ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ.
ಘಟನೆ ಕಳೆದ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ….
ಕರಡಿಪಾಳ್ಯದ ನಿವಾಸಿ ತಿರುಪತಯ್ಯ ಎಂಬ ರೈತ ಮನೆ ಪಕ್ಕದಲ್ಲೇ ಹಸುಗಳಿಗಾಗಿ ಶೆಡ್ ನಿರ್ಮಿಸಿ ಎರಡು ಹಸು, ಎರಡು ಕರುಗಳನ್ನು ಶೆಡ್ ನಲ್ಲಿ ಬಿಟ್ಟಿದ್ದರು. ಕಳೆದ ರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಕರು ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ…
ಘಟನೆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಇರಿಸಲಾಗಿದೆ.
ಮೊನ್ನೆ ರಾತ್ರಿ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿಯಲ್ಲೂ ಸಹ ಕರುವಿನ ಮೇಲೆ ಚಿರತೆ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ತೂಬಗೆರೆ ಹೋಬಳಿಯ ಮಾಕಳಿ ಸಮೀಪದ ತೋಟದ ಮನೆಯಲ್ಲಿದ್ದ ನಾಯಿಯನ್ನು ಬೇಟೆಯಾಡಿದೆ. ಹೀಗೆ ಸದಾ ನಾಯಿ, ಮೇಕೆ, ಕುರಿ ಸೇರಿದಂತೆ ಜಾನುವಾರುಗಳ ಮೇಲೆ ಪದೇ ಪದೇ ಚಿರತೆ ದಾಳಿ ನಡೆಸಿ ಬಲಿ ಪಡೆಯುತ್ತಲೇ ಇದೆ…
ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದ ಹಾಗೆ ಸೂಕ್ತ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ…
ದೇವನಹಳ್ಳಿ ತಾಲೂಕಿನ ಸಣ್ಣ ಅಮಾನಿಕೆರೆ, ಬೈಚಾಪುರ ಹಾಗೂ ಪ್ರಸನ್ನಹಳ್ಳಿ ಗ್ರಾಮಗಳ 62.20 ಎಕರೆ ಖಾಸಗಿ ಜಮೀನಿನ ಖಾತೆ ಬದಲಾವಣೆಯಲ್ಲಿ ಅಕ್ರಮ…
ದೊಡ್ಡಬಳ್ಳಾಪುರ: ತೋಟದಲ್ಲಿ ಸುಗಂಧರಾಜ ಹೂ ಕೀಳುವಾಗ ಹಾವು ಕಚ್ಚಿ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಹೊಸಹಳ್ಳಿ ಸಮೀಪದ ಪಚ್ಚಾರ್ಲಳ್ಳಿ…
ಕರ್ನಾಟಕ ಕಂಡ ಧೀಮಂತ ನಾಯಕ, ಮಾಜಿ ಮುಖ್ಯಮಂತ್ರಿ ಡಿ.ದೇವರಾಜ ಅರಸು ಅವರ ಜನಪರ ಯೋಜನೆಗಳು, ಆಶೋತ್ತರಗಳಿಗೆ ನಾವೆಲ್ಲರೂ ಧ್ವನಿಯಾಗಿ ಮುಂದಿನ…
ಮನೆಯಲ್ಲಿ ಆಟವಾಡಿಕೊಂಡು ಕಾಲ ಕಳೆಯುತ್ತಿದ್ದ ಪುಟ್ಟ ಕಂದಮ್ಮಗಳನ್ನು ಪೋಷಕರು ಉತ್ತಮ ಶಿಕ್ಷಣ ದೊರೆಯಲಿ ಎಂಬ ಆಶಯದಿಂದ ಅಂಗನವಾಡಿ ಕೇಂದ್ರಕ್ಕೆ ಕಳುಹಿಸುತ್ತಿದ್ದಾರೆ.…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…