ದೊಡ್ಡಬಳ್ಳಾಪುರ ತಾಲೂಕಿನ ಮಾಕಳಿ ಸಮೀಪದಲ್ಲಿನ ತೋಟದ ಮನೆ ಬಳಿ ಇದ್ದ ಮೂರು ನಾಯಿಗಳು ಚಿರತೆಗೆ ಬಲಿಯಾಗಿವೆ.
ಚಿರತೆ ಓಡಾಡಿರುವ ಹೆಜ್ಜೆ ಗುರುತುಗಳು ಸ್ಥಳದಲ್ಲಿ ಕಂಡುಬಂದಿವೆ. ಚಿರತೆಯು ಒಂದು ವಾರ ಬಿಟ್ಟು ಒಂದು ವಾರ ರಾತ್ರೋರಾತ್ರಿ ತೋಟದ ಮನೆ ಬಳಿ ಬಂದು ಒಂದೊಂದೇ ನಾಯಿಗಳನ್ನು ಎಳೆದೊಯ್ದು ತಿಂದು ತೇಗಿದೆ.
ಇಂದು ರಾತ್ರಿಯೂ ಸಹ ಬಂದು ಮನೆ ಬಳಿ ಓಡಾಡಿಕೊಂಡು ಇದ್ದ ನಾಯಿಯನ್ನು ಬೇಟೆಯಾಡಿದೆ. ಮೊದಲ ಬಾರಿ ನಾಯಿಯನ್ನು ಬೇಟೆಯಾಡಿರುವ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖಾಧಿಕಾರಿಗಳು ಭೇಟಿ ನೀಡಿ ಪರಿಶೀಲನೆ ನಡೆಸಿ, ಈ ಭಾಗದಲ್ಲಿ ಚಿರತೆ ಇರುವುದನ್ನು ಖಚಿತಪಡಿಸಿಕೊಂಡು ಹೋದರು. ಇದಾದ ಬಳಿಕ ಚಿರತೆ ಮತ್ತೆ ಬಂದು ಇನ್ನೊಂದು ನಾಯಿ ಮೇಲೆ ಚಿರತೆ ದಾಳಿ ನಡೆಸಿದೆ. ಈ ಕುರಿತು ಅರಣ್ಯ ಇಲಾಖಾಧಿಕಾರಿಗಳ ಗಮನಕ್ಕೆ ತರಲಾಗಿತ್ತು. ಆದರೆ ಅವರು ಚಿರತೆ ಸೆರೆ ಹಿಡಿಯಲು ಬೋನ್ ಇರಿಸಬೇಕು, ಅದನ್ನು ಟ್ರ್ಯಾಕ್ಟರ್ ಮೂಲಕ ತರಬೇಕು ಅದರ ಖರ್ಚು ವೆಚ್ಚ ನೀವೆ ನೋಡಿಕೊಳ್ಳಬೇಕು ಎಂದು ತಿಳಿಸಿದ್ದರು.
ಅರಣ್ಯ ಇಲಾಖಾಧಿಕಾರಿಗಳ ನಿರ್ಲಕ್ಷ್ಯ, ಬೇಜವಬ್ದಾರಿತನಕ್ಕೆ ಮೂರು ನಾಯಿಗಳು ಬಲಿಯಾಗಿವೆ. ಚಿರತೆ ಕಾಟದಿಂದ ರೈತರು ತಮ್ಮ ತೋಟ, ಹೊಲಗಳ ಬಳಿ ಬರಲು ಭಯಭೀತರಾಗಿದ್ದಾರೆ.
ಒಂದು ವೇಳೆ ಚಿರತೆ ಸೆರೆ ಹಿಡಿಯದಿದ್ದರೆ, ಇಲ್ಲಿ ಓಡಾಡುವ ರೈತರ ಪ್ರಾಣಕ್ಕೆ ಕುತ್ತು ಬರುವುದಂತು ಖಚಿತ. ಈ ದುರ್ಘಟನೆ ಸಂಬವಿಸುವ ಮುನ್ನ ಎಚ್ಚೆತ್ತು ಸೆರೆ ಹಿಡಿಯಬೇಕಾಗಿದೆ ಎಂದು ರೈತರು, ಸಾರ್ವಜನಿಕರು ಮನವಿ ಮಾಡಿದ್ದಾರೆ.
ದೊಡ್ಡಬಳ್ಳಾಪುರ: ನೆಲಮಂಗಲದಿಂದ ದೊಡ್ಡಬಳ್ಳಾಪುರದತ್ತ ಬರುತ್ತಿದ್ದ ಗೂಡ್ಸ್ ವಾಹನವು ಅರಳುಮಲ್ಲಿಗೆ ಗ್ರಾಮದ ಬಳಿ ರಸ್ತೆ ಬದಿಯ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದ…
ಮದ್ಯಪಾನ, ಡ್ರಗ್ಸ್ ನಂತಹ ದುಶ್ಚಟಗಳಿಗೆ ಬಲಿಯಾಗದೆ ಡ್ರಗ್ಸ್ ಮುಕ್ತ ಸಮಾಜಕ್ಕೆ ಕೈಜೋಡಿಸಿ ಎಂದು ಆಹಾರ, ನಾಗರೀಕ ಸರಬರಾಜು ಮತ್ತು ಗ್ರಾಹಕ…
ದೊಡ್ಡಬಳ್ಳಾಪುರ : ಉದ್ಯಮಿಗಳು ಮತ್ತು ಸಮಾಜ ಸೇವಕರಾದ ಗಂಟಿಗಾನಹಳ್ಳಿ ಸಂದೀಪ್ ರವರ ಹುಟ್ಟುಹಬ್ಬವನ್ನು ಸರ್ಕಾರಿ ಶಾಲಾ ಮಕ್ಕಳಿಗೆ ನೋಟ್ಬುಕ್, ಸಿಹಿ,…
ದೊಡ್ಡಬಳ್ಳಾಪುರ: ನಗರದ ರೈಲ್ವೆ ನಿಲ್ದಾಣದ ಸಮೀಪದ ಆಂಜನೇಯ ದೇವಾಲಯದ ಪಕ್ಕದಲ್ಲಿ ಹೂತುಹಾಕಲಾಗಿದ್ದ ನವಜಾತ ಶಿಶುವಿನ ಮೃತದೇಹ ಶುಕ್ರವಾರ ಪತ್ತೆಯಾಗಿದ್ದು, ಸ್ಥಳೀಯರಲ್ಲಿ…
ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಆರೋಪದ ಹಿನ್ನೆಲೆಯಲ್ಲಿ ಶಾಸಕ ಯಶ್ಪಾಲ್…
ಮುಂಗಾರು ಮಳೆ ಕೈಕೊಟ್ಟಿರುವ ಪರಿಣಾಮ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಕೃಷಿ ಚಟುವಟಿಕೆಗಳು ಈ ಬಾರಿ ತೀವ್ರ ಹಿನ್ನಡೆ ಅನುಭವಿಸಿವೆ. ಸಾಮಾನ್ಯಕ್ಕಿಂತ…