ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಸುಪ್ರಭಾತ.......... ಭಾರತೀಯ ಸಮಾಜ ಎಂಬುದು ಮಧ್ಯಮ ವರ್ಗದ ಸಂತೆ ಇದ್ದಂತೆ. ಇಲ್ಲಿ ಬಹುತೇಕ ಮಧ್ಯಮ ವರ್ಗದವರೇ ಅತಿ ಹೆಚ್ಚು ಮಧ್ಯಮ…
ಪ್ರತಿ ಮನೆಗೂ ಪೊಲೀಸರು ಭೇಟಿ ನೀಡಿ, ಜನರ ಸಮಸ್ಯೆಗಳನ್ನು ಆಲಿಸಿ, ಅಗತ್ಯ ಕ್ರಮ ಕೈಗೊಳ್ಳಲಿದ್ದಾರೆ. ಇದರಿಂದಾಗಿ ಕಾನೂನಿಗೆ ಸಂಬಂಧಿತ ಸಮಸ್ಯೆಗಳ…
"ನೀವು ಮಾಡುವ ಕೆಲಸವನ್ನು ಪ್ರೀತಿಸಿ. ನಿಮಗೆ ಗೊತ್ತಿಲ್ಲದ ವಿಷಯಗಳನ್ನು ಕಲಿಯುವ ಕಡೆಗೆ ಗಮನ ಕೇಂದ್ರೀಕರಿಸಿ ಮತ್ತು ಜೀವನಪರ್ಯಂತ ಕಲಿಯುತ್ತಲೇ ಇರಿ,…
ಅಣ್ಣನ ಮೂವರು ಮಕ್ಕಳ ಮೇಲೆ ತಮ್ಮನೇ ಕ್ರೂರವಾಗಿ ಹಲ್ಲೆ ನಡೆಸಿರುವ ಘಟನೆ ಬೆಂಗಳೂರಿನ ಕಮ್ಮಸಂದ್ರದಲ್ಲಿ ನಡೆದಿದೆ. ಘಟನೆಯಲ್ಲಿ 9 ವರ್ಷದ…
ಜು.22ರ ಮಂಗಳವಾರ ದೊಡ್ಡಬಳ್ಳಾಪುರದ ರಾಮಯ್ಯನಪಾಳ್ಯ ಸಮೀಪವಿರುವ ಶ್ರೀ ಆದಿಶಕ್ತಿ ರೇಣುಕಾ ಯಲ್ಲಮ್ಮ ದೇವಸ್ಥಾನದಲ್ಲಿ ಪೂಜೆಗೆಂದು ಬಿಗ್ ಬಾಸ್ ವಿನ್ನರ್ ನಟ…
ಹಿಂದುಳಿದವರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಜಾತಿ ಸಮೀಕ್ಷೆ ಅನಿವಾರ್ಯವಾಗಿದ್ದು, ಈ ದಿಸೆಯಲ್ಲಿ ದೇಶದ ಪ್ರತಿ ನಾಗರಿಕನ ಆರ್ಥಿಕ, ಸಾಮಾಜಿಕ, ಶೈಕ್ಷಣಿಕ,…