ಚಿನ್ನ ಪಾಲೀಶ್ ಮಾಡುವುದಾಗಿ 384 ಗ್ರಾಂ ಚಿನ್ನ ಕದ್ದ ಆರೋಪಿ: ಬಂಧಿತನಿಂದ 38 ಲಕ್ಷ ಮೌಲ್ಯದ ವಸ್ತುಗಳನ್ನು ವಶ

ಹಲಸೂರು ಪೊಲೀಸ್ ಠಾಣೆಯ ಅಧಿಕಾರಿಗಳು ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ವ್ಯಕ್ತಿಯೊಬ್ಬನನ್ನು ಬಂಧಿಸಿರುವ ಬಗ್ಗೆ ಬೆಂಗಳೂರು ನಗರ ಪೊಲೀಸ್ ಆಯುಕ್ತ ಬಿ.ದಯಾನಂದ್ ಅವರು ಮಾಹಿತಿ ನೀಡಿದರು. ಚಿನ್ನದ ಮಳಿಗೆ ಮಾಲೀಕರಿಗೆ ಚಿನ್ನ ಪಾಲೀಶ್ ಮಾಡುವುದಾಗಿ ಹೇಳಿ ನಂತರ ಚಿನ್ನದ ಸಮೇತ ಆರೋಪಿ ಪಲಾಯನ ಆಗುತ್ತಿದ್ದ. ಅರೋಪಿ ಬಂಧನದಿಂದ 384 ಗ್ರಾಂ ಚಿನ್ನ ಹಾಗೂ 10,99,779 ನಗದು ಸೇರಿ ಒಟ್ಟು 38 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.

ಮೊಬೈಲ್, ಲ್ಯಾಪ್ ಟಾಪ್ ಹಾಗೂ ದ್ವಿಚಕ್ರವಾಹನ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಕುಮಾರಸ್ವಾಮಿ ಲೇಔಟ್ ಪೊಲೀಸ್ ಠಾಣೆ ಅಧಿಕಾರಿಗಳು ಮೂವರು ಆರೋಪಿಗಳನ್ನು ವಶಕ್ಕೆ ಪಡೆದಿದ್ದಾರೆ. ಈ ಕಾರ್ಯಾಚರಣೆಯಲ್ಲಿ ಪೊಲೀಸ್ ಅಧಿಕಾರಿಗಳು 34 ಲ್ಯಾಪ್ ಟಾಪ್, 28 ಮೊಬೈಲ್ ಹಾಗೂ 4 ದ್ವಿಚಕ್ರವಾಹನ ಸೇರಿ 23 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡಿರುವ ವಸ್ತುಗಳ ಪೈಕಿ 16 ಲ್ಯಾಪ್ ಟಾಪ್ ಗಳು, 4 ದ್ವಿಚಕ್ರವಾಹನ ಹಾಗೂ 11 ಮೊಬೈಲ್ ಫೋನ್ ಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿರುವ ಇ ಕಳವು ಪ್ರಕರಣಗಳಿಗೆ ಸಂಬಂಧಿಸಿವೆ. ಈ ಪ್ರಕರಣದ ಮತ್ತಷ್ಟು ತನಿಖೆ ಜಾರಿಯಲ್ಲಿದೆ ಎಂದರು.

ಸಾರ್ವಜನಿಕ ಸ್ಥಳಗಳಲ್ಲಿ ಅಕ್ರಮವಾಗಿ ಗಾಂಜಾ ಮಾರಾಟ ಮಾಡುವ ಪ್ರಯತ್ನದಲ್ಲಿದ್ದ ಇಬ್ಬರು ಅಂತಾರಾಜ್ಯ ಡ್ರಗ್ ಪೆಡ್ಲರ್ ಗಳನ್ನು ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ಅಧಿಕಾರಿಗಳು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 13 ಲಕ್ಷ ಮೌಲ್ಯದ 22 ಕೆ.ಜಿ ಗಾಂಜಾ ವಶಪಡಿಸಿಕೊಳ್ಳಲಾಗಿದೆ. ಇದರ ಜತೆಗೆ ಗಾಂಜಾ ವ್ಯಾಪಾರಕ್ಕೆ ಬಳಸಿದ್ದ ಮೊಬೈಲ್ ಕೂಡ ವಶಪಡಿಸಿಕೊಳ್ಳಲಾಗಿದೆ ಎಂದು ಹೇಳಿದರು.

