ಕೊಟ್ಟಿಗೆಯಲ್ಲಿದ್ದ ಕರುವಿನ ಮೇಲೆ ಚಿರತೆ ದಾಳಿ ನಡೆಸಿ ಬಲಿ ಪಡೆದಿರುವ ಘಟನೆ ದೊಡ್ಡಬಳ್ಳಾಪುರ ತಾಲೂಕಿನ ಕರಡಿಪಾಳ್ಯದಲ್ಲಿ ನಡೆದಿದೆ.
ಘಟನೆ ಕಳೆದ ರಾತ್ರಿ ನಡೆದಿದ್ದು, ಇಂದು ಮುಂಜಾನೆ ಬೆಳಕಿಗೆ ಬಂದಿದೆ….
ಕರಡಿಪಾಳ್ಯದ ನಿವಾಸಿ ತಿರುಪತಯ್ಯ ಎಂಬ ರೈತ ಮನೆ ಪಕ್ಕದಲ್ಲೇ ಹಸುಗಳಿಗಾಗಿ ಶೆಡ್ ನಿರ್ಮಿಸಿ ಎರಡು ಹಸು, ಎರಡು ಕರುಗಳನ್ನು ಶೆಡ್ ನಲ್ಲಿ ಬಿಟ್ಟಿದ್ದರು. ಕಳೆದ ರಾತ್ರಿ ಶೆಡ್ ಗೆ ನುಗ್ಗಿದ ಚಿರತೆ ಕರು ಮೇಲೆ ದಾಳಿ ನಡೆಸಿ ಬಲಿ ಪಡೆದಿದೆ…
ಘಟನೆ ಬಗ್ಗೆ ಅರಣ್ಯ ಇಲಾಖೆ ಗಮನಕ್ಕೆ ತರಲಾಗಿತ್ತು. ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಚಿರತೆ ಸೆರೆ ಹಿಡಿಯಲು ಗ್ರಾಮದಲ್ಲಿ ಬೋನ್ ಇರಿಸಲಾಗಿದೆ.
ಮೊನ್ನೆ ರಾತ್ರಿ ದೊಡ್ಡಬೆಳವಂಗಲ ಹೋಬಳಿಯ ಗುಂಡ್ಲಹಳ್ಳಿಯಲ್ಲೂ ಸಹ ಕರುವಿನ ಮೇಲೆ ಚಿರತೆ ದಾಳಿ ನಡೆಸಿತ್ತು. ನಿನ್ನೆ ರಾತ್ರಿ ತೂಬಗೆರೆ ಹೋಬಳಿಯ ಮಾಕಳಿ ಸಮೀಪದ ತೋಟದ ಮನೆಯಲ್ಲಿದ್ದ ನಾಯಿಯನ್ನು ಬೇಟೆಯಾಡಿದೆ. ಹೀಗೆ ಸದಾ ನಾಯಿ, ಮೇಕೆ, ಕುರಿ ಸೇರಿದಂತೆ ಜಾನುವಾರುಗಳ ಮೇಲೆ ಪದೇ ಪದೇ ಚಿರತೆ ದಾಳಿ ನಡೆಸಿ ಬಲಿ ಪಡೆಯುತ್ತಲೇ ಇದೆ…
ಕಾಡು ಪ್ರಾಣಿಗಳು ಕಾಡಿನಿಂದ ನಾಡಿಗೆ ಬರದ ಹಾಗೆ ಸೂಕ್ತ ಕ್ರಮಗಳನ್ನು ಅರಣ್ಯ ಇಲಾಖೆ ತೆಗೆದುಕೊಳ್ಳಬೇಕು ಎಂದು ಜನ ಒತ್ತಾಯಿಸಿದ್ದಾರೆ…
ಬೆಂಗಳೂರು: ಕರ್ನಾಟಕ ಪೊಲೀಸ್ ಇಲಾಖೆಯ ಗತವೈಭವಕ್ಕೆ ಸಾಕ್ಷಿಯಾಗಬಲ್ಲ ಸುಮಾರು 185 ವರ್ಷಗಳಷ್ಟು ಹಳೆಯದಾದ ಅಪರೂಪದ ಪೊಲೀಸ್ ಬಿಲ್ಲೆಯೊಂದು ಬೆಳಕಿಗೆ ಬಂದಿದೆ.…
ನಾಗಮಂಗಲ: ಮಂಡ್ಯ ಜಿಲ್ಲೆಯ ನಾಗಮಂಗಲ ತಾಲೂಕಿನ ಕನ್ಯಾಘಟ್ಟ ಗ್ರಾಮದಲ್ಲಿ ನೂತನವಾಗಿ ನಿರ್ಮಿಸಿರುವ ಮಹಾಗಣಪತಿ ದೇವಸ್ಥಾನದ ಲೋಕಾರ್ಪಣೆ ಸಮಾರಂಭದಲ್ಲಿ ಮಾತನಾಡಿದ ಜಲಸಂಪನ್ಮೂಲ…
ದೇವನಹಳ್ಳಿ: ಮನೆ ಮಾಲೀಕರು ಮನೆಯಲ್ಲಿದ್ದ ಸಂದರ್ಭದಲ್ಲೇ ಕಳ್ಳತನ ನಡೆಸಿ ಪರಾರಿಯಾಗಿದ್ದ ಆರೋಪಿಯನ್ನು ವಿಜಯಪುರ ಪೊಲೀಸರು ಕಳ್ಳತನ ನಡೆದ 24 ಗಂಟೆಯೊಳಗೆ…
ದೊಡ್ಡಬಳ್ಳಾಪುರ: ತಾಲೂಕಿನ ಸೋಮಶೆಟ್ಟಿಹಳ್ಳಿ ಗ್ರಾಮದಲ್ಲಿ ತಡರಾತ್ರಿ ಕೋಳಿಫಾರ್ಮ್ಗೆ ಚಿರತೆ ದಾಳಿ ನಡೆಸಿರುವ ಶಂಕೆ ವ್ಯಕ್ತವಾಗಿದ್ದು, 950ಕ್ಕೂ ಅಧಿಕ ಕೋಳಿಮರಿಗಳು…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರದ ನೂತನ ಸದಸ್ಯರಾಗಿ ಆಯ್ಕೆಯಾಗಿರುವ ಎಸ್.ಡಿ. ಮುನಿರಾಜು ಅವರನ್ನು ತೂಬಗೆರೆ ಯುವ ಕಾಂಗ್ರೆಸ್ ಸಮಿತಿ ವತಿಯಿಂದ…
ದೇವನಹಳ್ಳಿ: ವಿಯೆಟ್ನಾಂನ ಹಾನೊಯ್ ನಗರದಿಂದ ಬೆಂಗಳೂರಿಗೆ ವಿಮಾನದ ಮೂಲಕ ಹೈಡ್ರೋಫೋನಿಕ್ ಗಾಂಜಾ ಕಳ್ಳಸಾಗಣೆ ಮಾಡುತ್ತಿದ್ದ ಆರೋಪಿಯನ್ನು ದೇವನಹಳ್ಳಿ ಕೆಂಪೇಗೌಡ ಅಂತರರಾಷ್ಟ್ರೀಯ…