ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ಬೈಕ್-ಟಿಪ್ಪರ್ ನಡುವೆ ಅಪಘಾತ ಸಂಭವಿಸಿದ್ದು, ಓರ್ವ ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದರೆ ಮತ್ತೋರ್ವನಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಸಂಜೆ…
ಕೇಂದ್ರ ಸರ್ಕಾರದ ಹಣಕಾಸು ಸಚಿವಾಲಯದ ವೆಚ್ಚ ಇಲಾಖೆಯು ಆಗ್ರಿಸ್ಟಾಕ್ ಘಟಕದಡಿಯಲ್ಲಿ ಕೇಂದ್ರ ಸರ್ಕಾರದ ಮಾನದಂಡಗಳನ್ನು ಅಳವಡಿಸಿ ಭೂಹಿಡುವಳಿಗಳನ್ನು ಹೊಂದಿರುವ ರಾಜ್ಯದ…
ತಾಲ್ಲೂಕು ಕೇಂದ್ರದಲ್ಲಿ ಮಾತ್ರವಲ್ಲದೆ ಗ್ರಾ.ಪಂ ಮಟ್ಟದಲ್ಲಿ ಮನರೇಗಾ ಯೋಜನೆ ಉಳಿಸಲು ಹೋರಾಟ ನಡೆಸಲಾಗುವುದು ಎಂದು ಜಿಲ್ಲಾ ಕಾಂಗ್ರೆಸ್ ಎಸ್.ಟಿ ಘಟಕದ…
ದೊಡ್ಡಬಳ್ಳಾಪುರ ನಗರ: ನವಚೇತನ ಆಸ್ಪತ್ರೆ ಉಷ್ಟ್ರತಿ ಎನ್ಜಿಓ, ಡಿ ಎಸ್ ಜಿ ಸ್ಪೋರ್ಟ್ ಸಹಕಾರದೊಂದಿಗೆ ಉಚಿತ ಆರೋಗ್ಯ ತಪಾಸಣಾ ಶಿಬಿರಯನ್ನು…
ರಾಜ್ಯ ರಾಜಕೀಯದಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಮುಖ್ಯಮಂತ್ರಿ ಸ್ಥಾನಕ್ಕೇರಲು ಇನ್ನಿಲ್ಲದ ಕಸರತ್ತು ನಡೆಸುತ್ತಿದ್ದಾರೆ. ಸಿಎಂ ಸಿದ್ದರಾಮಯ್ಯ ಹೈಕಮಾಂಡ್ ಬಳಿ…
ನಮ್ಮ ನಾಯಕರು ಮತ್ತು ಉಗ್ರ ಧರ್ಮ ಹಾಗು ರಾಷ್ಟ್ರೀಯವಾದ..... ನಾಯಕರಣ್ಣ ನಾಯಕರು, ಇವರೇ ನಮ್ಮ ನಾಯಕರು..... ತಾವೇ ಸೃಷ್ಟಿಸಿಕೊಂಡ, ನಾವೇ…