ಕಾರಿನ ಗಾಜು ಒಡೆದು ಅದರೊಳಗಿದ್ದ ಲ್ಯಾಪ್ ಟಾಪ್ ಕಳ್ಳತನ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಜಯನಗರ ಪೊಲೀಸ್ ಠಾಣೆ ಅಧಿಕಾರಿಗಳು ಆರೋಪಿಯೊಬ್ಬನನ್ನು ಬಂಧಿಸಿದ್ದು, ಕಾರ್ಯಾಚರಣೆಯಲ್ಲಿ ದ್ವಿಚಕ್ರವಾಹನ ಹಾಗೂ 17 ಲ್ಯಾಪ್ ಟಾಪ್ ಸೇರಿದಂತೆ 12 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ಈ ವಸ್ತುಗಳು ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾಗಿದ್ದ 5 ಪ್ರಕರಣಗಳಿಗೆ ಸಂಬಂಧಿಸಿವೆ ಎಂದರು.

ಸರಣಿ ದ್ವಿಚಕ್ರ ವಾಹನ ಹಾಗೂ ಲ್ಯಾಪ್ ಟಾಪ್ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ಹೆಚ್ಎಸ್ಆರ್ ಲೇಔಟ್ ಪೊಲೀಸ್ ಠಾಣೆ ಅಧಿಕಾರಿಗಳು ಅಂತರ್ ರಾಜ್ಯ ಆರೋಪಿಯೊಬ್ಬನನ್ನು ಬಂಧಿಸಿದ್ದಾರೆ. ಈ ಕಾರ್ಯಾಚರಣೆಯಲ್ಲಿ 3 ಲ್ಯಾಪ್ ಟಾಪ್, 1 ಟ್ಯಾಬ್ ಹಾಗೂ 5 ದ್ವಿಚಕ್ರವಾಹನ ಸೇರಿದಂತೆ ₹12 ಲಕ್ಷ ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಳ್ಳಲಾಗಿದೆ. ನಗರದ ವಿವಿಧ ಪೊಲೀಸ್ ಠಾಣೆಗಳಲ್ಲಿ 5 ದ್ವಿಚಕ್ರವಾಹನ ಹಾಗೂ 2 ಲ್ಯಾಪ್ ಟಾಪ್ ಕಳ್ಳತನ ಪ್ರಕರಣಗಳು ದಾಖಲಾಗಿದ್ದವು ಎಂದರು.

Ramesh Babu

Journalist

Recent Posts

ಸುಮಾರು 500 ಕೋಟಿ ಮೌಲ್ಯದ ಜಮೀನು ಖಾತೆ ಬದಲಾವಣೆ ಆರೋಪ: ದೊಡ್ಡಬಳ್ಳಾಪುರ ಉಪವಿಭಾಗದ ಹಿಂದಿನ ಎಸಿ ದುರ್ಗಾಶ್ರೀ ಹಾಗೂ ಕಚೇರಿ ಸಿಬ್ಬಂದಿ ವಿರುದ್ದ ಲೋಕಾಯುಕ್ತ ಸ್ವಯಂಪ್ರೇರಿತ ಪ್ರಕರಣ ದಾಖಲು

ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…

7 hours ago

ಹೂ ಕೀಳುವಾಗ ಹಾವು ಕಚ್ಚಿ ಮಹಿಳೆ ಸಾವು

ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…

8 hours ago

ದೇವರಾಜ ಅರಸು ಅವರ ಆಶಯಗಳಿಗೆ ಧ್ವನಿಯಾಗೋಣ-ಡಿಸಿ ಡಾ. ಕೆ.ಎನ್ ಅನುರಾಧ

ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…

9 hours ago

ಅಂಗನವಾಡಿ ಕಟ್ಟಡ ಅರ್ಧಕ್ಕೆ; ಬಾಡಿಗೆ ಮನೆಯಲ್ಲಿ 30 ಕಂದಮ್ಮಗಳ ಪರದಾಟ: 17.50 ಲಕ್ಷ ವೆಚ್ಚದ ಕಾಮಗಾರಿ ಪೂರ್ಣಗೊಳಿಸದೆ ನಿರ್ಲಕ್ಷ್ಯ ಆರೋಪ

ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…

10 hours ago

ಮೀಸಲಾತಿ ಘೋಷಣೆ ಬೆನ್ನಲ್ಲೇ ಗ್ರಾಮಾಂತರದಲ್ಲಿ ಚುನಾವಣಾ ಕಾವು: ಹಳ್ಳಿಗಳಲ್ಲಿ ಚುರುಕಾದ ರಾಜಕೀಯ ಚಟುವಟಿಕೆ: ಆಕಾಂಕ್ಷಿಗಳಿಂದ ಲೆಕ್ಕಾಚಾರ ಆರಂಭ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…

17 hours ago

ಹೆದ್ದಾರಿ ಸರ್ವೀಸ್ ರಸ್ತೆಗಳಲ್ಲಿ ಭಾರೀ ವಾಹನಗಳ ಅನಧಿಕೃತ ನಿಲುಗಡೆ: ಸಾರ್ವಜನಿಕರ ಜೀವದೊಂದಿಗೆ ಚೆಲ್ಲಾಟ

  ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…

2 days ago