ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ.
ಘಟನೆ ಕಳೆದ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ….
ಕರಡಿಪಾಳ್ಯದ ನಿವಾಸಿ ತಿರುಪತಯ್ಯ ಎಂಬ ರೈತ ಮನೆ ಪಕ್ಕದಲ್ಲೇ ಹಸುಗಳಿಗಾಗಿ ಶೆಡ್ ನಿರ್ಮಿಸಿ ಎರಡು ಹಸು, ಎರಡು ಕರುಗಳನ್ನು ಶೆಡ್ ನಲ್ಲಿ ಬಿಟ್ಟಿದ್ದರು. ಕಳೆದ ರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಕರು ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ…
ಘಟನೆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಇರಿಸಲಾಗಿದೆ.
ಮೊನ್ನೆ ರಾತ್ರಿ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿಯಲ್ಲೂ ಸಹ ಕರುವಿನ ಮೇಲೆ ಚಿರತೆ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ತೂಬಗೆರೆ ಹೋಬಳಿಯ ಮಾಕಳಿ ಸಮೀಪದ ತೋಟದ ಮನೆಯಲ್ಲಿದ್ದ ನಾಯಿಯನ್ನು ಬೇಟೆಯಾಡಿದೆ. ಹೀಗೆ ಸದಾ ನಾಯಿ, ಮೇಕೆ, ಕುರಿ ಸೇರಿದಂತೆ ಜಾನುವಾರುಗಳ ಮೇಲೆ ಪದೇ ಪದೇ ಚಿರತೆ ದಾಳಿ ನಡೆಸಿ ಬಲಿ ಪಡೆಯುತ್ತಲೇ ಇದೆ…
ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದ ಹಾಗೆ ಸೂಕ್ತ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ…
ಡೇ ಕೇರ್........, ಮುದ್ದು ಕಂದಮ್ಮಗಳ ಹೊಣೆ ಕೆಲಸಗಾರರದ್ದೋ, ನಮ್ಮದೋ...... ಬೆಂಗಳೂರಿನಲ್ಲಿ ಪುಟ್ಟ ಮಕ್ಕಳನ್ನು ಆರೈಕೆ ಮಾಡುವ ಡೇಕೇರ್ ಎಂಬ ಪರಿಕಲ್ಪನೆಯ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ರೈಲ್ವೆ ಪೊಲೀಸ್ ಠಾಣೆ ವ್ಯಾಪ್ತಿಯ ಒಡ್ಡರಹಳ್ಳಿ ಮತ್ತು ಮಾಕಳೀದುರ್ಗ ರೈಲು ನಿಲ್ದಾಣಗಳ ನಡುವಿನ ಮಾಕಳಿ ಗೋಶಾಲೆ ಸಮೀಪದ…
ಚಿಕ್ಕಬಳ್ಳಾಪುರ: ಪತ್ನಿಯ ಶೀಲದ ಬಗ್ಗೆ ಅನುಮಾನ ಹಾಗೂ ಹಣಕಾಸಿನ ವಿಚಾರಕ್ಕೆ ಸಂಬಂಧಿಸಿದ ಕುಟುಂಬ ಕಲಹದ ಹಿನ್ನೆಲೆಯಲ್ಲಿ ಗೃಹಿಣಿಯನ್ನು ಪತಿಯೇ ಕೊಲೆ…
ಚಿಂತಾಮಣಿ: ಕಳೆದ ಕೆಲವು ದಿನಗಳಿಂದ ನಡೆಯುತ್ತಿದ್ದ ಕೌಟುಂಬಿಕ ಕಲಹ ಕೊನೆಗೆ ಭೀಕರ ತಿರುವು ಪಡೆದು, ವ್ಯಕ್ತಿಯೊಬ್ಬ ತನ್ನ ಪತ್ನಿ ಹಾಗೂ…
ದೊಡ್ಡಬಳ್ಳಾಪುರ: ಹೈನುಗಾರಿಕೆಗೆ ಅಗತ್ಯವಾದ ಹಿಂಡಿ, ಬೂಸ, ಮೇವು ಸೇರಿದಂತೆ ಕಚ್ಚಾ ವಸ್ತುಗಳ ಬೆಲೆ ನಿರಂತರ ಏರಿಕೆಯಾಗುತ್ತಿರುವ ಹಿನ್ನೆಲೆಯಲ್ಲಿ ರೈತರ ಸಂಕಷ್ಟವನ್ನು…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಜು.7 ರಂದು 66/11 ಕೆವಿ ಡಿಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ F15-Tropical Flavours ಮತ್ತು 220/66/11ಕೆವಿ…