ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಟಿಪ್ಪರ್ ಹಾಗೂ ಬೈಕ್ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿ ಒಂದೇ ಗ್ರಾಮದ ನಾಲ್ವರು ಯುವಕರು ಮೃತಪಟ್ಟಿರುವಂತಹ ಹೃದಯವಿದ್ರಾವಕ ಘಟನೆ ಚಿಕ್ಕಬಳ್ಳಾಪುರ…
ಅಭಿಮಾನಿಗಳ ಅತಿರೇಕ.... ಹುಚ್ಚುತನದ ಪರಮಾವಧಿ..... ದಚ್ಚು - ಕಿಚ್ಚ. (ದರ್ಶನ್ - ಸುದೀಪ್) + (ಡೆವಿಲ್ - ಮಾರ್ಕ್)........ ಅವರ…
ದಕ್ಷಿಣ ಭಾರತದಲ್ಲಿ ನಾಗರಾಧನೆಗೆ ಸುಪ್ರಸಿದ್ಧಿ ಪಡೆದಿರುವ ಘಾಟಿ ಸುಬ್ರಹ್ಮಣ್ಯ ಸ್ವಾಮಿಯ ಬ್ರಹ್ಮರಥೋತ್ಸವ ಸಾವಿರಾರು ಭಕ್ತಾದಿಗಳ ಸಮ್ಮುಖದಲ್ಲಿಂದು ಅದ್ಧೂರಿಯಾಗಿ ನೆರವೇರಿತು. ತಾಲೂಕಿನ…
ಕ್ರಿಸ್ಮಸ್ ಮತ್ತು ಜೀಸಸ್, ಪ್ರೀತಿ ಮತ್ತು ಸೇವೆ.......... ಜಗತ್ತಿನ ಬೆಳಕಿನ ಹಬ್ಬ - ಶಾಂತಿಯ ಸಂದೇಶ ಎಲ್ಲೆಡೆಯೂ ರವಾನೆಯಾಗಲಿ..... ಯೇಸುಕ್ರಿಸ್ತನ…
ಎಲ್ಲರನ್ನು ಬೆಚ್ಚಿಬೀಳಿಸುವಂತಹ ಭೀಕರ ರಸ್ತೆ ಅಪಘಾತವೊಂದು ಚಿತ್ರದುರ್ಗದ ಬಳಿ ನಡೆದಿದ್ದು, ಬೆಂಗಳೂರಿನಿಂದ ಗೋಕರ್ಣಕ್ಕೆ ತೆರಳುತ್ತಿದ್ದ 'ಸೀ ಬರ್ಡ್' ಖಾಸಗಿ ಬಸ್…
ತಾಲೂಕಿನ ಇತಿಹಾಸ ಪ್ರಸಿದ್ಧ ಶ್ರೀ ಘಾಟಿ ಸುಬ್ರಹ್ಮಣ್ಯ ಸ್ವಾಮಿ ಕ್ಷೇತ್ರದಲ್ಲಿ ಸ್ವಸ್ತಿಶ್ರೀ ವಿಜಯಾಭ್ಯುದಯ ಶಾಲಿವಾಹನ ಶಕ ವರ್ಷಂಗಳು 1946ಕ್ಕೆ ಸರಿಯಾದ…