ಚಿರತೆ ದಾಳಿಗೆ ನಾಯಿ ಬಲಿ: ಕೂದಲೆಳೆಯಲ್ಲಿ ಪಾರಾದ ರೈತ

ಚಿರತೆ ದಾಳಿಗೆ ನಾಯಿ ಬಲಿಯಾಗಿರುವ ಘಟನೆ ಇಂದು ಬೆಳಗ್ಗೆ ಸುಮಾರು 7 ಗಂಟೆಯಲ್ಲಿ ದೊಡ್ಡಬಳ್ಳಾಪುರ ತಾಲೂಕಿನ ಸಾಸಲು ಹೋಬಳಿಯ ಲಿಂಗದವೀರನಹಳ್ಳಿ ಸಮೀಪ ನಡೆದಿದೆ.

ಲಿಂಗದವೀರನಹಳ್ಳಿ ನಿವಾಸಿ ರೈತ ಕೆಂಪಯ್ಯನವರು ಬೆಳಗ್ಗೆ ಎಂದಿನಂತೆ ಊರ ಹೊರವಲಯದಲ್ಲಿರುವ ತಮ್ಮ ತೋಟಕ್ಕೆ ಬಂದಿದ್ದಾರೆ. ಕೆಂಪಯ್ಯನವರ ಜೊತೆ ನಾಯಿ ಕೂಡ ಬಂದಿದೆ. ನಾಯಿಯನ್ನು ಬೇಟೆಯಾಡಲು ಹೊಂಚುಹಾಕಿ ಪೊದೆಯಲ್ಲಿ ಅಡಗಿ ಕುಳಿತಿದ್ದ ಚಿರತೆ, ನಾಯಿ ಬಂದ ಕೂಡಲೇ ನಾಯಿ ಮೇಲೆ ಎರಗಿ ಬಗೆದು ತಿಂದಿದೆ. ಜೊತೆಯಲ್ಲಿ ಬಂದಿದ್ದ ನಾಯಿ ಕಾಣೆಯಾಗಿದ್ದನ್ನು ಗಮನಿಸಿದ ಕೆಂಪಯ್ಯ, ಸುತ್ತಾಮುತ್ತಾ ಹುಡುಕಿದ್ದಾರೆ. ಪೊದೆಯೊಂದರಲ್ಲಿ ನಾಯಿಯನ್ನು ಭಕ್ಷಿಸುತ್ತಿದ್ದ ಚಿರತೆ ಕೆಂಪಯ್ಯನವರನ್ನು ಕಂಡು ನಾಯಿಯನ್ನು ಅರೆಬರೆತಿಂದು ಅಲ್ಲಿಂದ ಪರಾರಿಯಾಗಿದೆ.

ಚಿರತೆ ಪರಾರಿಯಾಗುತ್ತಿರುವ ದೃಶ್ಯವನ್ನು ಕಂಪಯ್ಯನವರು ಕಣ್ಣಾರೇ ಕಂಡು ಗಾಬರಿಯಾಗಿ ಕೂಗಿಕೊಂಡಿದ್ದಾರೆ. ಅದೃಷ್ಟವಶಾತ್ ಕೆಂಪಯ್ಯನವರು ಚಿರತೆ ದಾಳಿಯಿಂದ ಪಾರಾಗಿದ್ದಾರೆ.

ಇತ್ತೀಚೆಗೆ ಇವರದ್ದೇ ನಾಯಿ ನಾಪತ್ತೆಯಾಗಿತ್ತು. ಆ ನಾಯಿಯೂ ಸಹ ಚಿರತೆ ದಾಳಿಗೆ ಬಲಿಯಾಗಿರಬಹುದು ಎಂದು ಊಹಿಸಲಾಗಿದೆ.

ಚಿರತೆಯನ್ನು ಕೂಡಲೇ ಸೆರೆ ಹಿಡಿದು ಜನ ಜಾನುವಾರುಗಳ ಪ್ರಾಣ ರಕ್ಷಣೆ ಮಾಡಬೇಕೆಂದು ಅರಣ್ಯ ಇಲಾಖೆಯಲ್ಲಿ ಗ್ರಾಮಸ್ಥರು ಆಗ್ರಹಿಸಿದ್ದಾರೆ…

