ಚಿರತೆ ದಾಳಿಗೆ ಕರು ಬಲಿ: ಅರೆಬರೆ ತಿಂದು ಚಿರತೆ ಎಸ್ಕೇಪ್: ಬೆಚ್ಚಿಬಿದ್ದ ಜನ: ಚಿರತೆ ಸೆರೆ ಹಿಡಿಯಲು ಮನವಿ

ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ.

ಘಟನೆ ಕಳೆದ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ….

ಕರಡಿಪಾಳ್ಯದ ನಿವಾಸಿ ತಿರುಪತಯ್ಯ ಎಂಬ ರೈತ ಮನೆ ಪಕ್ಕದಲ್ಲೇ ಹಸುಗಳಿಗಾಗಿ ಶೆಡ್ ನಿರ್ಮಿಸಿ ಎರಡು ಹಸು, ಎರಡು ಕರುಗಳನ್ನು ಶೆಡ್ ನಲ್ಲಿ ಬಿಟ್ಟಿದ್ದರು. ಕಳೆದ ರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಕರು ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ…

ಘಟನೆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಇರಿಸಲಾಗಿದೆ.

ಮೊನ್ನೆ‌ ರಾತ್ರಿ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿಯಲ್ಲೂ‌ ಸಹ ಕರುವಿನ‌ ಮೇಲೆ ಚಿರತೆ ದಾಳಿ ನಡೆಸಿತ್ತು. ನಿನ್ನೆ ರಾತ್ರಿ‌ ತೂಬಗೆರೆ ಹೋಬಳಿಯ ಮಾಕಳಿ ಸಮೀಪದ‌ ತೋಟದ‌‌ ಮನೆಯಲ್ಲಿದ್ದ ನಾಯಿಯನ್ನು‌ ಬೇಟೆಯಾಡಿದೆ. ಹೀಗೆ ಸದಾ ನಾಯಿ, ಮೇಕೆ, ಕುರಿ‌ ಸೇರಿದಂತೆ ಜಾನುವಾರುಗಳ ಮೇಲೆ ಪದೇ ಪದೇ ಚಿರತೆ ದಾಳಿ ನಡೆಸಿ‌ ಬಲಿ ಪಡೆಯುತ್ತಲೇ ಇದೆ…

ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದ ಹಾಗೆ ಸೂಕ್ತ ಕ್ರಮಗಳನ್ನು‌ ಅರಣ್ಯ ಇಲಾಖೆ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ…

Ramesh Babu

Journalist

Recent Posts

ಪ್ರತ್ಯೇಕ ಅಪಘಾತ ಕೇಸ್ : ಮೂವರು ಎಎಸ್ಐ ಸೇರಿ ನಾಲ್ವರು ಸಾವು: ಹಲವರಿಗೆ ಗಾಯ

ಭೀಕರ ಅಪಘಾತದಲ್ಲಿ ಮೂವರು ರಿಸರ್ವ್ (ಮೀಸಲು ಪೊಲೀಸ್ ಪಡೆ) ಸಬ್ ಇನ್‌ಸ್ಪೆಕ್ಟರ್‌ಗಳು ಸಾವನ್ನಪ್ಪಿದ್ದು, ಇಬ್ಬರು ಗಾಯಗೊಂಡಿದ್ದಾರೆ. ಇದಲ್ಲದೆ, ಚಾಮರಾಜನಗರ ಮತ್ತು…

1 hour ago

ಕಾನ್ಸಿರಾಮ್ ಅವರ 92ನೇ ಹುಟ್ಟುಹಬ್ಬ: ಬಹುಜನರ ಏಳಿಗೆಗಾಗಿ ಕಾನ್ಸಿರಾಮ್ ಕೊಡುಗೆ ಅಪಾರ- ನಂದಿಗುಂದ ಪಿ‌.ವೆಂಕಟೇಶ್

