ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಗ್ರಾಮ ಪಂಚಾಯಿತಿಗಳ ಚುನಾವಣೆಗೆ ಮೀಸಲಾತಿ ಪ್ರಕಟವಾಗುತ್ತಿದ್ದಂತೆ ಗ್ರಾಮೀಣ ಭಾಗದಲ್ಲಿ ರಾಜಕೀಯ ಚಟುವಟಿಕೆಗಳು ಗರಿಗೆದರಿವೆ. ಯಾವ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯ ಮೂಲಕ ಹಾದುಹೋಗುವ ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳ ಸರ್ವೀಸ್ ರಸ್ತೆಗಳು ದಿನದಿಂದ ದಿನಕ್ಕೆ ಭಾರಿ…
ಬೆಂಗಳೂರು ಗ್ರಾಮಾಂತರ ಜಿಲ್ಲೆಯಲ್ಲಿ ಕ್ಷಯರೋಗ (ಟಿಬಿ) ನಿಯಂತ್ರಣಕ್ಕೆ ಆರೋಗ್ಯ ಇಲಾಖೆ ಹಲವು ಹಂತಗಳಲ್ಲಿ ತಪಾಸಣೆ ಹಾಗೂ ಚಿಕಿತ್ಸಾ ಕ್ರಮಗಳನ್ನು ಕೈಗೊಂಡಿದ್ದರೂ,…
ದೊಡ್ಡಬಳ್ಳಾಪುರ: ನಾಗರಾಧನೆಗೆ ಪ್ರಸಿದ್ಧವಾಗಿರುವ ತಾಲೂಕಿನ ಘಾಟಿ ಸುಬ್ರಹ್ಮಣ್ಯ ಕ್ಷೇತ್ರದಲ್ಲಿ ಸೋಮವಾರ ನಾಗರ ಪಂಚಮಿ ಹಬ್ಬವನ್ನು ಭಕ್ತಿಭಾವದಿಂದ ಆಚರಿಸಲಾಯಿತು. ನಾಗರ ಪಂಚಮಿ…
ದೊಡ್ಡಬಳ್ಳಾಪುರ: ನಗರದ 66/11 ಕೆವಿ ಡಿ.ಕ್ರಾಸ್ ವಿದ್ಯುತ್ ಉಪಕೇಂದ್ರದಲ್ಲಿ ತ್ರೈಮಾಸಿಕ ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿರುವ ಹಿನ್ನೆಲೆಯಲ್ಲಿ ಆ.18ರಂದು ಬೆಳಿಗ್ಗೆ 10ರಿಂದ…
ದೊಡ್ಡಬಳ್ಳಾಪುರ: ದೊಡ್ಡಬಳ್ಳಾಪುರ ಯೋಜನಾ ಪ್ರಾಧಿಕಾರಕ್ಕೆ ನೂತನ ಅಧ್ಯಕ್ಷರು ಹಾಗೂ ಸದಸ್ಯರನ್ನು ನೇಮಕ ಮಾಡಲಾಗಿದೆ. ಮಾಜಿ ಶಾಸಕ ಟಿ.ವೆಂಕಟರಮಣಯ್ಯ ಅವರನ್ನು ಅಧ್ಯಕ್ಷರಾಗಿ,…