ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.
ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.
ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.
ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.
ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…
ದೃಷ್ಟಿಕೋನ........ ಗೆಲ್ಲುತ್ತಲೇ ಇರುವ ರಾಜಕಾರಣಿಗಳು, ಸೋಲುತ್ತಲೇ ಇರುವ ಮತದಾರರು, ಕನಸು ಕಾಣುತ್ತಲೇ ಇರುವ ಬಡ, ಮಧ್ಯಮ ವರ್ಗದವರು, ಅಧಿಕ ಪ್ರಸಂಗಿಗಳಂತೆ…
ಅಕ್ರಮ ಸಂಬಂಧಕ್ಕೆ ಒಪ್ಪದ ಮಹಿಳೆಯ ಖಾಸಗಿ ಅಂಗವನ್ನು ತುಳಿದು ದೌರ್ಜನ್ಯ ನಡೆಸಿ ಮಹಿಳೆಯ ಸಾವಿಗೆ ಕಾರಣನಾದ ಕಾಮುಕನನ್ನು ಪೊಲೀಸರು ಬಂಧಿಸಿರುವ…
ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಮೇ.5ರಂದು 66/11 ಕೆವಿ ಡಿ.ಕ್ರಾಸ್ ಉಪ ವಿದ್ಯುತ್ ಕೇಂದ್ರದಿಂದ ಹೊರವೊಮ್ಮುವ DF17-ನಂದಿ ಮೋರಿ, DF18-ಬೀಡಿಕೆರೆ ಫೀಡರ್ಗಳಲ್ಲಿ ವಿದ್ಯುತ್…
ಗೆದ್ದವರಿಗೆ ಅಭಿನಂದಿಸುತ್ತಾ, ಸೋತವರಿಗೆ ಸಾಂತ್ವನ ಹೇಳುತ್ತಾ, ಮತದಾರರಿಗೆ ಧನ್ಯವಾದಗಳನ್ನು ಅರ್ಪಿಸುತ್ತಾ, ಸಂವಿಧಾನಕ್ಕೆ ಸಲಾಂ ಹೊಡೆಯುತ್ತಾ, ನಮ್ಮ ಮುಗ್ದತೆ ಮತ್ತು ಮೂರ್ಖತನ…
ಶ್ರಮಿಕ ವರ್ಗದವರು ಹಾಗೂ ಅವರ ಅವಲಂಬಿತರಿಗೆ ಉಚಿತ ವೈದ್ಯಕೀಯ ಸೇವೆಗಳನ್ನು ಒದಗಿಸುವಲ್ಲಿ ಇಎಸ್ಐಸಿ ಆಸ್ಪತ್ರೆಯು ವರದಾನವಾಗಲಿದೆ. ಎಲ್ಲಾ ಕಾರ್ಮಿಕರು ವೈದ್ಯಕೀಯ…
. ಕೊನಘಟ್ಟ ಪ್ರೀಮಿಯರ್ ಲೀಗ್(ಕೆಪಿಎಲ್ ಸೀಸನ್-1) ನ್ನು ಕೊನಘಟ್ಟ ಗ್ರಾಮದಲ್ಲಿ ಆಯೋಜನೆ ಮಾಡಲಾಗಿತ್ತು. ಅಂತಿಮ ಹಣಾಹಣಿಯಲ್ಲಿ 'ಎ' ತಂಡವನ್ನು ಮಣಿಸಿ…