ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ಶ್ರೀ ರಾಮಾಂಜನೇಯ ಸ್ವಾಮಿ ಸೇವಾ ಸಮಿತಿ ಅಭಿವೃದ್ಧಿ ಟ್ರಸ್ಟ್ ವತಿಯಿಂದ ದೊಡ್ಡಬಳ್ಳಾಪುರ ತಾಲೂಕಿನ ತೂಬಗೆರೆ ಹೋಬಳಿಯ ಗಂಗಸಂದ್ರ ಗ್ರಾಮದಲ್ಲಿ ಮೇ.6,…
ಸಿಗ್ಮಂಡ್ ಫ್ರಾಯ್ಡ್ ಎಂಬುವವನನ್ನು ಪ್ರಖ್ಯಾತ ಮನಶಾಸ್ತ್ರಜ್ಞ ಎಂದು ಕರೆಯಲಾಗುತ್ತದೆ. ಪಾಶ್ಚಾತ್ಯ ಸಂಸ್ಕೃತಿಯ ಹಿನ್ನಲೆಯ ಆತನ ವಿಚಾರಗಳು ವಿಶ್ವವ್ಯಾಪಿ ಮನ್ನಣೆ ಪಡೆದಿವೆ.....…
ದೊಡ್ಡಬಳ್ಳಾಪುರ ನಗರದ ಕೋರ್ಟ್ ಎದುರಿನ ಕಾರ್ಮಲ್ ಜ್ಯೋತಿ ರಸ್ತೆಯಲ್ಲಿ ಕಳೆದ ಒಂದು ತಿಂಗಳ ಹಿಂದೆಯೇ ಒಳಚರಂಡಿಯ ಹೊಸ ಮ್ಯಾನ್ ಹೋಲ್…
ಜ್ಞಾನದ ಬೆಳಕನ್ನು ಜಗತ್ತಿಗೇ ಸಾರಿದಂತಹ ಮಹಾನ್ ಪುರುಷ ಭಗವಾನ್ ಬುದ್ಧರ ತತ್ವಾದರ್ಶಗಳನ್ನು ನಮ್ಮ ಜೀವನದಲ್ಲಿ ಅಳವಡಿಸಿಕೊಂಡು ಒಳ್ಳೆಯ ಸಮಾಜ ನಿರ್ಮಿಸಲು…
ಕಾಲೇಜು ಶಿಕ್ಷಣ ಇಲಾಖೆ, ಡಾ|| ಮನಮೋಹನ್ ಸಿಂಗ್ ಬೆಂಗಳೂರು ನಗರ ವಿಶ್ವವಿದ್ಯಾಲಯ, ಮಲ್ಲೇಶ್ವರಂನ ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನ ರಾಷ್ಟ್ರೀಯ…
ಗೋಡೆ ಕೊರೆದ ಕಳ್ಳರು ಕೋಟ್ಯಂತರ ರೂ. ಮೌಲ್ಯದ ಚಿನ್ನಾಭರಣ ದೋಚಿ ಎಸ್ಕೇಪ್ ಆಗಿದ್ದಾರೆ. ಗೋಡೆ ಕೊರೆದು 1.20 ಕೋಟಿ ಬೆಲೆ…