ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ಜಿಲ್ಲೆಯಾದ್ಯಂತ ಎಲ್ಪಿಜಿ ಸಿಲಿಂಡರ್ ಪೂರೈಕೆಯಲ್ಲಿ ಸಾರ್ವಜನಿಕ ಕುಂದುಕೊರತೆಗಳು ಕಂಡು ಬಂದಲ್ಲಿ ತಾಲ್ಲೂಕಿನ ಆಹಾರ ಶಾಖೆಯ ಆಹಾರ ನಿರೀಕ್ಷಕರನ್ನು ದೂರವಾಣಿ ಮೂಲಕ…
ಕಳೆದ 13 ವರ್ಷಗಳಿಂದ ಕೋಮಾ ಸ್ಥಿತಿಯಲ್ಲಿ ಬದುಕುತ್ತಿದ್ದ 32 ವರ್ಷ ವಯಸ್ಸಿನ ಹರೀಶ್ ರಾಣಾ ಅವರಿಗೆ ಕುಟುಂಬಸ್ಥರು ಭಾವುಕ ವಿದಾಯ…
ರಾಜ್ಯದಲ್ಲಿ ಎಲ್ಪಿಜಿ ಸಿಲಿಂಡರ್ ಕೊರತೆ ಇಲ್ಲದೆ ಸರಬರಾಜು ನಿಯಮಿತವಾಗಿ ನಡೆಯುತ್ತಿದೆ. ಕೆಲವೆಡೆ ಜನರು ಪ್ಯಾನಿಕ್ನಿಂದ ಅಗತ್ಯಕ್ಕಿಂತ ಹೆಚ್ಚು ಬುಕ್ಕಿಂಗ್ ಮಾಡುತ್ತಿರುವುದರಿಂದ…
ನವದೆಹಲಿಯಲ್ಲಿ ಕೇಂದ್ರ ಪ್ರವಾಸೋದ್ಯಮ ಸಚಿವರಾದ ಶ್ರೀ ಗಜೇಂದ್ರ ಸಿಂಗ್ ಶೇಖಾವತ್ ಅವರನ್ನು ಸಂಸದ ಡಾ.ಕೆ.ಸುಧಾಕರ್ ಭೇಟಿ ಮಾಡಿ, 'ಪ್ರಸಾದ್ 2.0'…
ಸಾಮಾಜಿಕ ಜಾಲತಾಣಗಳಲ್ಲಿ ವಿಚಿತ್ರ, ವಿಕಾರವಾಗಿ ರೀಲ್ಸ್ ಮಾಡುತ್ತಿದ್ದ ರೀಲ್ಸ್ ಮಂಜಣ್ಣ ಅಂತಾನೇ ಕರೆಸಿಕೊಳ್ಳುವ ಮಂಜ ಬೈಕ್ ನಲ್ಲಿ ತ್ರಿಬಲ್ ರೈಡ್…
ಕೋಲಾರ: ಅಮೆಜಾನ್ ಸಹಭಾಗಿತ್ವದ ಫ್ಲಿಪ್ ಕಾರ್ಟ್ ನಲ್ಲಿ ಲೀಟರ್ ಹಾಲನ್ನು ಒಂದು ರೂ. ಗೆ ಮಾರಾಟದ ಅವಕಾಶ ಕಲ್ಪಿಸಿರುವುದು ಅತ್ಯಂತ…