ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಬೆಂಗಳೂರು ಗ್ರಾಮಾಂತರ: ಮುಂಗಾರು ಕೃಷಿ ಚಟುವಟಿಕೆಗಳು ಚುರುಕುಗೊಂಡಿರುವ ನಡುವೆಯೇ ರೈತರಿಗೆ ಯೂರಿಯಾ ರಸಗೊಬ್ಬರ ವಿತರಣೆಯಲ್ಲಿ ಹೊಸ ನಿಯಮ ಜಾರಿಯಾಗಿದೆ. ಯೂರಿಯಾ…
ದೊಡ್ಡಬಳ್ಳಾಪುರ: ಒಂದೇ ರಾತ್ರಿ ಎರಡು ಸ್ಥಳಗಳಲ್ಲಿ ಶ್ರೀಗಂಧದ ಮರಗಳನ್ನು ಕಳ್ಳರು ಕತ್ತರಿಸಿ ಕದ್ದೊಯ್ದಿರುವ ಘಟನೆ ದೊಡ್ಡಬಳ್ಳಾಪುರ ನಗರ ಪೊಲೀಸ್ ಠಾಣಾ…
ದೊಡ್ಡಬಳ್ಳಾಪುರ: ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ ಪ್ರದೇಶದ ಓಬದೇನಹಳ್ಳಿ ರಸ್ತೆಯ ಕಾಂತಿ ಸ್ವೀಟ್ಸ್ ಮುಂಭಾಗ ಸೋಮವಾರ ಬೆಳಗ್ಗೆ ಸಂಭವಿಸಿದ ಭೀಕರ ರಸ್ತೆ…
ಬಾಶೆಟ್ಟಿಹಳ್ಳಿ ಬಳಿ ಭೀಕರ ಅಪಘಾತವಾಗಿ ಮಹಿಳೆ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ. ಮತ್ತೋರ್ವ ಯುವತಿಗೆ ಗಂಭೀರವಾಗಿ ಗಾಯಗೊಂಡಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ಬಾಶೆಟ್ಟಿಹಳ್ಳಿ ಕೈಗಾರಿಕಾ…
ದೊಡ್ಡಬಳ್ಳಾಪುರ: ಕ್ಷುಲ್ಲಕ ಕಾರಣಕ್ಕೆ ಹೆಣ್ಣು ಕೊಟ್ಟ ಮಾವನನ್ನೇ ಅಳಿಯ ಕೊಲೆಗೈದ ಘಟನೆ ದೊಡ್ಡಬಳ್ಳಾಪುರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯ ನೇರಳೇಘಟ್ಟ…
ಗೌರವಾನ್ವಿತ ಮುಖ್ಯಮಂತ್ರಿ ಶ್ರೀ ಡಿಕೆ ಶಿವಕುಮಾರ್ ಅವರೇ, ಪ್ರಜಾಪ್ರಭುತ್ವ ಎಂಬ ಪರಿಕಲ್ಪನೆಯ ಅತ್ಯದ್ಭುತ ಫಲಿತಾಂಶವೆಂದರೆ ಯಾವುದೋ ಹಳ್ಳಿಯಲ್ಲಿ, ಎಲ್ಲಿಯೋ ಹುಟ್ಟಿದ…