ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ಗೌರಿ ಗಣೇಶ ಹಬ್ಬದ ಸಂಭ್ರಮ ನಾಡಿನಾದ್ಯಂತ ಮನೆಮಾಡಿದ್ದು, ದೊಡ್ಡಬಳ್ಳಾಪುರ ನಗರದಲ್ಲೂ ಗಣೇಶೋತ್ಸವದ ಕಳೆ ಹೆಚ್ಚಾಗಿದೆ. ನಗರದ ವಿವಿಧೆಡೆ ಗಣೇಶ…
ದೊಡ್ಡಬಳ್ಳಾಪುರ: ಗಣೇಶೋತ್ಸವದ ಹಿನ್ನೆಲೆಯಲ್ಲಿ ಗಣೇಶ ಮೂರ್ತಿಗಳ ವಿಸರ್ಜನೆಗೆ ಅನುಕೂಲವಾಗುವಂತೆ ಹೊಸಹಳ್ಳಿ ಪೊಲೀಸ್ ಠಾಣೆ ವತಿಯಿಂದ ಗುಂಡಮಗೆರೆ ಕೆರೆಯಲ್ಲಿ ವಿಶೇಷ ವ್ಯವಸ್ಥೆ…
ದೊಡ್ಡಬಳ್ಳಾಪುರ: ನಾಡಿನಾದ್ಯಂತ ಗೌರಿ ಗಣೇಶ ಹಬ್ಬದ ಸಂಭ್ರಮ ಮನೆಮಾಡಿದ್ದು, ದೊಡ್ಡಬಳ್ಳಾಪುರ ತಾಲ್ಲೂಕಿನ ತೂಬಗೆರೆ ಹೋಬಳಿಯಲ್ಲೂ ಹಬ್ಬದ ವಾತಾವರಣ ಕಳೆಗಟ್ಟಿದೆ. ವಿವಿಧೆಡೆ…
ಬೆಂಗಳೂರು ಗ್ರಾಮಾಂತರ: ಶಿಕ್ಷಣದ ಮಹತ್ವದ ಅರಿವು, ಶಾಲಾ ಶಿಕ್ಷಣಕ್ಕೆ ಹೆಚ್ಚಿನ ಆದ್ಯತೆ, ವಯಸ್ಕರ ಶಿಕ್ಷಣ ಹಾಗೂ ನಿರಂತರ ಸಾಕ್ಷರತಾ ಕಾರ್ಯಕ್ರಮಗಳ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…