ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಬೆಂಗಳೂರು ಗ್ರಾಮಾಂತರ: ಬೂತ್ ಮಟ್ಟದ ಅಧಿಕಾರಿ (ಬಿಎಲ್ಒ) ಕೆಲಸವನ್ನು ಅಂಗನವಾಡಿ ನೌಕರರಿಗೆ ನೀಡುವುದನ್ನು ತಕ್ಷಣವೇ ಸ್ಥಗಿತಗೊಳಿಸಬೇಕು ಎಂದು ರಾಜ್ಯ ಅಂಗನವಾಡಿ…
ಟ್ರಂಪ್ ಕಾರ್ಡ್....... ವಿಶ್ವದ ಕ್ರೀಡಾ ಸಂಸ್ಕೃತಿಯ ಘನತೆಗೆ ಚ್ಯುತಿ ತಂದ ಡೊನಾಲ್ಡ್ ಟ್ರಂಪ್... ವಿಶ್ವದ ಕ್ರೀಡಾ ಸಂಸ್ಕೃತಿಗೆ ಅವಮಾನ ಮಾಡಿದ,…
ದೊಡ್ಡಬಳ್ಳಾಪುರ: ತಾಲೂಕಿನ ಚಿಕ್ಕಮಧುರೆ ಗ್ರಾಮದ ಶನಿಮಹಾತ್ಮ ದೇವಾಲಯದ ಬಳಿ ಕಳೆದ ರಾತ್ರಿ ಸಂಭವಿಸಿದ ಕ್ಯಾಂಟರ್ ಅಪಘಾತದಲ್ಲಿ ರಸ್ತೆಬದಿಯ ಮೂರು-ನಾಲ್ಕು ಅಂಗಡಿಗಳು…
ಹಾಲಿನ ಖರೀದಿ ದರವನ್ನು ಪ್ರತಿ ಲೀಟರ್ಗೆ ರೂ. 10 ಹೆಚ್ಚಿಸಬೇಕು ಹಾಗೂ ಹಾಲು ಉತ್ಪಾದಕರಿಗೆ ನೀಡುತ್ತಿರುವ ಪ್ರೋತ್ಸಾಹಧನವನ್ನು ಹೆಚ್ಚಿಸಬೇಕು ಎಂದು…
ದೊಡ್ಡಬಳ್ಳಾಪುರ: ತಾಲೂಕಿನ ಅನಿಬೆಸೆಂಟ್ ಪಾರ್ಕ್ನಲ್ಲಿರುವ ಭಾರತ್ ಸ್ಕೌಟ್ಸ್ ಮತ್ತು ಗೈಡ್ಸ್ ತರಬೇತಿ ಕೇಂದ್ರವನ್ನು ಉನ್ನತೀಕರಿಸುವ ಕಾಮಗಾರಿಗೆ ಶಾಸಕ ಧೀರಜ್ ಮುನಿರಾಜ್…
ದೇವನಹಳ್ಳಿ: ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ತಾಲೂಕಿನ ಕೋಡಗುರ್ಕಿ ಗ್ರಾಮದ ಸಮೀಪದ ಪ್ರಖ್ಯಾತ ಪ್ರೆಸ್ಟೀಜ್ ಗಾಲ್ಫ್ಶೈರ್ ರೆಸಾರ್ಟ್ ವಿಲ್ಲಾಸ್ ಆವರಣದಲ್ಲಿ…