ಕಾನ್ಸಿರಾಮ್ ಅವರು 1978 ರಲ್ಲಿ ಅಖಿಲ ಭಾರತ ಹಿಂದುಳಿದ ಹಾಗೂ ಅಲ್ಪಸಂಖ್ಯಾತ ನೌಕರರ ಒಕ್ಕೂಟ (ಬಿಎಎಂಸಿಇಎಫ್‌) ಸ್ಥಾಪಿಸಿದ್ದರು. 1984ರಲ್ಲಿ ಬಹುಜನ್‌…

2 hours ago

ಪುರುಷಾಧಿಪತ್ಯಕ್ಕೆ ಸೆಡ್ಡು ಹೊಡೆದು, ತಂದೆ ಅಂತ್ಯಸಂಸ್ಕಾರ ಮಾಡಿದ ಹೆಣ್ಣುಮಕ್ಕಳು

ಚಿಕ್ಕಮಗಳೂರು: ಪುರುಷ ಪ್ರಾಧಾನ್ಯತೆಯ ಸಂಪ್ರದಾಯಕ್ಕೆ ತಿಲಾಂಜಲಿ ಇಟ್ಟು, ಹೆಣ್ಣು ಮಕ್ಕಳೇ ತಮ್ಮ ತಂದೆಯ ಅಂತ್ಯಸಂಸ್ಕಾರ ನಡೆಸಿ ಲಿಂಗ ಸಮಾನತೆಯ ಸಂದೇಶ…

3 hours ago

ಯುವತಿಯಿಂದ ಮದ್ವೆಗೆ ನಿರಾಕರಣೆ: HIV ಇಂಜೆಕ್ಷನ್ ಚುಚ್ಚಿದ ಯುವಕ.!

ಹೈದರಾಬಾದ್: ಮದುವೆಯಾಗಲು ನಿರಾಕರಿಸಿದ ಯುವತಿಯೊಬ್ಬಳಿಗೆ ಆಕೆಯ ಪ್ರಿಯಕರನೇ HIV ಪಾಸಿಟಿವ್ ಇಂಜಕ್ಷನ್ ಚುಚ್ಚಿದ ಆಘಾತಕಾರಿ ಘಟನೆ ಹೈದರಾಬಾದ್‌ನ ಮೆಡ್ಚಲ್ ಪ್ರದೇಶದಲ್ಲಿ…

12 hours ago

ಗುರುಭವನದಲ್ಲಿ ಅದ್ಧೂರಿ ವಿಶ್ವ ಮಹಿಳಾ ದಿನಾಚರಣೆ

ಸೇವೆಗಾಗಿ ಬಾಳು ಭಾರತ ಸೇವಾದಳ ಬೆಂಗಳೂರು ಗ್ರಾಮಾಂತರ ಜಿಲ್ಲೆ, ಭಾರತ ಸೇವಾದಳ ದೇವನಹಳ್ಳಿ ತಾಲೂಕು ಘಟಕ, ಕರ್ನಾಟಕ ರಾಜ್ಯ ಪ್ರಾಥಮಿಕ…

21 hours ago

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಲಂಚಕ್ಕೆ ಬೇಡಿಕೆ: ಲೋಕಾ ಬಲೆಗೆ ಬಿದ್ದ ಭ್ರಷ್ಟ ಗ್ರಾಮ ಆಡಳಿತಾಧಿಕಾರಿ

ಭೂದಾಖಲೆಗಳ ತಿದ್ದುಪಡಿಗಾಗಿ ಸಾರ್ವಜನಿಕರಿಂದ ಹಣಕ್ಕೆ ಬೇಡಿಕೆಯಿಟ್ಟಿದ್ದ ಗ್ರಾಮ ಆಡಳಿತಾಧಿಕಾರಿಯೊಬ್ಬರು ಲೋಕಾಯುಕ್ತ ಪೊಲೀಸರ ಕಾರ್ಯಾಚರಣೆಯಲ್ಲಿ ಸಿಕ್ಕಿಬಿದ್ದಿದ್ದಾರೆ. ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ…

21 hours ago