ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…