ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಕೃತಕ ಬುದ್ಧಿಮತ್ತೆ ( ಆರ್ಟಿಫಿಷಿಯಲ್ ಇಂಟಲಿಜೆನ್ಸ್ - Artificial intelligence ).........., ದೆಹಲಿಯಲ್ಲಿ ನಡೆದ ವಿಶ್ವಮಟ್ಟದ ಕೃತಕ ಬುದ್ಧಿಮತ್ತೆ ಸಮ್ಮೇಳನಾದ…
ಬಾಣಸವಾಡಿ ರೈಲ್ವೇ ನಿಲ್ದಾಣದ ಬಳಿಯ ಅಂಡರ್ ಪಾಸ್ನಲ್ಲಿ ಹೆಚ್ಚಿರುವ ಸಂಚಾರ ದಟ್ಟಣೆಗೆ ಪರಿಹಾರವಾಗಿ ಸಮೀಪದಲ್ಲೇ ನಿರ್ಮಿಸಲು ಉದ್ದೇಶಿಸಿರುವ ಮತ್ತೊಂದು ಅಂಡರ್…
ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ಸೇವೆಗಳು ಒಂದೇ ಸೂರಿನಡಿ ಒದಗಿಸಲು ನಗರ ಸ್ಥಳೀಯ ಸಂಸ್ಥೆಗಳಲ್ಲಿ ಕರ್ನಾಟಕ ಒನ್ ಫ್ರಾಂಚೈಸಿ ಕೇಂದ್ರ…
ಶಿವಾಜಿ - ಟಿಪ್ಪು.......... ಇತಿಹಾಸವನ್ನು ತಪ್ಪಾಗಿ ಅರ್ಥ ಮಾಡಿಕೊಂಡು ಹೀಗೆ ಕಚ್ಚಾಡುತ್ತಲೇ ಇರಿ........ ನೀವು ಡಿಜೆ ಸೌಂಡ್ ಹಾಕಿಕೊಂಡು ಮಸೀದಿಗಳ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದ್ದು, ಈ ಕಾರ್ಯಕ್ರಮಕ್ಕೆ ಮುಖ್ಯ…
ಇಂದಿನಿಂದ ದೊಡ್ಡಬಳ್ಳಾಪುರ ನಗರದ ಭಗತ್ ಸಿಂಗ್ ಕ್ರೀಡಾಂಗಣದಲ್ಲಿ "ದೊಡ್ಡಬಳ್ಳಾಪುರ ಸ್ಯಾರಿ ಸಂತೆ" ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿದೆ. ಇಂದಿನಿಂದ ಫೆ.22ರವರೆಗೆ "ದೊಡ್ಡಬಳ್ಳಾಪುರ…