ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
'ಆಸರೆ' ಯೋಜನೆ ಅಂಗವಾಗಿ ಇಂದು ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ದುರ್ಗೇನಹಳ್ಳಿ ಐಯಮ್ಮನಹಳ್ಳಿ ಹಾಗೂ ಇತರೆ ಗ್ರಾಮಗಳಿಗೆ ಪೊಲೀಸ್…
ಸಂವಿಧಾನದ ಆಶಯಗಳನ್ನು ಜಾರಿಗೊಳಿಸುವ ಕೆಲಸ ನಾವು ಮಾಡುತ್ತಿದ್ದೀವಾ ಎಂದು ಪತ್ರಕರ್ತರು ತಮ್ಮನ್ನು ತಾವು ಪ್ರಶ್ನಿಸಿಕೊಳ್ಳಬೇಕು ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ..…
ದೊಡ್ಡಬಳ್ಳಾಪುರದ ಕಾಡತಿಪ್ಪೂರು ಗ್ರಾಮದಲ್ಲಿ ಸುಮಾರು 1300 ಜನಸಂಖ್ಯೆ ಇದ್ದು, 280 ಕುಟುಂಬಗಳು ವಾಸವಿದ್ದಾರೆ. ಅದರಲ್ಲಿ ಎಸ್ಸಿ ಮತ್ತು ಎಸ್ಟಿ ಜನಾಂಗದವರೇ…
ಸೆಲೂನ್ ನಲ್ಲಿ ಮುಸ್ಲಿಂ ಯುವಕನ ಮೇಲೆ ಬಾಶೆಟ್ಟಿಹಳ್ಳಿ ಪಟ್ಟಣ ಪಂಚಾಯತಿಯಲ್ಲಿ ಕೆಲಸ ಮಾಡುವ ಸಿಬ್ಬಂದಿ, ಬಿಜೆಪಿ ಕಾರ್ಯಕರ್ತ ಹಾಗೂ ಸಹಚರರು…
ಎ.ವಿ ಲಕ್ಷ್ಮಿನಾರಾಯಣ ಅವರನ್ನು ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಹೆಚ್ಚುವರಿ ಪೊಲೀಸ್ ಅಧೀಕ್ಷಕರು-2 ರನ್ನಾಗಿ ನೇಮಕ ಮಾಡಲಾಗಿದೆ.. ಈ ಹಿಂದೆ ತುಮಕೂರು…
ನಗರಾಭಿವೃದ್ಧಿ ಕೋಶದ ಇಂಜಿನಿಯರ್ ಮನೆ ಮೇಲೆ ಲೋಕಾಯುಕ್ತ ದಾಳಿ ನಡೆಸಲಾಗಿದ್ದು, ದಾಳಿ ವೇಳೆ 14 ಕೋಟಿ ಅಕ್ರಮ ಆಸ್ತಿ ಪತ್ತೆಯಾಗಿದೆ.…