Ramesh Babu

Journalist

Recent Posts

ಬೆಸ್ಕಾಂ ವಿರುದ್ಧ ರೈತರ ಆಕ್ರೋಶ: 10 ತಾಸು ಗುಣಮಟ್ಟದ ವಿದ್ಯುತ್‌ಗೆ ಆಗ್ರಹ: ನಷ್ಟ ಬೆಳೆ, ಮೆಣಸಿನಕಾಯಿ ಹಾಗೂ ಜಾನುವಾರುಗಳ ಸಮೇತ ಪ್ರತಿಭಟನೆ

ಕೋಲಾರ: ಬರದಿಂದ ತತ್ತರಿಸಿರುವ ರೈತರ ಬೆಳೆಗಳನ್ನು ರಕ್ಷಿಸಲು ಕೃಷಿ ಪಂಪ್‌ಸೆಟ್‌ಗಳಿಗೆ ಪ್ರತಿದಿನ 10 ತಾಸು ಗುಣಮಟ್ಟದ ವಿದ್ಯುತ್ ಪೂರೈಸಬೇಕು. ಬೆಸ್ಕಾಂ…

48 minutes ago

ಘಾಟಿ ತೇರಿನಬೀದಿ ಒತ್ತುವರಿ ತೆರವು; ವ್ಯಾಪಾರಸ್ಥರಲ್ಲಿ ಆತಂಕ

ದೊಡ್ಡಬಳ್ಳಾಪುರ: ತಾಲೂಕಿನ ಪ್ರಸಿದ್ಧ ಪುಣ್ಯಕ್ಷೇತ್ರ ಘಾಟಿ ಸುಬ್ರಹ್ಮಣ್ಯ ದೇವಸ್ಥಾನದ ಮುಂಭಾಗದ ತೇರಿನಬೀದಿಯಲ್ಲಿ ಹಲವು ವರ್ಷಗಳಿಂದ ಕಾರ್ಯನಿರ್ವಹಿಸುತ್ತಿದ್ದ ಅಂಗಡಿ ಮಳಿಗೆಗಳನ್ನು ಒತ್ತುವರಿ…

7 hours ago

ಹೃದಯ ವೈಶಾಲ್ಯತೆ ಮತ್ತು ಶುದ್ಧತೆ…

" ಹೃದಯ ವಿಶಾಲವಾಗಿದ್ದರೆ ಮಾತ್ರ ಅಲ್ಲಿ ನಿಜವಾದ ಜ್ಞಾನ ಹೊಮ್ಮುತ್ತದೆ " ಸ್ವಾಮಿ ವಿವೇಕಾನಂದ....... ಜೊತೆಗೆ ಹೃದಯ ಅಥವಾ ಮನಸ್ಸು…

8 hours ago

ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ: ಪಿಡಿಒ ಗೌರಮ್ಮ

ಚಿಕ್ಕನಾಯಕನಹಳ್ಳಿ ಸೆ.07: ರೈತರ ಸಾರ್ಥಕ ಜೀವನಕ್ಕೆ ವಿಬಿ- ಜಿ ರಾಮ್ ಜಿ ನಾಂದಿ ಹಾಗಾಗಿ ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಕ್ಷಿ…

19 hours ago

ಅರ್ಹ ರೈತರು ಸೌಲಭ್ಯಗಳನ್ನು ಪಡೆದುಕೊಳ್ಳಿ : ಪಿಡಿಒ ರಂಜಿತ

ಚಿಕ್ಕನಾಯಕನಹಳ್ಳಿ ಸೆ.08: ಅರ್ಹ ರೈತರು ಸರ್ಕಾರದ ಮಹಾತ್ವಾಕಾಂಶಿ ಯೋಜನೆಯಾದ ವಿಕಸಿತ ಭಾರತ ಗ್ಯಾರಂಟಿ ಫಾರ್ ರೋಜ್ಗಾರ್ ಅಂಡ್ ಅಜೀವಿಕ ಮಿಷನ್…

19 hours ago

ಹೊರಗುತ್ತಿಗೆ ನೇಮಕಾತಿಯಲ್ಲೂ ಎಸ್‌ಸಿ, ಎಸ್‌ಟಿಗೆ ಮೀಸಲಾತಿ ಕಡ್ಡಾಯ- ಸಚಿವ ಕೆ.ಎಚ್ ಮುನಿಯಪ್ಪ

ಬೆಂಗಳೂರು: ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಗಳ ಅಭಿವೃದ್ಧಿಗಾಗಿ ಮೀಸಲಿಟ್ಟಿರುವ SCSP-TSP ಅನುದಾನವನ್ನು ಸಮರ್ಪಕವಾಗಿ ಬಳಸದ ಇಲಾಖೆಗಳ ಮುಂದಿನ ಹಣಕಾಸು…

19 hours ago