮಾಡಿರುವ ಕಳ್ಳರು, ಷೋ ಕೇಸ್ ನಲ್ಲಿ ಡಿಸ್ ಪ್ಲೇ ಮಾಡಿದ್ದ ಎಲ್ಲಾ ಅಭರಣಗಳನ್ನ ಕಳವು ಮಾಡಲಾಗಿದೆ.
ಅದೃಷ್ಟವಶಾತ್ ಚಿನ್ನದ ಅಭರಣಗಳನ್ನ ಲಾಕರ್ ನಲ್ಲಿ ಇಡಲಾಗಿತ್ತು, ಇದರ ಪರಿಣಾಮ ಕಳ್ಳರಿಗೆ ಚಿನ್ನಾಭರಣಗಳು ಸಿಕ್ಕಿಲ್ಲ. ಹೀಗಾಗಿ ಬೆಳ್ಳಿ ಅಭರಣಗಳನ್ನ ಕಳ್ಳರು ಕಳವು ಮಾಡಿದ್ದಾರೆ.
ಇನ್ನೂ ಬೆಳಿಗ್ಗೆ ಎಂದಿನಂತೆ ಅಂಗಡಿ ಬಾಗಿಲು ತೆರೆಯಲು ಸಿಬ್ಬಂದಿ ಆಗಮಿಸಿದಾಗ ಕೃತ್ಯ ಬೆಳಕಿಗೆ ಬಂದಿದೆ.
ಸ್ಥಳಕ್ಕೆ ಚಿಕ್ಕಬಳ್ಳಾಪುರ ಎಸ್ಪಿ ಕುಶಲ್ ಚೌಕ್ಸಿ ಹಾದಿಯಾಗಿ ಹಿರಿಯ ಪೊಲೀಸ್ ಅಧಿಕಾರಿಗಳು, ಶ್ವಾನದಳ ಹಾಗೂ ಬೆರಳಚ್ಚು ತಜ್ಞರ ತಂಡ ಭೇಟಿ ಮಾಡಿ ಪರಿಶೀಲನೆ ನಡೆಸಲಾಗುತ್ತಿದೆ.
ಇನ್ನೂ ಸಿಸಿ ಟಿವಿಯ ಎರಡು ಡಿವಿಆರ್ ಗಳನ್ನ ಸಹ ಕಳ್ಳರು ಹೊತ್ತೊಯ್ದಿದ್ದಾರೆ. ಇತ್ತೀಚೆಗೆ ಅಂಗಡಿಯ ಮುಂಭಾಗ ಹೊಸ ನೇಮ್ ಬೋರ್ಡ್ ಆಳವಡಿಕೆ ಕಾರ್ಯ ಸಹ ನಡೆಸಲಾಗುತ್ತಿದ್ದು, ಹೊರಗಡೆ ಸಿ ಸಿ ಟಿವಿ ಕ್ಯಾಮೆರಾಗಳನ್ನ ತೆಗದು ಹಾಕಲಾಗಿತ್ತು. ಆದ್ರೆ ಪಕ್ಕದ ಅಂಗಡಿಯ ಸಿ ಸಿ ಟಿವಿ ಕ್ಯಾಮೆರಾಗಳ ಸೇರಿದಂತೆ ಅಕ್ಕ ಪಕ್ಕದ ಅಂಗಡಿಗಳ ಸಿ ಸಿ ಟಿವಿ ಕ್ಯಾಮೆರಾಗಳನ್ನ ಪೊಲೀಸರು ಪರಿಶೀಲನೆ ನಡೆಸಿದ್ದಾರೆ.
ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಹಾಡೋನಹಳ್ಳಿ ವ್ಯವಸಾಯ ಸೇವಾ ಸಹಕಾರ ಸಂಘ(ವಿಎಸ್ಎಸ್ ಎನ್) ಚುನಾವಣೆ ನಡೆದಿದ್ದು, ವಿಎಸ್ಎಸ್ ಎನ್ ನ…
ವಿಡಿ ಸತೀಶನ್ ಅವರು ಕೇರಳದ ನೂತನ ಮುಖ್ಯಮಂತ್ರಿಯಾಗಿ ಸೋಮವಾರ ಪ್ರಮಾಣವಚನ ಸ್ವೀಕರಿಸಿದರು. ತಿರುವನಂತಪುರಂನ ಸೆಂಟ್ರಲ್ ಸ್ಟೇಡಿಯಂನಲ್ಲಿ ನಡೆದ ಪ್ರಮಾಣವಚನ ಸ್ವೀಕಾರ…
ದೊಡ್ಡಬಳ್ಳಾಪುರ: ಪೆಟ್ರೋಲ್, ಡೀಸೆಲ್ ಹಾಗೂ ಅಡುಗೆ ಅನಿಲದ ಬೆಲೆ ಏರಿಕೆ ಮತ್ತು ನೀಟ್ (NEET) ಪರೀಕ್ಷೆಯ ಅಕ್ರಮಗಳನ್ನು ಖಂಡಿಸಿ ಬೆಂಗಳೂರು…
ಶೋಕಿಗೆ ಬಿದ್ದ ಹೆಂಡತಿ ಹೈಪೈ ಜೀವನಕ್ಕಾಗಿ ಗಂಡನಿಗೆ ಊರು ಬಿಡಿಸಿ ಸಿಟಿ ಸೇರಿದ್ದರು.. ಗಂಡನ ಕೈತುಂಬಾ ಕಾಸಿದ್ದಾಗ ಚಿನ್ನ, ರನ್ನ…
ಚಿಕ್ಕಬಳ್ಳಾಪುರ: ಅನುಮಾನಸ್ಪದ ರೀತಿಯಲ್ಲಿ ಮಹಿಳೆಯೊಬ್ಬರ ಶವ ಪತ್ತೆಯಾಗಿರುವ ಘಟನೆ ಚಿಕ್ಕಬಳ್ಳಾಪುರ ನಗರದ ರಂಗಸ್ಥಳ ದೇವಸ್ಥಾನದ ಪಕ್ಕದ ನಿರ್ಜನ ಪ್ರದೇಶದಲ್ಲಿ ನಡೆದಿದೆ.…
ದೊಡ್ಡಬಳ್ಳಾಪುರ: ನಾಳೆ(ಮೇ.18) ಮಾಜಿ ಪ್ರಧಾನಿ ಎಚ್.ಡಿ ದೇವೇಗೌಡ ಅವರ ಜನ್ಮದಿನದ ಅಂಗವಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಜೆಡಿಎಸ್ ನಿಕಟಪೂರ್ವ ಜಿಲ್ಲಾಧ್ಯಕ್ಷ…