ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ.
ಘಟನೆ ಕಳೆದ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ….
ಕರಡಿಪಾಳ್ಯದ ನಿವಾಸಿ ತಿರುಪತಯ್ಯ ಎಂಬ ರೈತ ಮನೆ ಪಕ್ಕದಲ್ಲೇ ಹಸುಗಳಿಗಾಗಿ ಶೆಡ್ ನಿರ್ಮಿಸಿ ಎರಡು ಹಸು, ಎರಡು ಕರುಗಳನ್ನು ಶೆಡ್ ನಲ್ಲಿ ಬಿಟ್ಟಿದ್ದರು. ಕಳೆದ ರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಕರು ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ…
ಘಟನೆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಇರಿಸಲಾಗಿದೆ.
ಮೊನ್ನೆ ರಾತ್ರಿ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿಯಲ್ಲೂ ಸಹ ಕರುವಿನ ಮೇಲೆ ಚಿರತೆ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ತೂಬಗೆರೆ ಹೋಬಳಿಯ ಮಾಕಳಿ ಸಮೀಪದ ತೋಟದ ಮನೆಯಲ್ಲಿದ್ದ ನಾಯಿಯನ್ನು ಬೇಟೆಯಾಡಿದೆ. ಹೀಗೆ ಸದಾ ನಾಯಿ, ಮೇಕೆ, ಕುರಿ ಸೇರಿದಂತೆ ಜಾನುವಾರುಗಳ ಮೇಲೆ ಪದೇ ಪದೇ ಚಿರತೆ ದಾಳಿ ನಡೆಸಿ ಬಲಿ ಪಡೆಯುತ್ತಲೇ ಇದೆ…
ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದ ಹಾಗೆ ಸೂಕ್ತ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ…
ದೊಡ್ಡಬಳ್ಳಾಪುರ–ನೆಲಮಂಗಲ ಮುಖ್ಯ ರಸ್ತೆಯ ಅರಳುಮಲ್ಲಿಗೆ ಕೆರೆ ಏರಿ ಮೇಲೆ ಕಳೆದರಾತ್ರಿ ಕಾರು ಹಾಗೂ ಅಶೋಕ್ ಲೇಲ್ಯಾಂಡ್ ಸರಕು ವಾಹನದ ನಡುವೆ…
ಉಡುಪಿ: ಉಡುಪಿ ಜಿಲ್ಲೆಯ ಕೋಟದಲ್ಲಿ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತು, ಕನ್ನಡ ಸಾಹಿತ್ಯ ಪರಿಷತ್ತು ಹಾಗೂ ರಾಜ್ಯ ಜ್ಞಾನಗಂಗಾ ಸಾಹಿತ್ಯ…
ಬೆಂಗಳೂರು: ರಾಜ್ಯದ ಸಾರ್ವಜನಿಕರಿಗೆ ಅಗತ್ಯ ಪ್ರಮಾಣಪತ್ರಗಳು ಮತ್ತು ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಒದಗಿಸುವ ನಾಡಕಚೇರಿ ಸೇವೆ ಕಳೆದ ಕೆಲವು…
ದೊಡ್ಡಬಳ್ಳಾಪುರ: ತಾಲೂಕಿನ ಮಧುರನಹೊಸಹಳ್ಳಿ ಗ್ರಾಮದಲ್ಲಿ ವರ್ಷದ ಮೊದಲ ಹಬ್ಬವೆಂದು ಪರಿಗಣಿಸಲ್ಪಡುವ ಆಷಾಡ ಏಕಾದಶಿಯನ್ನು ಭಕ್ತಿ, ಸಂಭ್ರಮ ಹಾಗೂ ಸಾಂಪ್ರದಾಯಿಕ ವೈಭವದೊಂದಿಗೆ…
ದೊಡ್ಡಬಳ್ಳಾಪುರ: ಬಾಶೆಟ್ಟಿಹಳ್ಳಿ ಸಮೀಪದ ಯಲಹಂಕ–ಹಿಂದೂಪುರ ರಾಷ್ಟ್ರೀಯ ಹೆದ್ದಾರಿಯಲ್ಲಿ ಯೂ-ಟರ್ನ್ ಪಡೆಯುವ ವೇಳೆ ಟ್ರಕ್ ಏಕಾಏಕಿ ಕೆಟ್ಟು ನಿಂತ ಪರಿಣಾಮ ಕೆಲಕಾಲ…
ಬೆಂಗಳೂರು ಗ್ರಾಮಾಂತರ: ರಾಜ್ಯದ ಪ್ರಮುಖ ಸಂಪರ್ಕ ಮಾರ್ಗಗಳಲ್ಲಿ ಒಂದಾಗಿರುವ 84 ಕಿ.ಮೀ. ಉದ್ದದ ದಾಬಸ್ಪೇಟೆ–ಹೊಸಕೋಟೆ ರಾಷ್ಟ್ರೀಯ ಹೆದ್ದಾರಿ-648ರಲ್ಲಿ ಸಾರ್ವಜನಿಕರ ಸುರಕ್ಷಿತ…